ಐಪಿಎಲ್ 2025 | ಲಖನೌ ವಿರುದ್ಧ ಗೆದ್ದು ಎರಡನೇ ಸ್ಥಾನಕ್ಕೇರಿದ ಪಂಜಾಬ್‌

Date:

ಭರವಸೆಯ ಆಟಗಾರ ಪ್ರಭ್‌ಸಿಮ್ರನ್ ಸಿಂಗ್ ಬಾರಿಸಿದ ಅರ್ಧಶತಕ ಹಾಗೂ ವೇಗಿ ಅರ್ಷದೀಪ್ ಸಿಂಗ್ (43ಕ್ಕೆ 3 ವಿಕೆಟ್‌) ಇವರ ಅಮೋಘ ಆಟದ ನೆರವಿನಿಂದ ಪಂಜಾಬ್‌ ಕಿಂಗ್ಸ್‌ ತಂಡ 18ನೇ ಆವೃತ್ತಿಯ ಐಪಿಎಲ್‌ನ 13ನೇ ಪಂದ್ಯದಲ್ಲಿ 8 ವಿಕೆಟ್‌ಗಳಿಂದ ಲಖನೌ ಸೂಪರ್ ಜೈಂಟ್ಸ್ ತಂಡವನ್ನು ಸೋಲಿಸಿತು. ಸತತ 2 ಗೆಲುವಿನೊಂದಿಗೆ ಪಂಜಾಬ್‌ ಅಂಕ ಪಟ್ಟಿಯಲ್ಲಿ ಎರಡನೇ ಸ್ಥಾನಕ್ಕೇರಿದೆ.

ಟಾಸ್‌ ಸೋತರೂ ಮೊದಲು ಬ್ಯಾಟ್ ಮಾಡಿದ ಲಖನೌ 20 ಓವರ್‌ಗಳಲ್ಲಿ 7 ವಿಕೆಟ್‌ಗೆ 171 ರನ್‌ ಸೇರಿಸಿತು. ಇದಕ್ಕುತ್ತರವಾಗಿ ಬ್ಯಾಟ್ ಮಾಡಿದ ಎಲ್‌ಎಸ್‌ಜಿ 16.1 ಓವರ್‌ಗಳಲ್ಲಿ 2 ವಿಕೆಟ್‌ ನಷ್ಟಕ್ಕೆ172 ರನ್‌ ಸೇರಿಸಿ ಭರ್ಜರಿ ಜಯಗಳಿಸಿತು. ಎಲ್‌ಎಸ್‌ಜಿ ಆಡಿದ 3 ಪಂದ್ಯಗಳಲ್ಲಿ 1 ಗೆಲುವು ದಾಖಲಿಸಿದ್ದು, 2 ಸೋಲು ಕಂಡಿದೆ.

171 ರನ್‌ ಗುರಿಯನ್ನು ಬೆನ್ನಟ್ಟಿದ ಪಂಜಾಬ್ ತಂಡದ ಆರಂಭ ಕಳಪೆಯಾಗಿತ್ತು. ಪ್ರಿಯಾಂಶ್ ಆರ್ಯ ಅವರನ್ನು ದಿಗ್ವೇಶ್ ರಠಿ ಪೆವಿಲಿಯನ್‌ಗೆ ಅಟ್ಟಿದರು. ಎರಡನೇ ವಿಕೆಟ್‌ಗೆ ಪ್ರಭ್‌ಸಿಮ್ರನ್ ಸಿಂಗ್ ಅವರನ್ನು ಸೇರಿಕೊಂಡ ಶ್ರೇಯಸ್ ಅಯ್ಯರ್ ಉತ್ತಮ ಜೊತೆಯಾಟದ ಕಾಣಿಕೆ ನೀಡಿದರು. ಈ ಜೋಡಿಯನ್ನು ಕಟ್ಟಿ ಹಾಕುವಲ್ಲಿ ಎಲ್‌ಎಸ್‌ಜಿ ಬೌಲರ್‌ಗಳು ವಿಫಲರಾದರು. ಈ ಜೋಡಿ 44 ಎಸೆತಗಳಲ್ಲಿ 84 ರನ್‌ ಸಿಡಿಸಿ ಔಟ್ ಆಯಿತು. ಆರಂಭಿಕ ಆಟಗಾರ ಪ್ರಭ್‌ಸಿಮ್ರನ್ 9 ಬೌಂಡರಿ, 3 ಸಿಕ್ಸರ್ ಸಹಾಯದಿಂದ 69 ರನ್‌ ಬಾರಿಸಿ ಔಟ್ ಆದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಐಪಿಎಲ್ ಕ್ರಿಕೆಟ್ | ಆಟಗಾರರು, ಅಭಿಮಾನಿಗಳು ಮತ್ತು ಸೋಷಿಯಲ್ ಮೀಡಿಯಾ ಎಂಬ ಕಿಂದರಿಜೋಗಿ

