ಐಪಿಎಲ್ 2023 | ಟಾಸ್‌ ಗೆದ್ದ ರಾಜಸ್ಥಾನ; ವಿಶೇಷತೆ ಮೆರೆದ ಆರ್‌ಸಿಬಿ

Date:

  • ವಿರಾಟ್‌ ಕೊಹ್ಲಿ(0) ಹಾಗೂ ಶಾಬಾಜ್‌ ಅಹಮದ್ (2) ಔಟ್‌
  • ಆರ್‌ಸಿಬಿಗೆ ಆರಂಭಿಕ ಆಘಾತ ನೀಡಿದ ಟ್ರೆಂಟ್ ಬೌಲ್ಟ್‌

ಐಪಿಎಲ್ 16ನೇ ಆವೃತ್ತಿಯ 32ನೇ ಪಂದ್ಯದಲ್ಲಿ ಟಾಸ್‌ ಗೆದ್ದ ರಾಜಸ್ಥಾನ ತಂಡದ ನಾಯಕ ಸಂಜು ಸ್ಯಾಮ್ಸನ್‌ ಆರ್‌ಸಿಬಿ ತಂಡವನ್ನು ಬ್ಯಾಟಿಂಗ್‌ಗೆ ಆಹ್ವಾನಿಸಿದ್ದಾರೆ.

ತವರು ಮೈದಾನ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಬ್ಯಾಟಿಂಗ್‌ಗೆ ಇಳಿದ ರಾಯಲ್ಸ್‌ ಚಾಲೆಂಜರ್ಸ್‌ ಬೆಂಗಳೂರು ತಂಡ 4 ಓವರ್‌ ಆಡುವಷ್ಟರಲ್ಲೇ ಪ್ರಮುಖ ಬ್ಯಾಟರ್‌ಗಳಾದ ವಿರಾಟ್‌ ಕೊಹ್ಲಿ(0) ಹಾಗೂ ಶಾಬಾಜ್‌ ಅಹಮದ್ ಅವರ ವಿಕೆಟ್‌ ಕಳೆದುಕೊಂಡು ಆರಂಭಿಕ ಆಘಾತ ಅನುಭವಿಸಿದೆ.

ರಾಜಸ್ಥಾನದ ವೇಗದ ಬೌಲರ್‌ ಟ್ರೆಂಟ್ ಬೌಲ್ಟ್‌ ಆರಂಭಿಕ ಆಟಗಾರರನ್ನು ಉರುಳಿಸಿ ಮೇಲುಗೈ ಸಾಧಿಸಿದರು. ಇದರೊಂದಿಗೆ ಬೌಲ್ಟ್‌ ಐಪಿಎಲ್‌ನಲ್ಲಿ 100 ವಿಕೆಟ್‌ಗಳನ್ನು ಕಬಳಿಸಿದ ಸಾಧನೆ ಮಾಡಿದರು. ಆರ್‌ಸಿಬಿ ಸ್ಕೋರ್ 7 ಓವರ್‌ಗಳಲ್ಲಿ 72/2.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಫಾಫ್ ಡು ಪ್ಲೆಸಿಸ್‌ ಸಂಪೂರ್ಣ ಫಿಟ್ ಆಗದ ಹಿನ್ನೆಲೆಯಲ್ಲಿ ಇಂದಿನ ಪಂದ್ಯದಲ್ಲೂ ವಿರಾಟ್ ಕೊಹ್ಲಿ ಆರ್‌ಸಿಬಿ ತಂಡವನ್ನು ಮುನ್ನಡೆಸುತ್ತಿದ್ದಾರೆ. ಇಂಪ್ಯಾಕ್ಟ್‌ ಆಟಗಾರನ ರೂಪದಲ್ಲಿ ಫಾಫ್ ಡು ಪ್ಲೆಸಿಸ್‌ ಅರಂಭಿಕನಾಗಿ ಕಣಕ್ಕಿಳಿಯಲಿದ್ದಾರೆ. ತಂಡದಲ್ಲಿ ಒಂದು ಮಹತ್ವದ ಬದಲಾವಣೆ ಮಾಡಲಾಗಿದೆ. ವೇಯ್ನ್ ಪಾರ್ನೆಲ್ ಬದಲಿಗೆ ಡೇವಿಡ್ ವಿಲ್ಲಿ ಸ್ಥಾನ ಪಡೆದುಕೊಂಡಿದ್ದಾರೆ.

