ರಣಜಿ ಟ್ರೋಫಿ ಫೈನಲ್ | ಸಂಕಷ್ಟದಲ್ಲಿ ಕರ್ನಾಟಕ; ಮಯಾಂಕ್ ಏಕಾಂಗಿ ಹೋರಾಟ

Date:

ರಣಜಿ ಟ್ರೋಫಿ 2025-26ರ ಫೈನಲ್ ಪಂದ್ಯದಲ್ಲಿ ಜಮ್ಮು ಮತ್ತು ಕಾಶ್ಮೀರ ತಂಡದ ಬೃಹತ್ ಮೊತ್ತವನ್ನು ಬೆನ್ನಟ್ಟಿರುವ ಕರ್ನಾಟಕ ತಂಡವು ಮೂರನೇ ದಿನದಂತ್ಯಕ್ಕೆ 5 ವಿಕೆಟ್ ಕಳೆದುಕೊಂಡು 220 ರನ್ ಗಳಿಸಿದ್ದು, ಸಂಕಷ್ಟಕ್ಕೆ ಸಿಲುಕಿದೆ. ಆದಾಗ್ಯೂ, ನಾಯಕ ಮಯಾಂಕ್ ಅಗರ್ವಾಲ್ ಅವರ ಆಕರ್ಷಕ ಶತಕ ತಂಡಕ್ಕೆ ಆಶಾಕಿರಣವಾಗಿದೆ.

ಮೊದಲು ಬ್ಯಾಟ್ ಮಾಡಿದ ಜಮ್ಮು ಕಾಶ್ಮೀರ ತಂಡವು ತನ್ನ ಮೊದಲ ಇನಿಂಗ್ಸ್‌ನಲ್ಲಿ 584 ರನ್‌ಗಳ ಬೃಹತ್ ಮೊತ್ತ ಕಲೆಹಾಕಿತ್ತು. ಇದಕ್ಕೆ ಉತ್ತರವಾಗಿ ಮೊದಲ ಇನಿಂಗ್ಸ್ ಆರಂಭಿಸಿದ ಕರ್ನಾಟಕ ತಂಡವು, ಪ್ರಮುಖ ವಿಕೆಟ್‌ಗಳನ್ನು ಬೇಗನೆ ಕಳೆದುಕೊಂಡು ಆಘಾತ ಅನುಭವಿಸಿತು. ಮೂರನೇ ದಿನದ ಆಟ ಮುಗಿಯುವ ಹೊತ್ತಿಗೆ ಕರ್ನಾಟಕ ಇನ್ನೂ 364 ರನ್‌ಗಳ ಹಿನ್ನಡೆಯಲ್ಲಿದೆ.

ಇದನ್ನು ಓದಿದ್ದೀರಾ? ‘ಚಿನ್ನಸ್ವಾಮಿ’ಯಲ್ಲಿ ಐಪಿಎಲ್ ಪಂದ್ಯಗಳು ಇನ್ನೂ ಅತಂತ್ರ: ಬೇಷರತ್ ಅನುಮತಿಗೆ ಆರ್‌ಸಿಬಿ ಪಟ್ಟು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಒಂದೆಡೆ ವಿಕೆಟ್‌ಗಳು ಉರುಳುತ್ತಿದ್ದರೂ ಕ್ರೀಸ್‌ನಲ್ಲಿ ಭದ್ರವಾಗಿ ನೆಲೆಯೂರಿ ಛಲದಿಂದ ಹೋರಾಟ ನಡೆಸುತ್ತಿರುವ ನಾಯಕ ಮಯಾಂಕ್ ಅಗರ್ವಾಲ್ 207 ಎಸೆತಗಳಲ್ಲಿ ಅಜೇಯ 130 ರನ್ ಗಳಿಸಿ ಆಡುತ್ತಿದ್ದಾರೆ. ಅವರಿಗೆ ಉತ್ತಮ ಜೊತೆ ನೀಡುತ್ತಿರುವ ಕೃತಿಕ್ ಕೃಷ್ಣ 75 ಎಸೆತಗಳಲ್ಲಿ ಅಜೇಯ 27 ರನ್ ಗಳಿಸಿ ನಾಲ್ಕನೇ ದಿನಕ್ಕೆ ಕ್ರೀಸ್ ಕಾಯ್ದುಕೊಂಡಿದ್ದಾರೆ. ಸದ್ಯ ಕ್ರೀಸ್‌ನಲ್ಲಿರುವ ಇವರಿಬ್ಬರ ಜೊತೆಯಾಟವು ಕರ್ನಾಟಕ ತಂಡದ ಪಾಲಿಗೆ ಅತ್ಯಂತ ನಿರ್ಣಾಯಕವಾಗಿದೆ.

ಜಮ್ಮು ಕಾಶ್ಮೀರ ತಂಡದ ಪರ ಅಖೀಬ್ ನಬಿ 32/3, ಸುನಿಲ್ ಕುಮಾರ್, ಯದುವೀರ್ ಸಿಂಗ್ ತಲಾ ಒಂದೊಂದು ವಿಕೆಟ್ ಕಬಳಿಸಿದ್ದಾರೆ. ನಾಲ್ಕನೇ ದಿನದ ಆಟವು ಕರ್ನಾಟಕ ತಂಡಕ್ಕೆ ಅಗ್ನಿಪರೀಕ್ಷೆಯಾಗಿದ್ದು, ಮಯಾಂಕ್ ಅಗರ್ವಾಲ್ ಮತ್ತು ಕೃತಿಕ್ ಕೃಷ್ಣ ಅವರ ಮೇಲೆ ತಂಡವನ್ನು ಹಿನ್ನಡೆಯಿಂದ ಪಾರು ಮಾಡುವ ಅತಿದೊಡ್ಡ ಜವಾಬ್ದಾರಿಯಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...