ಐಪಿಎಲ್‌ 2013 | ಪಂಜಾಬ್‌ ಬೌಲಿಂಗ್‌ ದಾಳಿಗೆ ಶರಣಾದ ನಿತೀಶ್ ರಾಣಾ ಪಡೆ; ಕೆಕೆಆರ್‌ಗೆ ಸೋಲು

Date:

  • ಪಂಜಾಬ್‌ ಪರ ಭಾನುಕಾ ರಾಜಪಕ್ಸೆ, ನಾಯಕ ಶಿಖರ್ ಧವನ್ ಉತ್ತಮ ಆಟ
  • ಮಳೆಯಿಂದಾಗಿ ಡಕ್ವರ್ಥ್ ಲೂಯಿಸ್ ಆಧಾರದ ಮೇಲೆ ಪಂಜಾಬ್‌ ಗೆಲುವು

ಐಪಿಎಲ್‌ 16ನೇ ಆವೃತ್ತಿಯ ಎರಡನೇ ಪಂದ್ಯದಲ್ಲಿ ಪಂಜಾಬ್‌ ಕಿಂಗ್ಸ್‌ ಇಲೆವೆನ್‌ ತಂಡದ ವೇಗದ ಬೌಲರ್‌ ಅರ್ಶ್‌ದೀಪ್‌ ಸಿಂಗ್‌ ಅವರ ಅಮೋಘ ಬೌಲಿಂಗ್‌ ದಾಳಿಗೆ ಒಳಗಾದ ನಿತೀಶ್ ರಾಣಾ ನೇತೃತ್ವದ ಕೋಲ್ಕತಾ ನೈಟ್‌ ರೈಡರ್ಸ್‌ 7 ರನ್‌ಗಳ ಸೋಲು ಅನುಭವಿಸಿತು.

ಮೊಹಾಲಿಯ ಐಎಸ್ ಬಿಂದ್ರಾ ಕ್ರೀಡಾಂಗಣದಲ್ಲಿ ಪಂಜಾಬ್‌ ನೀಡಿದ್ದ 191 ರನ್‌ಗಳ ಸವಾಲನ್ನು ಬೆನ್ನಟ್ಟಿದ ಕೆಕೆಆರ್‌ 16 ಓವರ್‌ಗಳಲ್ಲಿ 146 ರನ್‌ ಗಳಿಸಿದ್ದಾಗ ಮಳೆಯಿಂದಾಗಿ ಪಂದ್ಯಕ್ಕೆ ಅಡಚಣೆ ಉಂಟಾಯಿತು. ಮಳೆ ನಿಲ್ಲದ ಕಾರಣ ಅಂಪೈರ್‌ ಮತ್ತು ರೆಫ್ರಿ ಅವರು ಡಕ್ವರ್ಥ್ ಲೂಯಿಸ್ ಆಧಾರದ ಮೇಲೆ ಪಂಜಾಬ್‌ ಕಿಂಗ್ಸ್‌ ಇಲೆವೆನ್‌ ತಂಡವನ್ನು ವಿಜಯಿ ಎಂದು ಘೋಷಿಸಿದರು.

ವೆಂಕಟೇಶ್ ಅಯ್ಯರ್ (34), ನಿತೀಶ್ ರಾಣಾ (24) ಹಾಗೂ ಆಂಡ್ರೆ ರಸೆಲ್ (35) ಬಿರುಸಿನ ಆಟವಾಡಿದರೂ ರನ್‌ ಸರಾಸರಿಯನ್ನು ವೇಗಗೊಳಿಸಲು ಸಾಧ್ಯವಾಗಲಿಲ್ಲ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅಮೊಘ ಬೌಲಿಂಗ್ ಪ್ರದರ್ಶಿಸಿದ ಅರ್ಶ್‌ದೀಪ್‌ ಸಿಂಗ್‌ 19/3 ವಿಕೆಟ್‌ ಉರುಳಿಸಿದರು. ಸ್ಯಾಮ ಕರ್ರನ್‌, ನೇಥನ್ ಎಲ್ಲೀಸ್, ಸಿಕಂದರ್‌ ರಾಜಾ ಹಾಗೂ ರಾಹುಲ್‌ ಚಹರ್‌ ತಲಾ ಒಂದೊಂದು ವಿಕೆಟ್ ಕಿತ್ತು ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದರು.

