ನಾನು ಫಾರ್ಮ್‌ ಕಳೆದುಕೊಂಡಿಲ್ಲ, ನೆಟ್ಸ್‌ನಲ್ಲಿ ಅದ್ಭುತ ಪ್ರದರ್ಶನ ನೀಡುತ್ತಿದ್ದೇನೆ; ಸೂರ್ಯಕುಮಾರ್ ಯಾದವ್

Date:

ದಕ್ಷಿಣ ಆಫ್ರಿಕಾ ವಿರುದ್ಧದ ಮೂರನೇ ಟಿ20 ಪಂದ್ಯದಲ್ಲೂ ಟೀಮ್ ಇಂಡಿಯಾ ನಾಯಕ ಸೂರ್ಯಕುಮಾರ್ ಯಾದವ್ ಮುಗ್ಗರಿಸಿದ್ದಾರೆ. ಮೊದಲ ಪಂದ್ಯದಲ್ಲಿ 12 ರನ್ ಬಾರಿಸಿದ್ದ ಸೂರ್ಯ, ದ್ವಿತೀಯ ಪಂದ್ಯದಲ್ಲಿ 5 ರನ್​ಗಳಿಸಿ ಔಟಾಗಿದ್ದರು. ಇದೀಗ ಮೂರನೇ ಪಂದ್ಯದಲ್ಲಿ ಮತ್ತೊಮ್ಮೆ 12 ರನ್​ಗಳಿಸಿ ವಿಕೆಟ್ ಒಪ್ಪಿಸಿದ್ದಾರೆ. ಅಷ್ಟೇ ಅಲ್ಲದೆ ಸೂರ್ಯಕುಮಾರ್ ಯಾದವ್ ಟಿ20 ಕ್ರಿಕೆಟ್​ನಲ್ಲಿ ಅರ್ಧಶತಕ ಬಾರಿಸಿ ವರ್ಷಗಳೇ ಕಳೆದಿವೆ. ಹೀಗಾಗಿಯೇ ಟೀಮ್ ಇಂಡಿಯಾ ನಾಯಕನ ಫಾರ್ಮ್​ ಬಗ್ಗೆ ಪ್ರಶ್ನೆಗಳೆದ್ದಿವೆ.

ಇದೇ ಪ್ರಶ್ನೆಯನ್ನು ಮೂರನೇ ಪಂದ್ಯದ ಮುಕ್ತಾಯದ ಬಳಿಕ ಸೂರ್ಯಕುಮಾರ್ ಯಾದವ್ ಮುಂದೆ ಪತ್ರಕರ್ತರು ಕೇಳಿದ್ದರು. ಈ ವೇಳೆ ಅವರು ನೀಡಿದ ಉತ್ತರದಿಂದ ಇದೀಗ ಎಲ್ಲಡೆ ವೈರಲ್‌ ಆಗಿದೆ.

ದಕ್ಷಿಣ ಆಫ್ರಿಕಾ ವಿರುದ್ಧ ಪಂದ್ಯ ಗೆದ್ದ ಬಳಿಕ ಮಾತನಾಡಿದ ಸೂರ್ಯಕುಮಾರ್ ಯಾದವ್ ಅವರಿಗೆ, ಬ್ಯಾಟಿಂಗ್ ಲಯ ಕಳೆದುಕೊಂಡಿರುವ ಬಗ್ಗೆ ಪ್ರಶ್ನಿಸಲಾಗಿತ್ತು. ಈ ಪ್ರಶ್ನೆಗೆ ಉತ್ತರಿಸಿದ ಸೂರ್ಯ, ನಾನು ಫಾರ್ಮ್ ಕಳೆದುಕೊಂಡಿಲ್ಲ. ನೆಟ್ಸ್​ನಲ್ಲಿ ಅದ್ಭುತವಾಗಿ ಬ್ಯಾಟಿಂಗ್ ಮಾಡುತ್ತಿದ್ದೇನೆ. ನನ್ನ ನಿಯಂತ್ರಣದಲ್ಲಿರುವ ಎಲ್ಲವನ್ನೂ ನಾನು ಪ್ರಯತ್ನಿಸುತ್ತಿದ್ದೇನೆ. ರನ್‌ಗಳು ಬರಬೇಕಾದಾಗ ಸಂದರ್ಭದಲ್ಲಿ ಖಂಡಿತವಾಗಿಯೂ ರನ್ ಬರುತ್ತವೆ. ಸದ್ಯ ನಾನು ಫಾರ್ಮ್ ಕಳೆದುಕೊಂಡಿಲ್ಲ. ರನ್​ಗಳಿಸುತ್ತಿಲ್ಲ ಅಷ್ಟೇ ಎಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಕುಸ್ತಿ ಅಖಾಡಕ್ಕೆ ಮರಳುವ ವಿನೇಶ್‌ ಫೋಗಟ್‌ ನಿರ್ಧಾರಕ್ಕೆ ಸ್ವಾಗತ!

