ಏಷ್ಯಾ ಕಪ್‌ನಲ್ಲಿ ಹಸ್ತಲಾಘವ ವಿವಾದ: ಪಾಕ್‌ – ಯುಎಇ ಪಂದ್ಯ ವಿಳಂಬ?

Date:

ಏಷ್ಯಾ ಕಪ್‌ನಲ್ಲಿ ಇಂದು ನಡೆಯಬೇಕಿದ್ದ ಯುಎಇ ಹಾಗೂ ಪಾಕಿಸ್ತಾನ ನಡುವಿನ ಪಂದ್ಯ ಒಂದು ಗಂಟೆ ತಡವಾಗಿ ಆರಂಭವಾಗಲಿದೆ ಎಂದು ವರದಿಯಾಗಿದೆ.

ಮ್ಯಾಚ್ ರೆಫ್ರಿ ಆಂಡಿ ಪೈಕ್ರಾಫ್ಟ್ ಅವರನ್ನು ಟೂರ್ನಿಯಿಂದ ವಜಾಗೊಳಿಸುವಂತೆ ಈ ಹಿಂದೆ ಪಿಸಿಬಿ, ಐಸಿಸಿಗೆ ದೂರು ನೀಡಿತ್ತು. ಆದರೆ ಐಸಿಸಿ ಮಾತ್ರ ಆ ರೀತಿಯ ಯಾವುದೇ ಕ್ರಮ ತೆಗೆದುಕೊಳ್ಳುವುದನ್ನು ನಿರಾಕರಿಸಿತು. ಇದರಿಂದ ಕೆರಳಿರುವ ಪಾಕಿಸ್ತಾನ ಕ್ರಿಕೆಟ್ ಮಂಡಳಿ ಟೂರ್ನಿಯಿಂದ ತನ್ನ ಹೆಸರನ್ನು ಹಿಂಪಡೆಯಲು ನಿರ್ಧರಿಸಿದೆ ಎಂತಲೂ ವರದಿಯಾಗಿದೆ. ಯಾವುದಕ್ಕೂ ತಮ್ಮ ನಿಲುವನ್ನು ಸ್ಪಷ್ಟಪಡಿಸಲು ಪಾಕಿಸ್ತಾನ ಕ್ರಿಕೆಟ್ ಮಂಡಳಿ ಒಂದು ಗಂಟೆ ಸಮಯಾವಕಾಶ ಕೇಳಿದೆ ಎಂದು ವರದಿಯಾಗಿದೆ.

ಇದನ್ನು ಓದಿದ್ದೀರಾ? ಏಷ್ಯಾ ಕಪ್ 2025 | ಪಾಕ್‌ ವಿರುದ್ಧ ಭಾರತಕ್ಕೆ ಸುಲಭ ಗೆಲುವು, ನಾಟಕೀಯ ಕ್ಷಣಗಳಿಗೂ ಸಾಕ್ಷಿಯಾದ ಪಂದ್ಯ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪೂರ್ವ ನಿಗದಿಯಂತೆ ಇಂದು ರಾತ್ರಿ 8 ಗಂಟೆಗೆ ಪಾಕಿಸ್ತಾನ ತಂಡ ತನ್ನ ಲೀಗ್ ಹಂತದ ಕೊನೆಯ ಪಂದ್ಯವನ್ನು ದುಬೈನಲ್ಲಿ ಆಡಬೇಕಿತ್ತು. ಪಾಕಿಸ್ತಾನ ಕ್ರಿಕೆಟ್ ಮಂಡಳಿ (ಪಿಸಿಬಿ) ಅಧ್ಯಕ್ಷ ಮತ್ತು ಏಷ್ಯನ್ ಕ್ರಿಕೆಟ್ ಕೌನ್ಸಿಲ್ (ಎಸಿಸಿ) ಮುಖ್ಯಸ್ಥ ಮೊಹ್ಸಿನ್ ನಕ್ವಿ ಅವರು ಎಕ್ಸ್‌ನಲ್ಲಿ ಪಾಕಿಸ್ತಾನ ತಂಡವನ್ನು ಕ್ರೀಡಾಂಗಣಕ್ಕೆ ತೆರಳಲು ಸೂಚಿಸಿರುವುದಾಗಿ ಘೋಷಿಸಿದ್ದಾರೆ. “ಪಾಕಿಸ್ತಾನ ತಂಡವನ್ನು ದುಬೈ ಕ್ರಿಕೆಟ್ ಕ್ರೀಡಾಂಗಣಕ್ಕೆ ತೆರಳಲು ಕೇಳಿಕೊಂಡಿದ್ದೇವೆ. ಮುಂದಿನ ವಿವರಗಳನ್ನು ಶೀಘ್ರದಲ್ಲಿ ತಿಳಿಸಲಾಗುವುದು,” ಎಂದು ಅವರು ಪೋಸ್ಟ್ ಮಾಡಿದ್ದಾರೆ.

ಇದೇ ವೇಳೆ, ಯುಎಇ ತಂಡವು ಈಗಾಗಲೇ ಕ್ರೀಡಾಂಗಣಕ್ಕೆ ಆಗಮಿಸಿತ್ತು. ಪಿಸಿಬಿ ಸಲಹೆಗಾರ ಅಮೀರ್ ಮಿರ್ ಅವರು ಲಾಹೋರ್‌ನ ಗಡ್ಡಾಫಿ ಕ್ರೀಡಾಂಗಣದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ, “ಪಂದ್ಯವು ವಿಳಂಬವಾಗಲಿದೆ. ಪಿಸಿಬಿ ಅಧ್ಯಕ್ಷ ಮೊಹ್ಸಿನ್ ನಕ್ವಿ ಅವರು ಮಾಜಿ ಪಿಸಿಬಿ ಮುಖ್ಯಸ್ಥರಾದ ರಮೀಜ್ ರಾಜಾ ಮತ್ತು ನಜಮ್ ಸೇಠಿ ಅವರೊಂದಿಗೆ ಚರ್ಚೆ ನಡೆಸುತ್ತಿದ್ದಾರೆ,” ಎಂದು ತಿಳಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...