ಮೂರನೇ ವಿಕೆಟ್‌ಗೆ ಶ್ರೇಯಸ್‌ ಅಯ್ಯರ್‌ ಹಾಗೂ ನೆಹಾಲ್ ವಧೀರ್ ಜೋಡಿ ತಂಡಕ್ಕೆ ಬೇಕಿದ್ದ ಅಗತ್ಯ ರನ್‌ಗಳನ್ನು ಕಲೆ ಹಾಕುವಲ್ಲಿ ಸಫಲರಾದರು. ಈ ಜೋಡಿ 37 ಎಸೆತಗಳಲ್ಲಿ ಅಜೇಯ 67 ರನ್‌ ಸಿಡಿಸಿ ತಂಡಕ್ಕೆ ನೆರವಾಯಿತು. ಶ್ರೇಯಸ್ ಅಯ್ಯರ್‌ 3 ಬೌಂಡರಿ, 4 ಸಿಕ್ಸರ್‌ ಸಹಾಯದಿಂದ ಅಜೇಯ 52 ರನ್‌ ಬಾರಿಸಿದರು. ಇದು ಐಪಿಎಲ್‌ನಲ್ಲಿ ಶ್ರೇಯಸ್ ಅವರ ಎರಡನೇ ಅರ್ಧಶತಕವಾಗಿದೆ. ಇನ್ನು 24 ವರ್ಷದ ನೇಹಲ್ ವಧೀರ್ 3 ಬೌಂಡರಿ, 4 ಸಿಕ್ಸರ್ ಸಹಾಯದಿಂದ ಅಜೇಯ 43 ರನ್‌ ಸಿಡಿಸಿ ಅಬ್ಬರಿಸಿದರು.

ಟಾಸ್‌ ಸೋತರೂ ಮೊದಲು ಬ್ಯಾಟ್ ಮಾಡಿದ ಎಲ್‌ಎಸ್‌ಜಿ ತಂಡದ ಆರಂಭ ಕಳಪೆಯಾಗಿತ್ತು. ಆರಂಭಿಕ ಮಿಚೆಲ್ ಮಾರ್ಷ್ ಸೊನ್ನೆ ಸುತ್ತಿದರು. ಐಡೆನ್ ಮಾರ್ಕ್ರಾಮ್ (28 ರನ್) ಹಾಗೂ ನಿಕೋಲಸ್‌ ಪೂರನ್ ಎರಡನೇ ವಿಕೆಟ್‌ಗೆ 19 ಎಸೆತಗಳಲ್ಲಿ 31 ರನ್‌ ಸೇರಿಸಿತು. ನಾಯಕ ರಿಷಭ್‌ ಪಂತ್‌ (2) ನಿರಾಸೆ ಅನುಭವಿಸಿದರು. ಮಧ್ಯಮ ಕ್ರಮಾಂಕದ ಸ್ಟಾರ್ ಆಟಗಾರ ನಿಕೋಲಸ್ ಪೂರನ್ 5 ಬೌಂಡರಿ, 2 ಸಿಕ್ಸರ್ ಸಹಾಯದಿಂದ 44 ರನ್‌ ಸಿಡಿಸಿ ಔಟ್ ಆದರು. ಉಳಿದಂತೆ ಆಯುಷ್ ಬದೋನಿ 41 ರನ್‌, ಅಬ್ದುಲ್‌ ಸಮದ್ 27 ರನ್‌ ಸಿಡಿಸಿ ಔಟ್ ಆದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...