ಟೀಮ್ ಇಂಡಿಯಾ ನಾಯಕನ ಈ ಹೇಳಿಕೆಯು ಇದೀಗ ಟ್ರೋಲ್ ಆಗಿದೆ. ಏಕೆಂದರೆ ಅಭ್ಯಾಸದ ವೇಳೆ ರನ್​ಗಳಿಸಿ ಪ್ರಯೋಜನವೇನು? ಎಂದು ಹಲವರು ಸಾಮಾಜಿಕ ಮಾಧ್ಯಮದಲ್ಲಿ ಪ್ರಶ್ನಿಸಿದ್ದಾರೆ. ಅಷ್ಟೇ ಅಲ್ಲದೆ ಕಳೆದೊಂದು ವರ್ಷದಿಂದ ಒಂದೇ ಒಂದು ಅರ್ಧಶತಕ ಬಾರಿಸದೇ ಫಾರ್ಮ್​ ಕಳೆದುಕೊಂಡಿಲ್ಲ ಎಂದು ಹೇಳುವುದರಲ್ಲಿ ಅರ್ಥವೇ ಇಲ್ಲ ಎಂದು ಅನೇಕರು ಟೀಕಿಸಿದ್ದಾರೆ.

ಇನ್ನು ಸೂರ್ಯಕುಮಾರ್ ಯಾದವ್ ಅವರ ಕಳೆದ 20 ಇನಿಂಗ್ಸ್​ಗಳ ಒಟ್ಟು ಸ್ಕೋರ್ 218 ರನ್​ಗಳು ಮಾತ್ರ. ಈ 218 ರನ್​ಗಳಿಸಲು ಅವರು ಬರೋಬ್ಬರಿ 183 ಎಸೆತಗಳನ್ನು ತೆಗೆದುಕೊಂಡಿದ್ದರು. ಅಂದರೆ 119ರ ಸ್ಟ್ರೈಕ್​ ರೇಟ್​ನಲ್ಲಿ 12.82 ಸರಾಸರಿಯಲ್ಲಿ ಮಾತ್ರ ರನ್​ ಗಳಿಸಿದ್ದಾರೆ.

ಅಷ್ಟೇ ಅಲ್ಲದೆ 2024ರ ಟಿ20 ವಿಶ್ವಕಪ್​ ಬಳಿಕ ಸೂರ್ಯಕುಮಾರ್ ಯಾದವ್ ಅವರ ಬ್ಯಾಟ್​ನಿಂದ ಮೂಡಿಬಂದಿರುವುದು ಕೇವಲ 2 ಅರ್ಧಶತಕಗಳು ಮಾತ್ರ. ಅಲ್ಲದೆ ಒಂದು ವರ್ಷದಿಂದ ಅರ್ಧ ಶತಕವನ್ನು ಸಹ ಬಾರಿಸಲು ಸಾಧ್ಯವಾಗಿಲ್ಲ. ಹೀಗಾಗಿಯೇ ಸೂರ್ಯಕುಮಾರ್ ಯಾದವ್ ಅವರ ಫಾರ್ಮ್​ ಬಗ್ಗೆ ಪ್ರಶ್ನೆಗಳೆದ್ದಿವೆ. ಆದರೆ ಸೂರ್ಯಕುಮಾರ್ ಯಾದವ್ ಪ್ರಕಾರ ಫಾರ್ಮ್​ ಕಳೆದುಕೊಂಡಿಲ್ಲ, ಬದಲಾಗಿ ರನ್​ಗಳಿಸುತ್ತಿಲ್ಲ ಅಷ್ಟೇ…!

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...