ಎರಡೂ ತಂಡಗಳಲ್ಲಿ ಉತ್ತಮ ಬ್ಯಾಟರ್‌ಗಳಿದ್ದು, ಬ್ಯಾಟ್ಸಮೆನ್‌ಗಳ ಸ್ವರ್ಗ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮತ್ತೊಮ್ಮೆ ಹೆಚ್ಚು ರನ್‌ ಬರುವ ನಿರೀಕ್ಷೆ ಇದೆ. ರಾಜಸ್ಥಾನ ತಂಡದಲ್ಲಿ ಜೋಸ್‌ ಬಟ್ಲರ್‌, ಯಶಸ್ವಿ ಜೈಸ್ವಾಲ್‌, ಸಂಜು ಸ್ಯಾಮ್ಸನ್‌, ಶಿಮ್ರೊನ್‌ ಹೆಟ್ಮೇಯರ್‌ರಂತಹ ಘಟಾನುಘಟಿಗಳಿದ್ದರೆ, ಹೀಗಾಗಿ ಎರಡೂ ತಂಡಗಳ ಬೌಲರ್‌ಗಳು ಒತ್ತಡದಲ್ಲೇ ಬೌಲಿಂಗ್‌ ಮಾಡಬೇಕಾಗಿದೆ.

ಪರಿಸರ ಸಂರಕ್ಷಣೆಗೆ ಹಸಿರು ಜೆರ್ಸಿ ತೊಟ್ಟ ಆರ್‌ಸಿಬಿ

ಹಸಿರು ಸಂರಕ್ಷಣೆಯ ಪ್ರಚಾರಕ್ಕಾಗಿ ಕಳೆದ ಹಲವು ವರ್ಷಗಳಿಂದ ಆರ್‌ಸಿಬಿ ತಂಡ ಒಂದು ಪಂದ್ಯಕ್ಕೆ ಹಸಿರು ಜೆರ್ಸಿ ತೊಡುವ ಸಂಪ್ರದಾಯ ಪಾಲಿಸಿಕೊಂಡು ಬಂದಿದೆ. ಇಂದಿನ ಪಂದ್ಯದಲ್ಲಿ ಆರ್‌ಸಿಬಿ ಆಟಗಾರರು ಹಸಿರು ಜೆರ್ಸಿಯಲ್ಲಿ ಕಾಣಿಸಿಕೊಂಡಿದ್ದಾರೆ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್‌ ವೇಳೆ ಸಂಗ್ರಹವಾಗುವ ಪ್ಲ್ಯಾಸ್ಟಿಕ್‌ ತ್ಯಾಜ್ಯವನ್ನು ಬಳಸಿ ಈ ಜೆರ್ಸಿಗಳನ್ನು ತಯಾರಿಸಲಾಗುತ್ತದೆ ಎನ್ನುವುದು ವಿಶೇಷ.

ಈ ಸುದ್ದಿ ಓದಿದ್ದೀರಾ?: ಐಪಿಎಲ್‌ 2023 | ಲಕ್ನೊ ವಿರುದ್ಧ ಗುಜರಾತ್‌ ನಿರಾಯಾಸದ ಗೆಲುವು

ಆಡುತ್ತಿರುವ ಹನ್ನೊಂದರ ಬಳಗ

ಆರ್‌ಸಿಬಿ: ವಿರಾಟ್ ಕೊಹ್ಲಿ(ನಾಯಕ), ಫಾಫ್‌ ಡು ಪ್ಲೆಸಿಸ್, ಮಹಿಪಾಲ್‌ ಲೋಮ್ರಾರ್, ಗ್ಲೆನ್‌ ಮ್ಯಾಕ್ಸ್‌ವೆಲ್‌, ಸುಯಶ್‌ ಪ್ರಭುದೇಸಾಯಿ, ಶಾಬಾಜ್‌ ಅಹಮದ್, ದಿನೇಶ್‌ ಕಾರ್ತಿಕ್‌, ವನಿಂದು ಹಸರಂಗ, ಹರ್ಷಲ್‌ ಪಟೇಲ್‌, ಡೇವಿಡ್ ವಿಲ್ಲಿ, ಮೊಹಮ್ಮದ್ ಸಿರಾಜ್‌.

ರಾಜಸ್ಥಾನ್ ರಾಯಲ್ಸ್‌ : ಜೋಸ್ ಬಟ್ಲರ್‌, ಯಶಸ್ವಿ ಜೈಸ್ವಾಲ್‌, ಸಂಜು ಸ್ಯಾಮ್ಸನ್‌ (ನಾಯಕ), ದೇವದತ್ ಪಡಿಕ್ಕಲ್‌, ಶಿಮ್ರೊನ್‌ ಹೆಟ್ಮೇಯರ್‌, ರಿಯಾನ್‌ ಪರಾಗ್, ರವಿಚಂದ್ರನ್‌ ಅಶ್ವಿನ್‌, ಆ್ಯಡಂ ಜಂಪಾ, ಟ್ರೆಂಟ್ ಬೌಲ್ಟ್‌, ಸಂದೀಪ್‌ ಶರ್ಮಾ, ಯುಜುವೇಂದ್ರ ಚಹಲ್‌.

blank profile picture 973460 640
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...