ಟಿ20 ವಿಶ್ವಕಪ್: ಭಾರತದ ವಿರುದ್ಧ ಆಡಲು ಐಸಿಸಿ ಮುಂದೆ ಮೂರು ಷರತ್ತುಗಳನ್ನಿಟ್ಟ ಪಾಕಿಸ್ತಾನ

Date:

ಫೆಬ್ರವರಿ 15ರಂದು ನಡೆಯಲಿರುವ ಟಿ20 ವಿಶ್ವಕಪ್ ಪಂದ್ಯದಲ್ಲಿ ಭಾರತದ ವಿರುದ್ಧ ಕಣಕ್ಕಿಳಿಯಲು ಪಾಕಿಸ್ತಾನ ಕ್ರಿಕೆಟ್ ಮಂಡಳಿ (ಪಿಸಿಬಿ) ಅಂತಾರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ಐಸಿಸಿ) ಮುಂದೆ ಮೂರು ಕಠಿಣ ಷರತ್ತುಗಳನ್ನು ವಿಧಿಸಿದೆ. ಭಾರತದ ವಿರುದ್ಧದ ಪಂದ್ಯವನ್ನು ಬಹಿಷ್ಕರಿಸುವ ತನ್ನ ನಿರ್ಧಾರವನ್ನು ಬದಲಿಸಬೇಕಾದರೆ, ಈ ಬೇಡಿಕೆಗಳನ್ನು ಈಡೇರಿಸುವಂತೆ ಪಿಸಿಬಿ ಪಟ್ಟು ಹಿಡಿದಿದೆ ಎಂದು ವರದಿಯಾಗಿದೆ.

​ಲಾಹೋರ್‌ನಲ್ಲಿ ಭಾನುವಾರ ನಡೆದ ಮಹತ್ವದ ಸಭೆಯಲ್ಲಿ ಪಿಸಿಬಿ ಅಧಿಕಾರಿಗಳು ಹಾಗೂ ಬಾಂಗ್ಲಾದೇಶ ಕ್ರಿಕೆಟ್ ಮಂಡಳಿಯ (ಬಿಸಿಬಿ) ಮುಖ್ಯಸ್ಥ ಅಮೀನುಲ್ ಇಸ್ಲಾಂ ಬುಲ್ಬುಲ್ ಅವರು ಐಸಿಸಿ ನಿಯೋಗದೊಂದಿಗೆ ಚರ್ಚೆ ನಡೆಸಿದ್ದಾರೆ. ಭಾರತ ಮತ್ತು ಪಾಕಿಸ್ತಾನ ನಡುವಿನ ಹೈ-ವೋಲ್ಟೇಜ್ ಪಂದ್ಯವು ನಿಗದಿಯಂತೆ ನಡೆಯುವಂತೆ ನೋಡಿಕೊಳ್ಳಲು ಸೌಹಾರ್ದಯುತ ಪರಿಹಾರ ಕಂಡುಕೊಳ್ಳುವುದು ಈ ಸಭೆಯ ಪ್ರಮುಖ ಉದ್ದೇಶವಾಗಿತ್ತು. ‘ಕ್ರಿಕ್‌ಬಜ್’ ವರದಿಯ ಪ್ರಕಾರ, ಪಿಸಿಬಿ ಪ್ರಮುಖವಾಗಿ ಐಸಿಸಿ ಆದಾಯದಲ್ಲಿ ಹೆಚ್ಚಿನ ಪಾಲು, ಭಾರತದೊಂದಿಗೆ ದ್ವಿಪಕ್ಷೀಯ ಸರಣಿಗಳ ಪುನರಾರಂಭ ಮತ್ತು ‘ಹ್ಯಾಂಡ್‌ಶೇಕ್ ಪ್ರೋಟೋಕಾಲ್’ (ಕಡ್ಡಾಯ ಹಸ್ತಲಾಘವ ಶಿಷ್ಟಾಚಾರ) ಜಾರಿಗೆ ಒತ್ತಾಯಿಸಿದೆ.

