ಟೀಂ ಇಂಡಿಯಾದ ಮಾಜಿ ನಾಯಕ ಮತ್ತು ಮಾಜಿ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಅವರ ಕಿರಿಯ ಪುತ್ರ ಅನ್ವಯ್ ದ್ರಾವಿಡ್ ಅವರಿಗೆ ಭಾರತ ಅಂಡರ್-19 ತಂಡದಲ್ಲಿ ಸ್ಥಾನ ಲಭಿಸಿದೆ. ಇತ್ತೀಚೆಗೆ ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್ (ಕೆಎಸ್ಸಿಎ) ತನ್ನ ವಾರ್ಷಿಕ ಪ್ರಶಸ್ತಿ ಸಮಾರಂಭದಲ್ಲಿ ಅನ್ವಯ್ ಅವರನ್ನು ಸನ್ಮಾನಿಸಿತ್ತು. ಕಳೆದ ತಿಂಗಳು ನಡೆದ ವಿನೂ ಮಂಕಡ್ ಟ್ರೋಫಿಯಲ್ಲಿ ಕರ್ನಾಟಕ ತಂಡದ ನಾಯಕತ್ವ ವಹಿಸಿದ್ದ ಅನ್ವಯ್ ಅವರನ್ನು ಇದೀಗ ಪ್ರಮುಖ ಟೂರ್ನಮೆಂಟ್ಗಾಗಿ ಭಾರತದ ತಂಡಕ್ಕೆ ಆಯ್ಕೆ ಮಾಡಲಾಗಿದೆ.
ಹೈದರಾಬಾದ್ನಲ್ಲಿ ಬುಧವಾರದಿಂದ ಆರಂಭವಾಗುವ ಪುರುಷರ ಅಂಡರ್-19 ಏಕದಿನ ಚಾಲೆಂಜರ್ ಟ್ರೋಫಿಗೆ ಅನ್ವಯ್ ದ್ರಾವಿಡ್ ಅವರನ್ನು ಸಿ ತಂಡದಲ್ಲಿ ಸೇರಿಸಲಾಗಿದೆ. ವಾರ್ಷಿಕವಾಗಿ ನಡೆಯುವ ಈ ಪಂದ್ಯಾವಳಿಯು ಯುವ ಆಟಗಾರರಿಗೆ ತಮ್ಮ ಪ್ರತಿಭೆ ಪ್ರದರ್ಶಿಸಲು ಅವಕಾಶ ನೀಡುತ್ತದೆ. ನಾಲ್ಕು ತಂಡಗಳ ನಡುವೆ ನಡೆಯಲಿರುವ ಈ ಟೂರ್ನಿ ನವೆಂಬರ್ 5 ರಿಂದ 11 ರವರೆಗೆ ಹೈದರಾಬಾದ್ನಲ್ಲಿ ಜರುಗಲಿದೆ.
ಅಗ್ರ ಕ್ರಮಾಂಕದ ಬ್ಯಾಟ್ಸ್ಮನ್ ಮತ್ತು ವಿಕೆಟ್ ಕೀಪರ್ ಆಗಿ ಕೆಲಸ ಮಾಡುವ ಅನ್ವಯ್, ಆಕ್ರಮಣಕಾರಿ ಬ್ಯಾಟಿಂಗ್ಗೆ ಹೆಸರುವಾಸಿಯಾಗಿದ್ದಾರೆ. ಸಿ ತಂಡವನ್ನು ಆರನ್ ಜಾರ್ಜ್ ಮುನ್ನಡೆಸಲಿದ್ದು, ಆರ್ಯನ್ ಯಾದವ್ ಉಪನಾಯಕನಾಗಿದ್ದಾರೆ. ತಂಡದ ಮೊದಲ ಪಂದ್ಯ ಶುಕ್ರವಾರ ವೇದಾಂತ್ ತ್ರಿವೇದಿ ನಾಯಕತ್ವದ ಬಿ ತಂಡದ ವಿರುದ್ಧ ನಡೆಯಲಿದ್ದು, ಈ ಪಂದ್ಯದಲ್ಲಿ ಅನ್ವಯ್ ದ್ರಾವಿಡ್ ಆಡುವುದನ್ನು ವೀಕ್ಷಿಸಬಹುದು. ರಾಹುಲ್ ದ್ರಾವಿಡ್ ಅವರ ಹಿರಿಯ ಪುತ್ರ ಸಮಿತ್ ದ್ರಾವಿಡ್ ಕೂಡ ಬ್ಯಾಟ್ಸ್ಮನ್ ಆಗಿ ಕ್ರಿಕೆಟ್ನಲ್ಲಿ ಸಕ್ರಿಯರಾಗಿದ್ದಾರೆ.
ಇದನ್ನು ಓದಿದ್ದೀರಾ? ಮಹಿಳಾ ವಿಶ್ವಕಪ್ ಗೆದ್ದ ತಂಡಕ್ಕೆ ಎಷ್ಟು ಬಹುಮಾನ?
