ನ್ಯೂಜಿಲೆಂಡ್‌ vs ಭಾರತ ODI: ಸಿರಾಜ್, ಅಯ್ಯರ್ ತಂಡಕ್ಕೆ ವಾಪಸ್‌; ಬುಮ್ರಾ, ಪಾಂಡ್ಯಗೆ ವಿಶ್ರಾಂತಿ!

Date:

ನ್ಯೂಜಿಲೆಂಡ್‌ ಮತ್ತು ಭಾರತ ಕ್ರಿಕೆಟ್‌ ತಂಡಗಳ ನಡುವೆ ಜನವರಿ 11ರಿಂದ ಮೂರು ಪಂದ್ಯಗಳ ಏಕದಿನ ಸರಣಿ ಆರಂಭವಾಗಲಿದೆ. ಭಾರತದಲ್ಲಿಯೇ ನಡೆಯಲಿರುವ ಸರಣಿಯನ್ನು ಟೀಮ್‌ ಇಂಡಿಯಾ ಗೆಲ್ಲುವ ನಿರೀಕ್ಷೆ ಅಭಿಮಾನಿಗಳಲ್ಲಿದೆ. ಈ ಸರಣಿಯಲ್ಲಿ ಭಾರತೀಯ ವೇಗಿ ಬೌಲರ್‌ ಮೊಹಮ್ಮದ್ ಸಿರಾಜ್ ಅವರು ತಂಡಕ್ಕೆ ಮರಳಿದ್ದಾರೆ. ಗಾಯಗಳ ಕಾರಣಕ್ಕಾಗಿ ಕಳೆದ ಮೂರು ತಿಂಗಳಿನಿಂದ ವಿಶ್ರಾಂತಿಯಲ್ಲಿದ್ದ ಏಕದಿನ ಉಪನಾಯಕ ಶ್ರೇಯಸ್ ಅಯ್ಯರ್ ಕೂಡ ತಂಡಕ್ಕೆ ‘ಕಮ್ ಬ್ಯಾಕ್’ ಮಾಡಿದ್ದಾರೆ. ಇನ್ನು, ಜಸ್ಪ್ರಿತ್ ಬುಮ್ರಾ ಮತ್ತು ಹಾರ್ದಿಕ್ ಪಾಂಡ್ಯಗೆ ವಿಶ್ರಾಂತಿ ನೀಡಲಾಗಿದ್ದು, ತಂಡದಲ್ಲಿ ಹೊರಗಿಡಲಾಗಿದೆ.

ಕಿವೀಸ್ ವಿರುದ್ಧದ ಏಕದಿನ ಸರಣಿಯು ಜನವರಿ 11ರಂದು ವಡೋದರಾದಲ್ಲಿ ಆರಂಭವಾಗುತ್ತದೆ. ಜನವರಿ 14ರಂದು ರಾಜ್‌ಕೋಟ್ ಮತ್ತು ಜನವರಿ 18ರಂದು ಇಂದೋರ್‌ನಲ್ಲಿ ಪಂದ್ಯಗಳು ನಡೆಯಲಿವೆ.

ಸಿರಾಜ್ ಅವರು ಆಸ್ಟ್ರೇಲಿಯಾದಲ್ಲಿ ನಡೆದ ಏಕದಿನ ಸರಣಿಯಲ್ಲಿ ಕೊನೆಯದಾಗಿ ಆಗಿದ್ದರು. ನಂತರದ ದಕ್ಷಿಣ ಆಫ್ರಿಕಾ ಜೊತೆಗಿನ ಟೂರ್ನಿಯಲ್ಲಿ ಅವರಿಗೆ ವಿಶ್ರಾಂತಿ ನೀಡಲಾಗಿತ್ತು. ಈವರೆಗೆ 47 ಏಕದಿನ ಪಂದ್ಯಗಳನ್ನು ಆಡಿರುವ ಸಿರಾಜ್, 24.67 ಸರಾಸರಿಯಲ್ಲಿ 73 ವಿಕೆಟ್‌ಗಳನ್ನು ಕಬಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಸಿರಾಜ್ ಅವರನ್ನು ದಕ್ಷಿಣ ಆಫ್ರಿಕಾ ಏಕದಿನ ಸರಣಿಯಿಂದ ಕೈಬಿಡಲಾಗಿಲ್ಲ. ಅವರಿಗೆ ವಿಶ್ರಾಂತಿ ನೀಡಲಾಯಿತು. ಅವರು ನಮ್ಮ ವೇಗಿ ಬೌಲರ್‌ಗಳ ಗುಂಪಿನಲ್ಲಿ ಒಬ್ಬರಾಗಿದ್ದಾರೆ. ಇತರ ವೇಗಿಗಳಿಗೆ ಅವಕಾಶ ನೀಡುವ ಉದ್ದೇಶದಿಂದ ಮತ್ತು ಬೌಲರ್‌ಗಳು ಫಿಟ್ ಮತ್ತು ಫ್ರೆಶ್ ಆಗಿರುವಂತೆ ನೋಡಿಕೊಳ್ಳುವ ಕಾರಣಕ್ಕಾಗಿ ಆಗ್ಗಾಗ್ಗೆ ಬದಲಾಯಿಸಲಾಗುತ್ತದೆ” ಎಂದು ಬಿಸಿಸಿಐ ಮೂಲಗಳು ತಿಳಿಸಿರುವುದಾಗಿ ಟೈಮ್ಸ್‌ ಆಫ್‌ ಇಂಡಿಯಾ ವರದಿ ಮಾಡಿದೆ.

