ರಣಜಿ ಸೆಮಿಫೈನಲ್ | ರಾಹುಲ್‌ – ಪಡಿಕ್ಕಲ್‌ ಶತಕದ ಆಟ; ಬೃಹತ್‌ ಮೊತ್ತದತ್ತ ಕರ್ನಾಟಕ

Date:

ಉತ್ತರಾಖಂಡದ ವಿರುದ್ಧ ರಣಜಿ ಟ್ರೋಫಿಯ ಸೆಮಿಫೈನಲ್ ಪಂದ್ಯಾವಳಿಯ ಮೊದಲ ದಿನ ರಾಜ್ಯ ಭರ್ಜರಿ ಬ್ಯಾಟಿಂಗ್‌ ಪ್ರದರ್ಶನ ನೀಡಿದೆ. 15ನೇ ಬಾರಿಗೆ ಫೈನಲ್‌ಗೆ ಪ್ರವೇಶಿಸುವ ಇರಾದೆಯಲ್ಲಿರುವ ಕರ್ನಾಟಕ ಮೊದಲ ದಿನವೇ 2 ವಿಕೆಟ್‌ ನಷ್ಟದೊಂದಿಗೆ 355 ರನ್‌ಗಳೊಂದಿಗೆ ಉತ್ತಮ ಸ್ಥಿತಿಯನ್ನು ಕಾಯ್ದುಕೊಂಡಿದೆ.

ಟಾಸ್‌ ಗೆದ್ದ ಉತ್ತರಾಖಂಡ ತಂಡ ಕರ್ನಾಟಕವನ್ನು ಬ್ಯಾಟಿಂಗ್‌ಗೆ ಆಹ್ವಾನಿಸಿತು. ಆದರೆ ನಾಯಕ ಕುನಾಲ್ ಚಾಂಡೇಲಾ ಅವರ ಈ ನಿರ್ಧಾರ ಮೊದಲ ದಿನ ಉತ್ತರಾಖಂಡ ತಂಡಕ್ಕೆ ಮುಳುವಾಗಿ ಪರಿಣಮಿಸಿದೆ. ಏಕೆಂದರೆ ಕರ್ನಾಟಕ ಆಟಗಾರರ ಬ್ಯಾಟಿಂಗ್‌ ಅಬ್ಬರಕ್ಕೆ ಉತ್ತರಾಖಂಡ ಬೌಲರ್‌ಗಳು ನೆಲಕಚ್ಚಿದರು.

ಕೆ ಎಲ್‌ ರಾಹುಲ್‌ ಹಾಗೂ ಮಯಾಂಕ್ ಅಗರ್ವಾಲ್ ಆರಂಭಿಕರಾಗಿ ಮೈದಾನಕ್ಕೆ ಇಳಿದರು. ಮಯಾಂಕ್‌ 32 ಎಸೆತಗಳನ್ನು ಎದುರಿಸಿ 5 ರನ್‌ ಗಳಿಸಿ ಆದಿತ್ಯ ರಾವತ್‌ ಅವರ ಓವರ್‌ನಲ್ಲಿ ಕ್ಯಾಚ್‌ ಕೊಟ್ಟು ವಿಕೆಟ್‌ ಒಪ್ಪಿಸಿದರು. ಆರಂಭದಲ್ಲಿ ಮಯಾಂಕ್‌ ಅವರ ವಿಕೆಟ್‌ ಕಳೆದುಕೊಂಡ ಬಳಿಕ ರಾಜ್ಯಕ್ಕೆ ನಾಯಕ ದೇವದತ್ ಪಡಿಕ್ಕಲ್ – ರಾಹುಲ್‌ ಅದ್ಭುತ ಆಟವಾಡಿದರು. ಇಬ್ಬರು ಶತಕ ಬಾರಿಸಿ ತಂಡಕ್ಕೆ ಆಸರೆಯಾದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಸೋತರೂ ಕ್ರೀಡಾಭಿಮಾನಿಗಳ ಮನಗೆದ್ದ ಗುರ್ಬಾಜ್: ಆಫ್ರಿಕಾ ಪಡೆಗೆ ನಡುಕ ಹುಟ್ಟಿಸಿದ ಅಫ್ಘಾನ್ ಆಟಗಾರ

ರಾಹುಲ್‌ ಅತ್ಯುತ್ತಮವಾಗಿ 11 ಬೌಂಡರಿ, 5 ಸಿಕ್ಸರ್‌ಗಳನ್ನು ಸಿಡಿಸಿದರು. ಇದರ ಜತೆ ಪಡಿಕ್ಕಲ್‌ ಕೂಡ ರಾಹುಲ್‌ಗೆ ಅಷ್ಟೇ ವೇಗವಾಗಿ ಜತೆಯಾದರು. 16 ಬೌಂಡರಿ, 2 ಸಿಕ್ಸರ್‌ ಸಹಿತ ಪಡಿಕ್ಕಲ್‌ 148 ರನ್‌ ಗಳೊಂದಿಗೆ ಇನ್ನೂ ಅಂಕಣದಲ್ಲಿದ್ದಾರೆ. ತಂಡ 292 ರನ್‌ಗಳಿಸಿದ್ದಾಗ ರಾಜ್ಯ ರಾಹುಲ್‌ ಅವರ ವಿಕೆಟ್‌ ಕಳೆದುಕೊಂಡಿತು. 141 ರನ್‌ ಗಳಿಸಿ ರಾಹುಲ್‌ ಆದಿತ್ಯ ರಾವತ್‌ ಎಸೆತಕ್ಕೆ ಔಟ್‌ ಆದರು. ರಾಹುಲ್ – ಪಡಿಕ್ಕಲ್ 257 ರನ್‌ಗಳ ಜತೆಯಾಟ ನೀಡಿದರು.

ಕರುಣ್‌ ನಾಯರ್‌ 37 ರನ್‌ನೊಂದಿಗೆ ಪಡಿಕ್ಕಲ್‌ ಜತೆ ಕ್ರೀಸ್‌ನಲ್ಲಿದ್ದಾರೆ. ಮೊದಲ ದಿನದ ಅಂತ್ಯಕ್ಕೆ ಕರ್ನಾಟಕ 90 ಓವರ್‌ಗಳಲ್ಲಿ 355 ಕ್ಕೆ 2 ವಿಕೆಟ್‌ ಕಳೆದುಕೊಂಡು ಅತ್ಯುತ್ತಮ ಸ್ಥಿತಿಯಲ್ಲಿದೆ.

ಪಶ್ಚಿಮ ಬಂಗಾಳ – ಜಮ್ಮು ಕಾಶ್ಮೀರ ನಡುವಿನ ಮತ್ತೊಂದು ಸೆಮಿಫೈನಲ್‌ ಪಂದ್ಯದಲ್ಲಿ ಬಂಗಾಳ ತಂಡ ಮೊದಲ ದಿನದ ಅಂತ್ಯಕ್ಕೆ 90 ಓವರ್‌ಗಳಲ್ಲಿ 249 ರನ್‌ ಗಳಿಸಿ 5 ವಿಕೆಟ್‌ ಕಳೆದುಕೊಂಡಿದೆ. ಸುದೀಪ್ ಕುಮಾರ್ ಘರಾಮಿ 136 ರನ್‌ ಗಳಿಸಿ ಔಟಾಗದೆ ಕ್ರೀಸ್‌ನಲ್ಲಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...