ಭಾರತ ಅಂಡರ್ 19 ತಂಡಕ್ಕೆ ರಾಹುಲ್ ಪುತ್ರ ಸಮಿತ್ ದ್ರಾವಿಡ್ ಆಯ್ಕೆ

Date:

ಆಸ್ಟ್ರೇಲಿಯಾ ತಂಡದ ವಿರುದ್ಧದ ಸರಣಿಗಾಗಿ ಭಾರತ ಅಂಡರ್ 19 ತಂಡವನ್ನು ಪ್ರಕಟಿಸಿದ್ದು ಈ ತಂಡಕ್ಕೆ ಟೀಮ್ ಇಂಡಿಯಾದ ಮಾಜಿ ಕೋಚ್ ರಾಹುಲ್ ದ್ರಾವಿಡ್ ಅವರ ಪುತ್ರ ಸಮಿತ್ ದ್ರಾವಿಡ್ ಕೂಡಾ ಸ್ಥಾನ ಪಡೆದುಕೊಂಡಿದ್ದಾರೆ.

ಇನ್ನು ಸಮಿತ್ ದ್ರಾವಿಡ್ ಮಾತ್ರವಲ್ಲದೆ ಭಾರತ ಅಂಡರ್ 19 ತಂಡಕ್ಕೆ ಕರ್ನಾಟಕದ ಹಾರ್ದಿಕ್ ರಾಜ್, ಕಾರ್ತಿಕೇಯ ಕೆಪಿ ಮತ್ತು ಸಮರ್ಥ್ ಎನ್ ಕೂಡಾ ಆಯ್ಕೆಯಾಗಿದ್ದಾರೆ.

18 ವರ್ಷದ ಬಲಗೈ ಬ್ಯಾಟರ್ ಸಮಿತ್ ದ್ರಾವಿಡ್ ಅವರು ಇತ್ತೀಚೆಗೆ ಮೈಸೂರಿನಲ್ಲಿ ನಡೆದ ಮಹಾರಾಜ ಟಿ 20 ಟ್ರೋಫಿಯಲ್ಲಿಯೂ ಆಡಿದ್ದರು. ಈ ಪಂದ್ಯದಲ್ಲಿ ಏಳು ಇನ್ನಿಂಗ್ಸ್‌ಗಳಲ್ಲಿ ಕೇವಲ 82 ರನ್‌ಗಳನ್ನು ಪಡೆದಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಮಹಾರಾಜ ಟ್ರೋಫಿ | ಮೈಸೂರು ವಾರಿಯರ್ಸ್ ತಂಡಕ್ಕೆ ಹರಾಜಾದ ರಾಹುಲ್ ದ್ರಾವಿಡ್ ಪುತ್ರ

ಸೆಪ್ಟೆಂಬರ್ 21, 23 ಮತ್ತು 26ರಂದು ಪುದುಚೇರಿಯಲ್ಲಿ ಮೂರು 50 ಓವರ್ ಪಂದ್ಯಗಳಲ್ಲಿ ಭಾರತದ ಅಂಡರ್ 19 ತಂಡವು ಆಸ್ಟ್ರೇಲಿಯಾದ ಅಂಡರ್ 19 ತಂಡದ ಎದುರು ಆಡಲಿದೆ. ಅದಾದ ಬಳಿಕ ಸೆಪ್ಟೆಂಬರ್ 30ರಿಂದ ಚೆನ್ನೈನಲ್ಲಿ ಎರಡು ನಾಲ್ಕು ದಿನಗಳ ಪಂದ್ಯಗಳು ನಡೆಯಲಿವೆ.

ಭಾರತ ಅಂಡರ್ 19 ಏಕದಿನ ತಂಡ:

ರುದ್ರ ಪಟೇಲ್ (ಗುಜರಾತ್), ಸಾಹಿಲ್ ಪರಾಖ್ (ಮಹಾರಾಷ್ಟ್ರ), ಕಾರ್ತಿಕೇಯ ಕೆಪಿ (ಕರ್ನಾಟಕ), ಮೊಹಮ್ಮದ್ ಅಮಾನ್- ನಾಯಕ (ಉತ್ತರ ಪ್ರದೇಶ), ಕಿರಣ್ ಚೋರ್ಮಲೆ (ಮಹಾರಾಷ್ಟ್ರ), ಅಭಿಗ್ಯಾನ್ ಕುಂದು- ವಿಕೆಟ್ ಕೀಪರ್ (ಮುಂಬೈ), ಹರ್ವಂಶ್ ಸಿಂಗ್ ಪಂಗಾಲಿಯಾ ವಿಕೆಟ್ ಕೀಪರ್ (ಸೌರಾಷ್ಟ್ರ), ಸಮಿತ್ ದ್ರಾವಿಡ್ (ಕರ್ನಾಟಕ), ಯುಧಾಜಿತ್ ಗುಹಾ (ಪಶ್ಚಿಮ ಬಂಗಾಳ), ಸಮರ್ಥ ಎನ್ (ಕರ್ನಾಟಕ), ನಿಖಿಲ್ ಕುಮಾರ್ (ಚಂಡೀಗಢ), ಚೇತನ್ ಶರ್ಮಾ (ರಾಜಸ್ಥಾನ್), ಹಾರ್ದಿಕ್ ರಾಜ್ (ಕರ್ನಾಟಕ), ರೋಹಿತ್ ರಾಜಾವತ್ (ಮಧ್ಯ ಪ್ರದೇಶ), ಮೊಹಮ್ಮದ್ ಇನಾನ್ (ಕೇರಳ)

ಭಾರತ ಅಂಡರ್ 19 ನಾಲ್ಕು ದಿನಗಳ ಸರಣಿ:

ವೈಭವ್ ಸೂರ್ಯವಂಶಿ (ಬಿಹಾರ), ನಿತ್ಯ ಪಾಂಡ್ಯ (ಬಿಹಾರ), ವಿಹಾನ್ ಮಲ್ಹೋತ್ರಾ (ಪಂಜಾಬ್), ಸೋಹಮ್ ಪಟವರ್ಧನ್- ನಾಯಕ (ಮಧ್ಯ ಪ್ರದೇಶ), ಕಾರ್ತಿಕೇಯ ಕೆಪಿ (ಕರ್ನಾಟಕ), ಸಮಿತ್ ದ್ರಾವಿಡ್ (ಕರ್ನಾಟಕ), ಅಭಿಗ್ಯಾನ್ ಕುಂದು- ವಿಕೆಟ್ ಕೋಪರ್ (ಮುಂಬೈ), ಹರ್ವಂಶ್ ಸಿಂಗ್ ಪಂಗಾಲಿಯಾ- ವಿಕೆಟ್ ಕೀಪರ್ (ಸೌರಾಷ್ಟ್ರ), ಚೇತನ್ ಶರ್ಮಾ (ರಾಜಸ್ಥಾನ್), ಸಮರ್ಥ್ ಎನ್ (ಕರ್ನಾಟಕ), ಆದಿತ್ಯ ರಾವತ್ (ಉತ್ತರಾಖಂಡ್), ನಿಖಿಲ್ ಕುಮಾರ್ (ಚಂಡೀಗಢ್), ಅನ್ಮೋಲ್ಜೀತ್ ಸಿಂಗ್ (ಪಂಜಾಬ್), ಆದಿತ್ಯ ಸಿಂಗ್ (ಉತ್ತರ ಪ್ರದೇಶ), ಮೊಹಮ್ಮದ್ ಇನಾನ್ (ಕೇರಳ)

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...