​ಪ್ರಸ್ತುತ ಐಸಿಸಿ ಆದಾಯ ಹಂಚಿಕೆಯಲ್ಲಿ ಪಾಕಿಸ್ತಾನವು ಶೇ 5.75ರಷ್ಟು (ವಾರ್ಷಿಕ 34.51 ಮಿಲಿಯನ್ ಡಾಲರ್) ಪಾಲನ್ನು ಪಡೆಯುತ್ತಿದ್ದು, ಇದು ಬಿಸಿಸಿಐ, ಇಂಗ್ಲೆಂಡ್ ಮತ್ತು ಆಸ್ಟ್ರೇಲಿಯಾ ಮಂಡಳಿಗಳು ಪಡೆಯುವ ಮೊತ್ತಕ್ಕಿಂತ ತೀರಾ ಕಡಿಮೆಯಾಗಿದೆ. ಆರ್ಥಿಕವಾಗಿ ಮಂಡಳಿಯನ್ನು ಬಲಪಡಿಸಲು ಹೆಚ್ಚಿನ ಅನುದಾನದ ಅಗತ್ಯವಿದೆ ಎಂಬುದು ಪಿಸಿಬಿಯ ವಾದವಾಗಿದೆ. ಇದರೊಂದಿಗೆ, ದ್ವಿಪಕ್ಷೀಯ ಕ್ರಿಕೆಟ್ ಸಂಬಂಧವನ್ನು ಮರುಸ್ಥಾಪಿಸುವ ಬೇಡಿಕೆಯನ್ನೂ ಮುಂದಿಡಲಾಗಿದೆ. ಆದರೆ, ಈ ವಿಷಯವು ಉಭಯ ದೇಶಗಳ ಸರ್ಕಾರಗಳ ನಿರ್ಧಾರಕ್ಕೆ ಒಳಪಟ್ಟಿರುವುದರಿಂದ, ಐಸಿಸಿ ಇದರಲ್ಲಿ ಮಧ್ಯಸ್ಥಿಕೆ ಮಾತ್ರ ವಹಿಸಬಹುದಾಗಿದೆ ಎಂಬುದು ವಾಸ್ತವ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? U19 ವಿಶ್ವಕಪ್ ಫೈನಲ್ | ಇಂಗ್ಲೆಂಡ್ ವಿರುದ್ಧ ‘ಸೂರ್ಯ’ನ ಸಿಡಿಲಬ್ಬರದ ಶತಕ; ಸಿಕ್ಸರ್, ಬೌಂಡರಿಗಳ ಸುರಿಮಳೆ

​ಮೂರನೇ ಬೇಡಿಕೆಯಾದ ‘ಹ್ಯಾಂಡ್‌ಶೇಕ್ ಪ್ರೋಟೋಕಾಲ್’ ವಿಷಯವು 2025ರ ಏಷ್ಯಾ ಕಪ್ ಘಟನೆಯ ಹಿನ್ನೆಲೆಯನ್ನು ಹೊಂದಿದೆ. ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ, ಗಡಿಯಾಚೆಗಿನ ಭಯೋತ್ಪಾದನೆಯನ್ನು ಖಂಡಿಸಿ ಭಾರತೀಯ ಆಟಗಾರರು ಪಾಕ್ ಆಟಗಾರರೊಂದಿಗೆ ಹಸ್ತಲಾಘವ ಮಾಡಲು ನಿರಾಕರಿಸಿದ್ದರು. ಈ ಅವಮಾನದ ಹಿನ್ನೆಲೆಯಲ್ಲಿ, ಮೈದಾನದಲ್ಲಿ ಶಿಷ್ಟಾಚಾರವನ್ನು ಕಡ್ಡಾಯಗೊಳಿಸಲು ಪಾಕಿಸ್ತಾನ ಒತ್ತಾಯಿಸಿದೆ.

​ಭದ್ರತಾ ಕಾರಣಗಳಿಗಾಗಿ ಪಂದ್ಯಗಳನ್ನು ಸ್ಥಳಾಂತರಿಸಲು ಐಸಿಸಿ ನಿರಾಕರಿಸಿದ ನಂತರ ಬಾಂಗ್ಲಾದೇಶ ಟೂರ್ನಿಯಿಂದ ಹಿಂದೆ ಸರಿದಿತ್ತು. ಇದಕ್ಕೆ ಬೆಂಬಲ ಸೂಚಿಸಿ ಪಾಕಿಸ್ತಾನ ಸರ್ಕಾರವು ಭಾರತದ ವಿರುದ್ಧ ಆಡಲು ಅನುಮತಿ ನಿರಾಕರಿಸಿತ್ತು. ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯ ರದ್ದಾದರೆ ಪ್ರಸಾರ ಹಕ್ಕಿನ ಭಾರಿ ಆದಾಯವನ್ನು ಐಸಿಸಿ ಕಳೆದುಕೊಳ್ಳುವ ಭೀತಿಯಿದೆ. ಈ ಆರ್ಥಿಕ ಒತ್ತಡವನ್ನೇ ಅಸ್ತ್ರವನ್ನಾಗಿ ಬಳಸಿಕೊಂಡು, ತನ್ನ ಬೇಡಿಕೆಗಳನ್ನು ಈಡೇರಿಸಿಕೊಳ್ಳಲು ಪಿಸಿಬಿ ತಂತ್ರ ರೂಪಿಸಿದೆ ಎಂದು ಹೇಳಾಲಾಗುತ್ತಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...