ಕ್ರಿಕೆಟ್ | ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ ವಿಶ್ವಕಪ್‌ನಿಂದ ಔಟ್; ಕನ್ನಡಿಗ ಪ್ರಸಿದ್ಧ ಕೃಷ್ಣಗೆ ಸ್ಥಾನ

Date:

ಟೀಂ ಇಂಡಿಯಾದ ಸ್ಟಾರ್‌ ಆಲ್‌ರೌಂಡರ್ ಆಟಗಾರ ಹಾರ್ದಿಕ್ ಪಾಂಡ್ಯ ವಿಶ್ವಕಪ್ ಟೂರ್ನಿಯಿಂದಲೇ ಹೊರಬಿದ್ದಿದ್ದಾರೆ.

ಬಾಂಗ್ಲಾದೇಶ ವಿರುದ್ಧದ ಪಂದ್ಯದಲ್ಲಿ ಹಾರ್ದಿಕ್ ಪಾಂಡ್ಯ ಬೌಲಿಂಗ್ ಮಾಡುವ ವೇಳೆ ಗಾಯಗೊಂಡಿದ್ದರು. ನಂತರ ನಡೆದ ನ್ಯೂಝಿಲ್ಯಾಂಡ್, ಇಂಗ್ಲೆಂಡ್ ಮತ್ತು ಶ್ರೀಲಂಕಾ ವಿರುದ್ಧದ ಪಂದ್ಯಗಳನ್ನು ಆಡಿರಲಿಲ್ಲ.

ಗಾಯದ ತೀವ್ರತೆಯಿಂದಾಗಿ ಇಡೀ ಟೂರ್ನಿಯಿಂದ ಹೊರಬಿದ್ದಿದ್ದಾರೆ ಎಂದು ಐಸಿಸಿ ತಿಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬಾಂಗ್ಲಾದೇಶ ವಿರುದ್ಧದ ವಿಶ್ವಕಪ್‌ ಟೂರ್ನಿಯ ಪಂದ್ಯದಲ್ಲಿ ಬೌಲ್‌ ಮಾಡುವ ವೇಳೆ ಟೀಮ್‌ ಇಂಡಿಯಾ ಆಲ್‌ರೌಂಡರ್‌ ಹಾರ್ದಿಕ್‌ ಪಾಂಡ್ಯ ಪಾದದ ಗಾಯಕ್ಕೆ ತುತ್ತಾಗಿದ್ದರು. ಈ ಹಿನ್ನೆಲೆಯಲ್ಲಿ ಪಂದ್ಯದಲ್ಲಿ ಅವರು ಒಂದೇ ಒಂದು ಓವರ್‌ ಅನ್ನು ಪೂರ್ಣಗೊಳಿಸದೆ ಮೈದಾನ ತೊರೆದಿದ್ದರು.

ಪಂದ್ಯದ 9ನೇ ಓವರ್‌ ಮೂರನೇ ಎಸೆತದಲ್ಲಿ ಲಿಟನ್‌ ದಾಸ್‌ ಹೊಡೆದ ಚೆಂಡನ್ನು ಹಾರ್ದಿಕ್‌ ಪಾಂಡ್ಯ ತಮ್ಮ ಬಲಗಾಲಿನಿಂದ ತಡೆಯಲು ಪ್ರಯತ್ನಿಸಿದಾಗ, ನಿಯಂತ್ರಣ ತಪ್ಪಿ ನೆಲಕ್ಕೆ ಉರುಳಿದ್ದರು. ಈ ವೇಳೆ ಅವರ ಪಾದದಲ್ಲಿ ಭಾರೀ ನೋವು ಕಾಣಿಸಿಕೊಂಡಿದ್ದು, ಅವರು ಬೌಲ್ ಮಾಡಲಾಗದೆ ಸಹಾಯಕ ಸಿಬ್ಬಂದಿಯ ನೆರವಿನಿಂದ ಪೆವಿಲಿಯನ್‌ಗೆ ಮರಳಿಸಿದ್ದರು. ಮತ್ತೆ ಅವರು ಮೈದಾನಕ್ಕೆ ಮರಳಿರಲಿಲ್ಲ. ಹಾರ್ದಿಕ್‌ ಪಾಂಡ್ಯ ಅವರ ಓವರ್‌ ಅನ್ನು ವಿರಾಟ್‌ ಕೊಹ್ಲಿ ಮುಗಿಸಿದ್ದರು.

ಹಾರ್ದಿಕ್ ಬದಲಿಗೆ ಕನ್ನಡಿಗ ಪ್ರಸಿದ್ಧ್ ಕೃಷ್ಣ ಅವರನ್ನು ತಂಡಕ್ಕೆ ಸೇರಿಸಿಕೊಳ್ಳಲಾಗಿದೆ. ದಕ್ಷಿಣ ಆಫ್ರಿಕಾ ವಿರುದ್ಧ ಕೊಲ್ಕತ್ತಾದಲ್ಲಿ ನಡೆಯಲಿರುವ ಪಂದ್ಯದಲ್ಲಿ ಪ್ರಸಿದ್ಧ್ ಕೃಷ್ಣ ಆಡುವ ಸಾಧ್ಯತೆ ಇದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...