ಇಂಗ್ಲೆಂಡ್ ವಿರುದ್ಧದ ಟೆಸ್ಟ್ | ಭಾರತ 421/7; 175 ರನ್ ಮುನ್ನಡೆ

Date:

ಇಂಗ್ಲೆಂಡ್ ವಿರುದ್ಧದ ಮೊದಲ ಟೆಸ್ಟ್‌ನಲ್ಲಿ ಭಾರತ ತಂಡ ಮೊದಲ ಇನಿಂಗ್ಸ್‌ನಲ್ಲಿ ಎರಡನೇ ದಿನದ ಅಂತ್ಯಕ್ಕೆ 110 ಓವರ್‌ಗಳಲ್ಲಿ 7 ವಿಕೆಟ್ ನಷ್ಟಕ್ಕೆ 421 ರನ್‌ ಗಳಿಸಿದ್ದು, 175 ಮುನ್ನಡೆ ಸಾಧಿಸಿದೆ.

ಹೈದರಾಬಾದ್‌ನಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಎರಡನೇ ದಿನ ಟೀಂ ಇಂಡಿಯಾ ಬ್ಯಾಟ್ಸ್‌ಮನ್‌ಗಳು ಪಾರಮ್ಯ ಮೆರೆದರು. ಕೆ ಎಲ್ ರಾಹುಲ್(86) ಹಾಗೂ ಆಲ್‌ರೌಂಡರ್‌ ರವೀಂದ್ರ ಜಡೇಜಾ(81) ಅರ್ಧ ಶತಕ ಬಾರಿಸಿದರೆ, ವಿಕೆಟ್ ಕೀಪರ್ ಶ್ರೀಕರ್ ಭರತ್ 41, ಅಕ್ಸರ್ ಪಟೇಲ್ 35 ಹಾಗೂ ಶ್ರೇಯಸ್ ಅಯ್ಯರ್ 35 ರನ್‌ ಗಳಿಸಿ ಭಾರತ ಬೃಹತ್ ಮೊತ್ತದತ್ತ ದಾಪುಗಾಲು ಹಾಕಲು ಕಾರಣರಾದರು.

119/1 ರನ್‌ನೊಂದಿಗೆ ಎರಡನೇ ದಿನದಾಟವನ್ನು ಆರಂಭಿಸಿದ ಟೀಂ ಇಂಡಿಯಾ ಪ್ರಾರಂಭದಲ್ಲಿಯೇ ಜೈಸ್ವಾಲ್ (80) ಹಾಗೂ ಶುಭಮನ್‌ ಗಿಲ್ (23) ಅವರ ವಿಕೆಟ್ ಕಳೆದುಕೊಂಡಿತು. ಕೆ ಎಲ್ ರಾಹುಲ್ ಹಾಗೂ ಶ್ರೇಯಸ್‌ ಅಯ್ಯರ್ 4ನೇ ವಿಕೆಟ್ ನಷ್ಟಕ್ಕೆ 64 ರನ್‌ ಕಲೆ ಹಾಕಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಎಲ್ಲರನ್ನೂ ಒಳಗೊಳ್ಳದಿದ್ದರೆ ‘ಗಣರಾಜ್ಯ’ ಹೇಗಾಗುತ್ತದೆ?

ಶ್ರೇಯಸ್ ಔಟಾದ ನಂತರ ರವೀಂದ್ರ ಜಡೇಜಾ ಅವರೊಂದಿಗೆ ಜೊತೆಯಾಟವಾಡಿದ ಕೆ ಎಲ್ ರಾಹುಲ್ 86 ರನ್‌ ಗಳಿಸಿ ಪೆವಿಲಿಯನ್‌ಗೆ ತೆರಳಿದರು. ನಂತರ ಬಂದ ವಿಕೆಟ್ ಕೀಪರ್ ಶ್ರೀಕರ್ ಭರತ್ 41 ರನ್‌ ಬಾರಿಸಿ ರೂಟ್‌ಗೆ ಎಲ್‌ಬಿ ಆದರು.

ನಂತರದಲ್ಲಿ ಅನಾವಶ್ಯಕ ರನ್‌ ಓಡಲು ಪ್ರಯತ್ನಿಸಿದ ಆರ್‌ ಅಶ್ವಿನ್ 1 ರನ್‌ಗೆ ಔಟಾದರು. ಜಡೇಜಾ ಹಾಗೂ ಅಕ್ಸರ್ ಪಟೇಲ್ 8ನೇ ವಿಕೆಟ್ ಜೊತೆಯಾಟದಲ್ಲಿ 64 ರನ್ ಬಾರಿಸಿದ್ದಾರೆ.

ಇಂಗ್ಲೆಂಡ್ ಪರ ಜೋರೂಟ್ 77/2, ಟಾಮ್‌ ಹಾರ್ಟ್ಲ್ 131/2, ಲೀಚ್‌ ಹಾಗೂ ರಿಯಾನ್ ಅಹಮದ್‌ ತಲಾ ಒಂದು ವಿಕೆಟ್ ಕಬಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...