ಫೈನಲ್‌ ಪಂದ್ಯದಲ್ಲಿ ಆಡಿಸುವುದಿಲ್ಲ ಎಂದು 48 ಗಂಟೆ ಮೊದಲೇ ಗೊತ್ತಿತ್ತು; ಮೌನ ಮುರಿದ ಆರ್‌ ಅಶ್ವಿನ್

Date:

ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್‌ಷಿಪ್‌ ಫೈನಲ್ ಪಂದ್ಯದಲ್ಲಿ ಆಡಿಸಿದಿರುವ ಬಗ್ಗೆ ಭಾರತ ತಂಡದ ಅನುಭವಿ ಸ್ಪಿನ್ನರ್ ಆರ್‌ ಅಶ್ವಿನ್ ಮೌನ ಮುರಿದಿದ್ದಾರೆ.

“ಫೈನಲ್ ಪಂದ್ಯಕ್ಕೆ ನನಗೆ ಸ್ಥಾನ ಸಿಗುವುದಿಲ್ಲ ಎಂಬ ವಿಷಯ ಎರಡು ದಿನಗಳ ಮೊದಲೇ ಗೊತ್ತಿತ್ತು” ಎಂದು ಟೆಸ್ಟ್ ಕ್ರಿಕೆಟ್‌ನ ವಿಶ್ವದ ನಂ.1 ಬೌಲರ್ ಆರ್‌ ಅಶ್ವಿನ್ ಬಹಿರಂಗಪಡಿಸಿದ್ದಾರೆ.

“ಸತ್ಯ ಹೇಳಬೇಕೆಂದರೆ ಫೈನಲ್ ಪಂದ್ಯದಲ್ಲಿ ಆಟವಾಡಬೇಕೆಂಬ ಆಸೆ ನನಗೂ ಇತ್ತು. ದುರದೃಷ್ಟವಶಾತ್ ನನಗೆ ಅವಕಾಶ ಸಿಗಲಿಲ್ಲ. ಫೈನಲ್ ಪಂದ್ಯದ ಆಡುವ 11ರ ಬಳಗದಿಂದ ನಾನು ಹೊರಗುಳಿಯಲಿದ್ದೇನೆ ಎಂಬುದು ನನಗೆ 2 ದಿನ ಮೊದಲೇ ತಿಳಿದಿತ್ತು. ಆದರೆ, ನನ್ನ ಗುರಿ ಏನಿದ್ದರೂ ತಂಡಕ್ಕೆ ಯಾವುದಾದರೂ ರೀತಿಯಲ್ಲಿ ನೆರವಾಗಿ ಟ್ರೋಫಿ ಗೆಲ್ಲುವಂತೆ ಮಾಡಬೇಕು ಎಂಬುದಾಗಿತ್ತು. ಭಾರತ ತಂಡ ಫೈನಲ್ ಪ್ರವೇಶಿಸಲು ನನ್ನ ಕೊಡುಗೆಯೂ ಇದೆ. ಕೊನೆಯ ಬಾರಿ ಆಡಿದ್ದ ಡಬ್ಲ್ಯುಟಿಸಿ ಫೈನಲ್ ಪಂದ್ಯದಲ್ಲೂ ನಾನು 4 ವಿಕೆಟ್ ಪಡೆದಿದ್ದೆ. 2018-19ರ ನಂತರ ವಿದೇಶಿ ಪಿಚ್‌ಗಳಲ್ಲಿ ನಾನು ಉತ್ತಮವಾಗಿ ಬೌಲಿಂಗ್ ಮಾಡುತ್ತಿದ್ದೇನೆ. ನನ್ನ ಕೊಡುಗೆಯಿಂದಲೂ ಭಾರತ ತಂಡ ಹಲವು ಪಂದ್ಯಗಳು ಗೆದ್ದಿವೆ. ಜೀವನದಲ್ಲಿ ನೀವು ಯಾವುದೇ ಅನುಭವಗಳನ್ನು ಎದುರಿಸಿದರೂ, ನೀವು ಅವುಗಳನ್ನು ಗೆಲ್ಲಬೇಕು” ಎಂದು ಆರ್‌ ಅಶ್ವಿನ್ ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಕರ್ನಾಟಕದ ಹಾಲು ಕಳಪೆ ಗುಣಮಟ್ಟದ್ದು ಎಂದು ವಿವಾದ ಸೃಷ್ಟಿಸಿದ ಕೇರಳ ಸಚಿವೆ

