ಐಪಿಎಲ್ 2023 | ಪಂಜಾಬ್‌ ಹ್ಯಾಟ್ರಿಕ್‌ ಗೆಲುವಿಗೆ ಅಡ್ಡಿಯಾದ ರಾಹುಲ್‌ ತ್ರಿಪಾಠಿ ಆರ್ಭಟ

Date:

ರಾಹುಲ್‌ ತ್ರಿಪಾಠಿ ಅವರ ಸ್ಫೋಟಕ ಬ್ಯಾಟಿಂಗ್‌ ಹಾಗೂ ನಾಯಕ ಐಡೆನ್ ಮಾರ್ಕ್ರಾಮ್ ಅವರ ಸಮಯೋಚಿತ ಆಟದಿಂದ ಸನ್‌ರೈಸರ್ಸ್ ಹೈದರಾಬಾದ್ ತಂಡ ಪಂಜಾಬ್‌ ಕೆಂಗ್ಸ್‌ ಹ್ಯಾಟ್ರಿಕ್‌ ಗೆಲುವಿಗೆ ತಡೆ ನೀಡಿ 8 ವಿಕೆಟ್‌ಗಳ ಭರ್ಜರಿ ಜಯ ಪಡೆಯಿತು.

ಹೈದರಾಬಾದಿನ ರಾಜೀವ್‌ ಗಾಂಧಿ ಇಂಟರ್‌ನ್ಯಾಷನಲ್‌ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್‌ 16ನೇ ಟೂರ್ನಿಯ 14ನೇ ಪಂದ್ಯದಲ್ಲಿ ಪಂಜಾಬ್‌ ನೀಡಿದ್ದ 144 ರನ್‌ಗಳ ಮೊತ್ತವನ್ನು ಬೆನ್ನಟ್ಟಿದ ಹೈದರಾಬಾದ್‌ ತಂಡ 17.1 ಓವರ್‌ಗಳಲ್ಲೇ 2 ವಿಕೆಟ್ ನಷ್ಟಕ್ಕೆ ಗುರಿ ಮುಟ್ಟಿತು.

ರಾಹುಲ್‌ ತ್ರಿಪಾಠಿ 48 ಚೆಂಡುಗಳಲ್ಲಿ 10 ಬೌಂಡರಿ ಮೂರು ಸಿಕ್ಸರ್‌ನೊಂದಿಗೆ ಅಜೇಯ 74 ರನ್‌ ಹಾಗೂ ನಾಯಕ ಐಡೆನ್ ಮಾರ್ಕ್ರಾಮ್ 21 ಎಸೆತಗಳಲ್ಲಿ 6 ಆಕರ್ಷಕ ಬೌಂಡರಿಯೊಂದಿಗೆ 37 ರನ್‌ ಗಳಿಸಿ ಗೆಲುವಿನ ರೂವಾರಿಗಳಾದರು. ಪಂಜಾಬ್‌ಗೆ ಇದು ಮೊದಲ ಸೋಲಾದರೆ, ಟೂರ್ನಿಯಲ್ಲಿ ಎರಡು ಸೋಲುಗಳಿಂದ ಕಂಗೆಟ್ಟಿದ್ದ ಹೈದರಾಬಾದ್‌ ತಂಡ ಪ್ರಥಮ ಗೆಲುವು ದಾಖಲಿಸಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಧವನ್‌ ಏಕಾಂಗಿ ಹೋರಾಟ; ಪಂಜಾಬ್‌ ಗೌರವಾನ್ವಿತ ಮೊತ್ತ

ಟಾಸ್ ಸೋತು ಬ್ಯಾಟಿಂಗ್ ಇಳಿದ ಪಂಜಾಬ್ ಕಿಂಗ್ಸ್ ಮೊದಲ ಎಸೆತದಲ್ಲೇ ವಿಕೆಟ್ ಕಳೆದುಕೊಂಡಿತು. ಹೈದರಾಬಾದ್‌ ಬೌಲಿಂಗ್‌ ದಾಳಿಗೆ ಪಂಜಾಬ್ ಬ್ಯಾಟ್ಸ್‌ಮನ್‌ಗಳು ಕ್ರೀಸ್‌ಗೆ ಬಂದಷ್ಟೇ ವೇಗದಲ್ಲಿ ಪೆವಿಲಿಯನ್‌ ಕಡೆ ಹೋಗುತ್ತಿದ್ದರು. ಆದರೆ ತಂಡಕ್ಕೆ ಆಸರೆಯಾಗಿದ್ದು ನಾಯಕ ಶಿಖರ್ ಧವನ್. ವಿಕೆಟ್ ಪತನದ ನಡುವೆಯೂ ಶಿಖರ್ ಧವನ್ 66 ಎಸೆತದಲ್ಲಿ 12 ಬೌಂಡರಿ ಹಾಗೂ 5 ಭರ್ಜರಿ ಸಿಕ್ಸರ್‌ನೊಂದಿಗೆ ಅಜೇಯ 99 ರನ್ ಸಿಡಿಸಿದರು. ಈ ಮೂಲಕ ಪಂಜಾಬ್ ಕಿಂಗ್ಸ್  20 ಓವರ್‌ಗಳಲ್ಲಿ ಗೌರವಾನ್ವಿತ 143 ರನ್‌ ಗಳಿಸಿತು.

ಹೈದರಾಬಾರ್‌ ಪರ ಮಾಯಾಂಕ್‌ ಮಾರ್ಕಂಡೆ 15/4, ಮಾರ್ಕೋ ಜಾನ್‌ಸೇನ್‌ 16/2 ಹಾಗೂ ಉಮ್ರಾನ್‌ ಮಲ್ಲಿಕ್ 32/2 ವಿಕೆಟ್ ಪಡೆಯುವ ಮೂಲಕ ಯಶಸ್ವಿ ಬೌಲರ್‌ಗಳಾದರು.

blank profile picture 973460 640
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...