ಪಾಕಿಸ್ತಾನ ವಿರುದ್ಧ ಚೊಚ್ಚಲ ಟಿ20 ಸರಣಿ ಗೆದ್ದ ಅಫ್ಘಾನಿಸ್ತಾನ

Date:

ಅಪ್ಘಾನಿಸ್ತಾನ ತಂಡ ಶಾರ್ಜಾ ಕ್ರಿಕೆಟ್‌ ಮೈದಾನದಲ್ಲಿ ಹೊಸ ಇತಿಹಾಸ ರಚಿಸಿದೆ. ಪಾಕಿಸ್ತಾನದ ವಿರುದ್ಧದ ಟಿ20 ಸರಣಿಯನ್ನು 2-1 ಅಂತರದಲ್ಲಿ ವಶಪಡಿಸಿಕೊಳ್ಳುವ ಮೂಲಕ ಅಪ್ಘಾನಿಸ್ತಾನ ಚೊಚ್ಚಲ ಸರಣಿ ಗೆಲುವಿನ ಸಂಭ್ರವನ್ನಾಚರಿಸಿದೆ.

ಪಾಕಿಸ್ತಾನ ಸೇರಿದಂತೆ ಐಸಿಸಿ ಶ್ರೇಯಾಂಕದ ಅಗ್ರ ಆರು ಸ್ಥಾನಗಳಲ್ಲಿರುವ ತಂಡಗಳ ವಿರುದ್ಧ ಅಪ್ಘಾನಿಸ್ತಾನ ಇದೇ ಮೊದಲ ಬಾರಿಗೆ ಕ್ರಿಕೆಟ್‌ ಸರಣಿ ಗೆದ್ದು ಬೀಗಿದೆ.

ಟಿ20 ಸರಣಿಯ ಮೊದಲ ಎರಡು ಪಂದ್ಯಗಳನ್ನು ಗೆದ್ದು ಬೀಗಿದ್ದ ಅಫ್ಘಾನ್‌ ಪಡೆ, ಸೋಮವಾರ ನಡೆದ ಮೂರನೇ ಪಂದ್ಯದಲ್ಲಿ ಪಾಕ್‌ ತಂಡಕ್ಕೆ ತಲೆಬಾಗಿದೆ. ಆ ಮೂಲಕ ಕ್ಲೀನ್‌ ಸ್ವೀಪ್‌ ಅವಮಾನದಿಂದ ಪಾಕಿಸ್ತಾನ ಪಾರಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಶಾರ್ಜಾ ಕ್ರಿಕೆಟ್‌ ಮೈದಾನದಲ್ಲಿ ನಡೆದ ಮೂರನೇ ಟಿ20 ಪಂದ್ಯದಲ್ಲಿ ಯುವ ಆಟಗಾರರನ್ನು ಒಳಗೊಂಡ ಪಾಕಿಸ್ತಾನ 66 ರನ್‌ಗಳ ಜಯ ಸಾಧಿಸಿದೆ. ಟಾಸ್‌ ಸೋತು ಮೊದಲು ಬ್ಯಾಟ್‌ ಮಾಡಿದ್ದ ಪಾಕ್‌, 7 ವಿಕೆಟ್‌ ನಷ್ಟದಲ್ಲಿ 182 ರನ್‌ ಗಳಿಸಿತ್ತು. ಕಠಿಣ ಗುರಿಯನ್ನು ಬೆನ್ನಟ್ಟುವ ವೇಳೆ ರಶೀದ್‌ ಖಾನ್‌ ಬಳಗ 18.4 ಓವರ್‌ಗಳಲ್ಲಿ 116 ರನ್‌ಗಳಿಗೆ ಸರ್ವಪತನ ಕಂಡಿತು. ಇಹ್ಸಾನುಲ್ಲಾ ಮತ್ತು ಶಾದಾಬ್‌ ಖಾನ್‌ ತಲಾ 3 ವಿಕೆಟ್‌ ಪಡೆಯುವ ಮೂಲಕ ಮಿಂಚಿದರು.

ಅಪ್ಘಾನಿಸ್ತಾನದ ಮುಹಮ್ಮದ್‌ ನಬಿ ಸರಣಿಶ್ರೇಷ್ಠ ಪ್ರಶಸ್ತಿ ಮತ್ತು ಪಾಕಿಸ್ತಾನದ ಶಾದಾಬ್‌ ಖಾನ್‌ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...