“ನನಗೀಗ 36 ವರ್ಷ ವಯಸ್ಸಾಗಿದೆ. ಈ ವಯಸ್ಸಿನಲ್ಲಿ ಯಾವುದು ಕೋಪ ತರಿಸುತ್ತದೆಯೋ ಅದೇ ಹೆಚ್ಚು ಆನಂದವನ್ನೂ ನೀಡುತ್ತದೆ. ಈ ವಯಸ್ಸಿನಲ್ಲಿ ನಾನು ನನಗೆ ಸಂತೋಷ ನೀಡುವ ವಿಷಯಗಳ ಮೇಲೆ ಹೆಚ್ಚು ಗಮನ ಹರಿಸಲು ಬಯಸುತ್ತೇನೆ. ಹಿರಿಯರು ಮತ್ತು ಮಾಜಿ ಕ್ರಿಕೆಟಿಗರು ನನಗೆ ಸಂದೇಶ ಕಳುಹಿಸುತ್ತಲೇ ಇರುತ್ತಾರೆ. ನಾನು ಅವರಿಗೆ ಶೀಘ್ರದಲ್ಲೇ ಉತ್ತರಿಸುತ್ತೇನೆ. ಯಾಕೆಂದರೆ ಅವರ ದೃಷ್ಟಿಯಲ್ಲಿ ನಾನು ಇನ್ನೂ ಚಿಕ್ಕವನಾಗಿದ್ದೇನೆ. ಅವರ ಸಲಹೆಗಳು ನನಗೆ ಬೇಕು” ಎಂದು ರವಿಚಂದ್ರನ್ ಅಶ್ವಿನ್ ತಿಳಿಸಿದ್ದಾರೆ.

ಫೈನಲ್‌ ಪಂದ್ಯದಲ್ಲಿ ಆಯ್ಕೆ ಮಂಡಳಿ ಅಶ್ವಿನ್‌ ಅವರನ್ನು ಕೈಬಿಟ್ಟು ನಾಲ್ವರು ವೇಗಿಗಳಿಗೆ ಮಣೆ ಹಾಕಿತ್ತು. ಒಬ್ಬರು ಮಾತ್ರ ಸ್ಪಿನ್ನರ್ ಇದ್ದರು. ಆದರೆ ಅಶ್ವಿನ್ ಜಾಗದಲ್ಲಿ ಸ್ಥಾನ ಗಿಟ್ಟಿಸಿಕೊಂಡಿದ್ದ ವೇಗಿ ಉಮೇಶ್ ಯಾದವ್, 2 ವಿಕೆಟ್ ಮಾತ್ರ ಕಬಳಿಸಿದರು. ಇದೇ ವರ್ಷ ಭಾರತದಲ್ಲಿ ನಡೆದ ಆಸ್ಟ್ರೇಲಿಯಾ ಎದುರಿನ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯಲ್ಲಿ 25 ವಿಕೆಟ್ ಉರುಳಿಸಿದ್ದ ಅಶ್ವಿನ್, ಸರಣಿ ಶ್ರೇಷ್ಠ ಪ್ರಶಸ್ತಿಗೆ ಭಾಜನರಾಗಿದ್ದರು.

ಲಂಡನ್‌ನ ಓವಲ್ ಮೈದಾನದಲ್ಲಿ ಜೂನ್‌ 7 ರಿಂದ 11ರವರೆಗೆ ನಡೆದ ಡಬ್ಲ್ಯುಟಿಸಿ ಫೈನಲ್ ಪಂದ್ಯದಲ್ಲಿ ಭಾರತ ತಂಡವು ಬ್ಯಾಟಿಂಗ್ ಮತ್ತು ಬೌಲಿಂಗ್ ಎರಡೂ ವಿಭಾಗಗಳಲ್ಲಿ ವೈಫಲ್ಯ ಅನುಭವಿಸಿತು. ಇದಕ್ಕೆ ಭಾರಿ ಬೆಲೆತೆತ್ತ ರೋಹಿತ್ ಶರ್ಮಾ ಪಡೆ 209 ರನ್‌ಗಳ ಹೀನಾಯ ಸೋಲು ಅನುಭವಿಸಿತು. ಇದರೊಂದಿಗೆ ಸತತ 2ನೇ ಬಾರಿಯೂ ಟ್ರೋಫಿ ಗೆಲ್ಲುವಲ್ಲಿ ವಿಫಲವಾಯಿತು.

ಡಬ್ಲ್ಯಟಿಸಿ ಫೈನಲ್ ಮುಗಿಸಿದ ಬೆನ್ನಲ್ಲೆ ತಾಯ್ನಾಡಿಗೆ ಬಂದಿಳಿದ ಆರ್ ಅಶ್ವಿನ್, ನೇರವಾಗಿ ತಮಿಳುನಾಡು ಪ್ರೀಮಿಯರ್ ಲೀಗ್‌ನಲ್ಲಿ ಪಾಲ್ಗೊಂಡರು. ಪ್ರಸ್ತುತ ನಡೆಯುತ್ತಿರುವ ಟಿಎನ್‌ಪಿಎಲ್‌ ಲೀಗ್‌ನಲ್ಲಿ ದಿಂಡುಗಲ್ ಡ್ರಾಗನ್ಸ್ ತಂಡವನ್ನು ಅಶ್ವಿನ್ ಮುನ್ನಡೆಸಿದ್ದಾರೆ. ಆಡಿದ ಮೊದಲ ಪಂದ್ಯದಲ್ಲೇ ಅಶ್ವಿನ್ ಎರಡು ವಿಕೆಟ್ ಪಡೆದು ಗಮನ ಸೆಳೆದಿದ್ದಾರೆ.

blank profile picture 973460 640
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...