ಕ್ರಿಕೆಟಿಗ ನಿತೀಶ್‌ ಕುಮಾರ್‌ ರೆಡ್ಡಿ ವಿರುದ್ಧ 5 ಕೋಟಿ ರೂ. ಪಾವತಿಸಲು ಮೊಕದ್ದಮೆ

Date:

ಇಂಗ್ಲೆಂಡ್ ವಿರುದ್ಧದ ಐದು ಪಂದ್ಯಗಳ ಟೆಸ್ಟ್ ಸರಣಿಯಿಂದ ಹೊರ ಬಿದ್ದಿರುವ ಟೀಂ ಇಂಡಿಯಾದ ಆಲ್‌ರೌಂಡರ್ ನಿತೀಶ್ ಕುಮಾರ್ ರೆಡ್ಡಿ ಇದೀಗ ಕಾನೂನು ಸಮಸ್ಯೆಯಲ್ಲಿ ಸಿಲುಕಿದ್ದಾರೆ.

ಭಾರತ ತಂಡದ ಭಾಗವಾಗಿದ್ದ ಆಲ್‌ರೌಂಡರ್, ಮೂರನೇ ಪಂದ್ಯದ ನಂತರ ಗಾಯಗೊಂಡು ಉಳಿದೆರಡು ಟೆಸ್ಟ್‌ಗಳಿಂದ ಹೊರಗುಳಿದಿದ್ದಾರೆ. ಭಾರತಕ್ಕೆ ಮರಳಿದ ನಂತರ, ರೆಡ್ಡಿ ಅವರ ಮಾಜಿ ಏಜೆಂಟ್ ಅವರ ವಿರುದ್ಧ 5 ಕೋಟಿ ರೂ. ಬಾಕಿ ಪಾವತಿಸುವಂತೆ ಕೋರಿ ಅರ್ಜಿ ಸಲ್ಲಿಸಿದ್ದಾರೆ.

2024-25ರ ಆಸ್ಟ್ರೇಲಿಯಾ ವಿರುದ್ಧದ ಬಾರ್ಡರ್-ಗವಾಸ್ಕರ್ ಟ್ರೋಫಿಯ ಸಮಯದಲ್ಲಿ ನಿತೀಶ್ ಕುಮಾರ್ ರೆಡ್ಡಿ ಹೊಸ ಮ್ಯಾನೇಜರ್‌ ಅವರನ್ನು ಆಯ್ಕೆ ಮಾಡಿಕೊಂಡರು. ಇದರಿಂದಾಗಿ ಅದಕ್ಕಿಂತ ಮೊದಲಿದ್ದ ಸ್ಕ್ವೇರ್ ದಿ ಒನ್ ಜೊತೆಗಿನ ಅವರ ನಾಲ್ಕು ವರ್ಷಗಳ ಸಂಬಂಧ ಕೊನೆಗೊಂಡಿತು. ಆದರೆ, ಬಾಕಿ ಹಣವನ್ನು ಪಾವತಿಸದ ಕಾರಣ ಸಂಸ್ಥೆ ಈಗ ರೆಡ್ಡಿ ಮೇಲೆ ಆರೋಪ ಮಾಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಲಾರ್ಡ್ಸ್‌ನಲ್ಲಿ ಇಂಗ್ಲೆಂಡ್‌ ಜಯಗಳಿಸಿದ್ದು ಹೇಗೆ? ಗೆಲುವಿಗೆ ತಂತ್ರ ರೂಪಿಸಿದ್ದು ಹೇಗಿತ್ತು?

ಸನ್‌ರೈಸರ್ಸ್ ಹೈದರಾಬಾದ್ ಆಲ್‌ರೌಂಡರ್ ರೆಡ್ಡಿ ನಿರ್ವಹಣಾ ಒಪ್ಪಂದವನ್ನು ಉಲ್ಲಂಘಿಸಿದ್ದಾರೆ. ಬಾಕಿ ಪಾವತಿಸಿಲ್ಲ ಎಂದು ಆರೋಪಿಸಿ ಸ್ಕ್ವೇರ್ ದಿ ಒನ್ ಪ್ರೈವೇಟ್ ಲಿಮಿಟೆಡ್ ಮಧ್ಯಸ್ಥಿಕೆ ಮತ್ತು ಸಂಧಾನ ಕಾಯ್ದೆಯ ಸೆಕ್ಷನ್ 11(6) ರ ಅಡಿಯಲ್ಲಿ ಅರ್ಜಿ ಸಲ್ಲಿಸಿದೆ.

ದೆಹಲಿ ಹೈಕೋರ್ಟ್ ಜುಲೈ 28, ಸೋಮವಾರ ಪ್ರಕರಣದ ವಿಚಾರಣೆ ನಡೆಸುವ ಸಾಧ್ಯತೆಯಿದೆ. ವರದಿಯಲ್ಲಿ, ಸಂಸ್ಥೆಯು 2021 ರಿಂದ ರೆಡ್ಡಿ ಅವರ ಮ್ಯಾನೇಜ್‌ಮೆಂಟ್‌ ಮಾಡುತ್ತಿದೆ, ನಾಲ್ಕು ವರ್ಷಗಳ ಸಹಯೋಗದ ಅವಧಿಯಲ್ಲಿ ಅವರಿಗೆ ಅನೇಕ ಜಾಹೀರಾತುಗಳು ಮತ್ತು ಬ್ರಾಂಡ್ ಅನುಮೋದನೆಗಳನ್ನು ಸಹ ಏರ್ಪಡಿಸಿದೆ ಎಂದು ಹೇಳಲಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...