ಐಪಿಎಲ್ 2023 | ಪಂಜಾಬ್‌ ವಿರುದ್ಧ ಗೆದ್ದ ಆರ್‌ಆರ್‌ಗೆ ಪ್ಲೇಆಫ್‌ ಆಸೆ ಜೀವಂತ

Date:

ದೇವದತ್ ಪಡಿಕ್ಕಲ್,ಯಶಸ್ವಿ ಜೈಸ್ವಾಲ್ ಅವರ ಆಕರ್ಷಕ ಅರ್ಧ ಶತಕ ಹಾಗೂ ಶಿಮ್ರಾನ್ ಹೆಟ್ಮೆಯರ್ ಹಾಗೂ ರಿಯಾನ್‌ ಪರಾಗ್‌ ಅವರ ಸ್ಫೋಟಕ ಬ್ಯಾಟಿಂಗ್‌ ನೆರವಿನಿಂದ ರಾಜಸ್ಥಾನ್ ರಾಯಲ್ಸ್ ತಂಡ ಪಂಜಾಬ್‌ ತಂಡವನ್ನು 4 ವಿಕೆಟ್‌ಗಳಿಂದ ಮಣಿಸಿ ಪ್ಲೇಆಫ್ ಆಸೆಯನ್ನು ಜೀವಂತವಾಗಿರಿಸಿಕೊಂಡಿದೆ.

ಹಿಮಾಚಲ ಪ್ರದೇಶದ ಧರ್ಮಶಾಲಾದಲ್ಲಿ ನಡೆದ ಐಪಿಎಲ್‌ 2023ರ 16ನೇ ಆವೃತ್ತಿಯ 66ನೇ ಪಂದ್ಯದಲ್ಲಿ ರಾಜಸ್ಥಾನ್‌ ರಾಯಲ್ಸ್ ತಂಡ ಪಂಜಾಬ್‌ ಕಿಂಗ್ಸ್ ನೀಡಿದ 188 ರನ್‌ಗಳ ಗುರಿಯನ್ನು 19.4 ಓವರ್‌ಗಳಲ್ಲಿ ತಲುಪಿ ಜಯ ಸಾಧಿಸಿತು. ಅಂತಿಮ ಪಂದ್ಯದಲ್ಲಿ ಪರಾಜಯ ಕಂಡ ಪಂಜಾಬ್‌ ತಂಡ ಟೂರ್ನಿಯಿಂದ ನಿರ್ಗಮಿಸಿತು.

ಆರ್‌ಆರ್‌ ಪರ ಬ್ಯಾಟರ್‌ಗಳಾದ ಯಶಸ್ವಿ ಜೈಸ್ವಾಲ್ 50(36 ಎಸೆತ, 8 ಬೌಂಡರಿ),ದೇವದತ್ ಪಡೀಕಲ್ 51 (30 ಎಸೆತ, 5 ಬೌಂಡರಿ, 3 ಸಿಕ್ಸರ್ ),ಶಿಮ್ರಾನ್ ಹೆಟ್ಮೆಯರ್ ಅವರು 28 ಚೆಂಡುಗಳಲ್ಲಿ 3 ಸಿಕ್ಸರ್ ಹಾಗೂ 4 ಬೌಂಡರಿಯೊಂದಿಗೆ ಸಿಡಿಸಿದ 46 ರನ್‌ ಹಾಗೂ ಕೊನೆಯಲ್ಲಿ ರಿಯಾನ್‌ ಪರಾಗ್ 12 ಎಸೆತಗಳಲ್ಲಿ 2 ಸಿಕ್ಸರ್ 1 ಬೌಂಡರಿಯೊಂದಿಗೆ 20 ರನ್‌ಗಳ ಬಿರುಸಿನ ಆಟವಾಡಿ ಗೆಲುವಿನ ದಡ ಮುಟ್ಟಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದಕ್ಕೂ ಮೊದಲು ಟಾಸ್‌ ಸೋತು ಬ್ಯಾಟಿಂಗ್‌ ಮಾಡಿದ ಪಂಜಾಬ್‌ ಕಿಂಗ್ಸ್ ತಂಡ ಸ್ಯಾಮ್ ಕರನ್, ಜಿತೇಶ್ ಶರ್ಮಾ ಹಾಗೂ ಶಾರುಖ್ ಖಾನ್ ಅವರ ಉತ್ತಮ ಬ್ಯಾಟಿಂಗ್‌ ನೆರವಿನಿಂದ ನಿಗದಿತ 20 ಓವರ್‌ಗಳಲ್ಲಿ 5 ವಿಕೆಟ್ ನಷ್ಟಕ್ಕೆ 187 ರನ್‌ ಕಲೆ ಹಾಕಿತು.

ಮೊದಲ ಓವರ್‌ನಲ್ಲೇ ಇನ್‌ಫಾರ್ಮ್‌ ಬ್ಯಾಟರ್‌ ಪ್ರಭಸಿಮ್ರನ್‌ ಸಿಂಗ್‌ (2) ಎಡಗೈ ವೇಗಿ ಟ್ರೆಂಟ್‌ ಬೌಲ್ಟ್‌ಗೆ ವಿಕೆಟ್‌ ಒಪ್ಪಿಸಿದರು. ಇದರ ಬೆನ್ನಲ್ಲೇ ಅಥರ್ವ ತಾಯ್ದೆ (19) ಶೈನಿ ಬೌಲಿಂಗ್‌ನಲ್ಲಿ ಔಟಾದರು. ಸ್ವಲ್ಪ ಕಾಲ ಬ್ಯಾಟ್‌ ಬೀಸಿದ ಶಿಖರ್‌ ಧವನ್ (19) ಕೂಡ ಜಂಪಾ ಬೌಲಿಂಗ್‌ನಲ್ಲಿ ಎಲ್‌ಬಿ ಆದರು.

ಲಿಯಾಮ್‌ ಲಿವಿಂಗ್‌ಸ್ಟೋನ್‌ (9) ವಿಕೆಟ್‌ ಪತನದೊಂದಿಗೆ ಪಂಜಾಬ್‌ 50ಕ್ಕೆ 4 ವಿಕೆಟ್‌ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತ್ತು. ಆದರೆ, ಇನಿಂಗ್ಸ್ ಮಧ್ಯದ ಮತ್ತು ಸ್ಲಾಗ್‌ ಓವರ್‌ಗಳಲ್ಲಿ ಸಿಡಿದೆದ್ದ ಸ್ಯಾಮ್‌ ಕರನ್ (49 ಅಜೇಯ), ಜಿತೇಶ್‌ ಶರ್ಮಾ (44) ಮತ್ತು ಶಾರುಖ್‌ ಖಾನ್ (41 ಅಜೇಯ) ರಾಯಲ್ಸ್‌ ಬೌಲರ್‌ಗಳ ಬೆವರಳಿಸಿ ಸವಾಲಿನ ಮೊತ್ತ ತಂದುಕೊಟ್ಟರು.

ರಾಯಲ್ಸ್‌ ಪರ ವೇಗಿ ನವದೀಪ್‌ ಸೈನಿ (40ಕ್ಕೆ 3) ಯಶಸ್ವಿ ಬೌಲರ್‌ ಎನಿಸಿದರು. ಬೆನ್ನು ನೋವಿನ ಕಾರಣದಿಂದಾಗಿ ಇಂದಿನ ಪಂದ್ಯದಲ್ಲಿ ಸ್ಪಿನ್ನರ್‌ ಅಶ್ವಿನ್‌ ಆಡಲಿಲ್ಲ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...