ಇನ್ನು, ಅಯ್ಯರ್ ಅವರು ಅಕ್ಟೋಬರ್ 25 ರಂದು ಆಸ್ಟ್ರೇಲಿಯಾ ವಿರುದ್ಧದ ಮೂರನೇ ಏಕದಿನ ಪಂದ್ಯದಲ್ಲಿ ಡೈವಿಂಗ್ ಕ್ಯಾಚ್‌ಗೆ ಪ್ರಯತ್ನಿಸುವಾಗ ಗಾಯಗೊಂಡಿದ್ದರು. ಹೀಗಾಗಿ, ಅವರು ಕಳೆದ ಮೂರು ತಿಂಗಳುಗಳಿಂದ ವಿಶ್ರಾಂತಿಯಲ್ಲಿದ್ದರು. ಈಗ, ಅವರೂ ಕೂಡ ತಂಡಕ್ಕೆ ಮರಳಿದ್ದಾರೆ.

ಈ ಲೇಖನ ಓದಿದ್ದೀರಾ?: 2025ರಲ್ಲಿ ಧರ್ಮಾಧಾರಿತ ಹಿಂಸಾಚಾರ, ಗುಂಪು ದಾಳಿಗಳು ಹೆಚ್ಚಳ !- ವರದಿ

ಆಲ್‌ ರೌಂಡರ್ ಅಟಗಾರ ಹಾರ್ದಿಕ್ ಪಾಂಡ್ಯ ಮತ್ತು ವೇಗಿ ಬೌಲರ್‌ ಜಸ್ಪ್ರೀತ್ ಬುಮ್ರಾ ಇಬ್ಬರಿಗೂ ಕೆಲಸದ ಹೊರೆ ನಿರ್ವಹಿಸಲು ವಿಶ್ರಾಂತಿ ನೀಡಲಾಗಿದೆ. “ಹಾರ್ದಿಕ್ ಪಾಂಡ್ಯ ಮತ್ತು ಬುಮ್ರಾಗೆ ಪಂದ್ಯದಲ್ಲಿ 10 ಓವರ್ ಬೌಲಿಂಗ್ ಮಾಡಲು ಅನುಮತಿ ನೀಡಿಲ್ಲ. ಮುಂಬರುವ ಟಿ20 ವಿಶ್ವಕಪ್‌ಅನ್ನು ಪರಿಗಣಿಸಿ, ಅವರಿಗೆ ವಿಶ್ರಾಂತಿ ನೀಡಲಾಗಿದೆ” ಎಂದು ಬಿಸಿಸಿಐ ತಿಳಿಸಿದೆ.

ಕಿವೀಸ್‌ ವಿರುದ್ಧ ಟೂರ್ನಿಯಲ್ಲಿ ತಂಡವನ್ನು ಶುಭಮನ್ ಗಿಲ್ ಮುನ್ನಡೆಸಲಿದ್ದಾರೆ. ತಂಡದಲ್ಲಿ; ಶುಭಮನ್ ಗಿಲ್, ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಕೆಎಲ್ ರಾಹುಲ್ (WK), ಶ್ರೇಯಸ್ ಅಯ್ಯರ್, ವಾಷಿಂಗ್ಟನ್ ಸುಂದರ್, ರವೀಂದ್ರ ಜಡೇಜಾ, ಮೊಹಮ್ಮದ್ ಸಿರಾಜ್, ಹರ್ಷಿತ್ ರಾಣಾ, ಪ್ರಸಿದ್ಧ್ ಕೃಷ್ಣ, ಕುಲದೀಪ್ ಯಾದವ್, ರಿಷಭ್ ಪಂತ್ (wk), ನಿತೀಶ್ ಕುಮಾರ್ ರೆಡ್ಡಿ, ಅರ್ಶ್‌ದೀಪ್ ಸಿಂಗ್ ಹಾಗೂ ಯಶಸ್ವಿ ಜೈಶ್ವಾಲ್ ಇರಲಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...