ಮಳೆಬಾಧಿತ ಭಾರತ-ಪಾಕಿಸ್ತಾನ ಪಂದ್ಯ ಸೋಮವಾರಕ್ಕೆ ಮುಂದೂಡಿಕೆ

Date:

ಭಾರತ-ಪಾಕಿಸ್ತಾನ ನಡುವಿನ ಸೂಪರ್-4 ಹಂತದ ಮೂರನೇ ಪಂದ್ಯವನ್ನು ಮಳೆಯ ಕಾರಣ ಸೋಮವಾರಕ್ಕೆ ಮುಂದೂಡಲಾಗಿದೆ.

ಕೊಲಂಬೊದ ಆರ್​. ಪ್ರೇಮದಾಸ ಮೈದಾನದಲ್ಲಿ ಇಂದು ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಪಾಕಿಸ್ತಾನ್ ತಂಡದ ನಾಯಕ ಬಾಬರ್ ಆಝಂ ಬೌಲಿಂಗ್ ಆಯ್ದುಕೊಂಡಿದ್ದರು.

ಟೀಮ್ ಇಂಡಿಯಾ 24.1 ಓವರ್​ಗಳಲ್ಲಿ 2 ವಿಕೆಟ್ ಕಳೆದುಕೊಂಡು 147 ರನ್​ ಕಲೆಹಾಕಿತ್ತು. ಈ ವೇಳೆ ಮಳೆ ಬಂದ ಕಾರಣ ಪಂದ್ಯವನ್ನು ಕೆಲಕಾಲ ಸ್ಥಗಿತಗೊಳಿಸಲಾಗಿತ್ತು. ಆ ಬಳಿಕ ಸ್ವಲ್ಪ ಹೊತ್ತು ಮಳೆ ನಿಂತರೂ, ಪಂದ್ಯ ಆರಂಭಕ್ಕೆ ಸಿದ್ಧತೆ ನಡೆಸಲಾಗಿತ್ತು. ಈ ವೇಳೆ ಮತ್ತೆ ವಿಪರೀತ ಮಳೆ ಸುರಿದ ಪರಿಣಾಮ ಪಂದ್ಯವನ್ನು ಸೋಮವಾರಕ್ಕೆ ಮುಂದೂಡಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸೋಮವಾರ ಉಭಯ ತಂಡಗಳು 50 ಓವರ್​ಗಳ ಪಂದ್ಯವನ್ನಾಡಲಿದೆ. ಈಗಾಗಲೇ 24.1 ಓವರ್​ಗಳನ್ನು ಆಡಿರುವ ಟೀಮ್ ಇಂಡಿಯಾ, ಉಳಿದ ಓವರ್​ಗಳನ್ನು ಆಡಲಿದೆ. ಮಳೆ ಬಂದಾಗ ಟೀಮ್ ಇಂಡಿಯಾ ಪರವಾಗಿ ವಿರಾಟ್ ಕೊಹ್ಲಿ ಹಾಗೂ ಕೆಎಲ್ ರಾಹುಲ್ ಕ್ರೀಸ್‌ನಲ್ಲಿದ್ದರು.

ಈಗಾಗಲೇ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ 49 ಎಸೆತಗಳನ್ನು ಎದುರಿಸಿ 4 ಸಿಕ್ಸ್ ಹಾಗೂ 6 ಬೌಂಡರಿಯ ನೆರವಿನಿಂದ 56 ರನ್ ಹಾಗೂ 52 ಎಸೆತಗಳಲ್ಲಿ 10 ಬೌಂಡರಿಯ ನೆರವಿನಿಂದ 58 ರನ್ ​ಗಳಿಸಿದ್ದ ಶುಭ​ಮನ್ ಗಿಲ್ ಔಟಾಗಿದ್ದಾರೆ. ರೋಹಿತ್ ಶರ್ಮಾ ಶಾದಾಬ್ ಖಾನ್‌ಗೆ ವಿಕೆಟ್ ಒಪ್ಪಿಸಿದರೆ, ಶುಭ​ಮನ್ ಗಿಲ್ ಶಾಹೀನ್ ಅಫ್ರಿದಿ ಎಸೆತದಲ್ಲಿ ಕ್ಯಾಚಿತ್ತು ಔಟಾಗಿದ್ದರು.

ಅದಕ್ಕೂ ಮೊದಲು ಈ ಜೋಡಿ ಮೊದಲ ವಿಕೆಟ್‌ಗೆ 16.3 ಓವರ್​ಗಳಲ್ಲಿ 121 ರನ್​ಗಳ​ ಜೊತೆಯಾಟ ನೀಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...