ಅಂಡರ್-19 ಏಕದಿನ ಚಾಲೆಂಜರ್ ಟ್ರೋಫಿಗಾಗಿ ಭಾಗವಹಿಸುವ ತಂಡಗಳು
ಎ ತಂಡ: ವಿಹಾನ್ ಮಲ್ಹೋತ್ರಾ (ನಾಯಕ), ಅಭಿಜ್ಞಾನ್ ಕುಂದು (ಉಪನಾಯಕ ಮತ್ತು ವಿಕೆಟ್ಕೀಪರ್), ವಂಶ್ ಆಚಾರ್ಯ, ಬಾಲಾಜಿ ರಾವ್ (ವಿಕೆಟ್ಕೀಪರ್), ಲಕ್ಷ ರಾಯಚಂದನಿ, ವಿನೀತ್ ವಿಕೆ, ಮಾರ್ಕಂಡೇಯ ಪಾಂಚಾಲ್, ಸಾತ್ವಿಕ್ ದೇಸ್ವಾಲ್, ವಿ ಯಶವೀರ್, ಹೇಮಚೂಡೇಶನ್ ಜೆ, ಆರ್.ಎಸ್. ಅಂಬ್ರಿಶ್, ಹನಿ ಪ್ರತಾಪ್ ಸಿಂಗ್, ವಾಸು ದೇವಾನಿ, ಯುಧಾಜಿತ್ ಗುಹಾ, ಇಶಾನ್ ಸೂದ್.
ಬಿ ತಂಡ: ವೇದಾಂತ್ ತ್ರಿವೇದಿ (ನಾಯಕ), ಹರ್ವಂಶ್ ಸಿಂಗ್ (ಉಪನಾಯಕ ಮತ್ತು ವಿಕೆಟ್ ಕೀಪರ್), ವಾಫಿ ಕಚಿ, ಸಾಗರ್ ವಿರ್ಕ್, ಸಯಾನ್ ಪಾಲ್, ವೇದಾಂತ್ ಸಿಂಗ್ ಚೌಹಾಣ್, ಪ್ರಣವ್ ಪಂತ್, ಎಹಿತ್ ಸಲಾರಿಯಾ (ವಿಕೆಟ್ ಕೀಪರ್), ಬಿಕೆ ಕಿಶೋರ್, ಅನ್ಮೋಲ್ಜಿತ್ ಸಿಂಗ್, ನಮನ್ ಪುಷ್ಪಕ್, ಡಿ ದೀಪೇಶ್, ಮೊಹಮ್ಮದ್ ಮಲಿಕ್, ಮಹಮದ್ ಯಾಸೀನ್ ಸೌದಾಗರ್, ವೈಭವ್ ಶರ್ಮಾ.
ಸಿ ತಂಡ: ಆರನ್ ಜಾರ್ಜ್ (ನಾಯಕ), ಆರ್ಯನ್ ಯಾದವ್ (ಉಪನಾಯಕ), ಅನಿಕೇತ್ ಚಟರ್ಜಿ, ಮಣಿಕಾಂತ್ ಶಿವಾನಂದ್, ರಾಹುಲ್ ಕುಮಾರ್, ಯಶ್ ಕಸ್ವಾಂಕರ್, ಅನ್ವಯ್ ದ್ರಾವಿಡ್ (ವಿಕೆಟ್ ಕೀಪರ್), ಯುವರಾಜ್ ಗೋಹಿಲ್ (ವಿಕೆಟ್ ಕೀಪರ್), ಹೆನಿಲ್ ಪಟೇಲ್, ಲಕ್ಷ್ಮಣ್ ಪ್ರುತಿ, ರೋಹಿತ್ ಕುಮಾರ್ ದಾಸ್, ಮೋಹಿತ್ ಉಲ್ವಾ.
ಡಿ ತಂಡ: ಚಂದ್ರಹಾಸ್ ದಾಶ್ (ನಾಯಕ), ಮೌಲ್ಯರಾಜ್ಸಿಂಗ್ ಚಾವ್ಡಾ (ಉಪನಾಯಕ), ಶಂತನು ಸಿಂಗ್, ಅರ್ನವ್ ಬುಗ್ಗಾ, ಅಭಿನವ್ ಕಣ್ಣನ್, ಕುಶಾಗ್ರ ಓಜಾ, ಆರ್ಯನ್ ಸಕ್ಪಾಲ್, ಎ. ರಾಪೋಲ್, ಇಸಿಎಸ್ನಹಮ್, ಅಯಾನ್ ಅಕ್ರಮ್, ಉಧವ್ ಮೋಹನ್, ಅಶುತೋಷ್ ಮಹಿದಾ, ಎಂ ತೋಶಿತ್ ಯಾದವ್, ಸೊಲಿಬ್ ತಾರಿಕ್.