ಭಾನುಕಾ ರಾಜಪಕ್ಸೆ, ನಾಯಕ ಶಿಖರ್ ಧವನ್ ಉತ್ತಮ ಆಟ

ಇದಕ್ಕೂ ಮುನ್ನ ಟಾಸ್‌ ಸೋತು ಬ್ಯಾಟಿಂಗ್‌ ಆರಂಭಿಸಿದ ಪಂಜಾಬ್‌ ತಂಡ ಆರಂಭಿಕ ಬ್ಯಾಟ್ಸ್‌ಮೆನ್‌ಗಳಾದ ಪ್ರಭಸಿಮ್ರನ್ ಸಿಂಗ್ ಹಾಗೂ ನಾಯಕ ಶಿಖರ್ ಧವನ್ ಜೋಡಿ ಮೊದಲ ವಿಕೆಟ್‌ಗೆ 2 ಓವರ್‌ಗಳಿಗೆ 23 ರನ್‌ಗಳ ಜತೆಯಾಟವಾಡಿತು.

12 ಎಸೆತಗಳನ್ನು ಎದುರಿಸಿದ ಪ್ರಭಸಿಮ್ರನ್ ಸಿಂಗ್ 2 ಬೌಂಡರಿ, 2 ಸಿಕ್ಸರ್‌ನೊಂದಿಗೆ 23 ರನ್‌ ಗಳಿಸಿ ಟಿಮ್ ಸೌಥಿಗೆ ಕ್ಯಾಚಿತ್ತು ಪೆವಿಲಿಯನ್‌ಗೆ ನಿರ್ಗಮಿಸಿದರು.

ನಂತರ ಆಗಮಿಸಿದ ಎರಡನೇ ಕ್ರಮಾಂಕದ ಆಟಗಾರ ಭಾನುಕಾ ರಾಜಪಕ್ಸೆ, ನಾಯಕ ಶಿಖರ್ ಧವನ್ ಅವರೊಂದಿಗೆ 55 ಎಸೆತಗಳಲ್ಲಿ 86 ರನ್‌ಗಳ ಜತೆಯಾಟವಾಡಿದರು. ಅಬ್ಬರದ ಬ್ಯಾಟಿಂಗ್ ನಡೆಸಿದ ರಾಜಪಕ್ಸೆ ಕೇವಲ 32 ಎಸೆತಗಳಲ್ಲಿ 5 ಬೌಂಡರಿ ಹಾಗೂ 2 ಸಿಕ್ಸರ್‌ನೊಂದಿಗೆ 50 ರನ್‌ ಸಿಡಿಸಿ ಉಮೇಶ್ ಯಾದವ್‌ಗೆ ವಿಕೆಟ್ ಒಪ್ಪಿಸಿದರು. ನಾಯಕ ಶಿಖರ್ ಧವನ್ ಭರ್ಜರಿ ಬ್ಯಾಟಿಂಗ್‌ ನಡೆಸಿ 29 ಎಸೆತಗಳಲ್ಲಿ 6 ಬೌಂಡರಿಗಳೊಂದಿಗೆ 40 ರನ್ ಬಾರಿಸಿ ವರುಣ್‌ಗೆ ಬೌಲ್ಡ್‌ ಆದರು.

ಕೊನೆಯಲ್ಲಿ ವಿಕೆಟ್ ಕೀಪರ್ ಜಿತೇಶ್ ಶರ್ಮಾ(21), ಸಿಕಂದರ್ ರಾಜಾ (16) ಹಾಗೂ ಸ್ಯಾಮ್ ಕರ್ರನ್‌ (26) ಕೂಡ ಭರ್ಜರಿ ಬ್ಯಾಟಿಂಗ್ ಆಡಿ 20 ಓವರ್‌ಗಳಲ್ಲಿ 5 ವಿಕೆಟ್‌ ನಷ್ಟಕ್ಕೆ 191 ರನ್‌ ಕಲೆ ಹಾಕಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...