ರಣಜಿ ಟ್ರೋಫಿ: ಡ್ರಾದಲ್ಲಿ ಅಂತ್ಯಗೊಂಡ ಸೆಮಿಫೈನಲ್; ಇನಿಂಗ್ಸ್ ಮುನ್ನಡೆಯೊಂದಿಗೆ ಫೈನಲ್‌ಗೆ ಕರ್ನಾಟಕ

Date:

ಕರ್ನಾಟಕ ಮತ್ತು ಉತ್ತರಾಖಂಡ ನಡುವಿನ ‘ರಣಜಿ ಟ್ರೋಫಿ 2025-26’ನೇ ಸಾಲಿನ ಸೆಮಿಫೈನಲ್ ಪಂದ್ಯವು ಐದನೇ ಹಾಗೂ ಅಂತಿಮ ದಿನದಂದು ಡ್ರಾದಲ್ಲಿ ಅಂತ್ಯಗೊಂಡಿದೆ. ಆದರೆ, ಮೊದಲ ಇನಿಂಗ್ಸ್‌ನಲ್ಲಿ ಸಾಧಿಸಿದ ಭಾರಿ ಮುನ್ನಡೆಯ ಆಧಾರದ ಮೇಲೆ ಕರ್ನಾಟಕ ತಂಡ ಫೈನಲ್ ಪ್ರವೇಶಿಸಿದೆ.

ಲಖನೌದ ಏಕನಾ ಕ್ರೀಡಾಂಗಣದಲ್ಲಿ ಟಾಸ್ ಗೆದ್ದ ಉತ್ತರಾಖಂಡ ತಂಡವು ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿತು. ಹೀಗಾಗಿ ಮೊದಲು ಬ್ಯಾಟಿಂಗ್ ಮಾಡುವ ಅವಕಾಶ ಪಡೆದ ಕರ್ನಾಟಕ, ನಾಯಕ ದೇವದತ್ ಪಡಿಕ್ಕಲ್ ಅವರ ಅಮೋಘ ದ್ವಿಶತಕ (232), ಕೆ.ಎಲ್. ರಾಹುಲ್ (141) ಹಾಗೂ ಯುವ ಪ್ರತಿಭೆ ಸ್ಮರಣ್ ರವಿಚಂದ್ರನ್ (135) ಅವರ ಆಕರ್ಷಕ ಶತಕಗಳ ಬಲದಿಂದ 736 ರನ್‌ಗಳ ಬೃಹತ್ ಮೊತ್ತ ಪೇರಿಸಿತ್ತು. ಈ ಬೃಹತ್ ಮೊತ್ತವನ್ನು ಬೆನ್ನಟ್ಟಿದ ಉತ್ತರಾಖಂಡ ತಂಡವು ಕರ್ನಾಟಕದ ಕರಾರುವಾಕ್ ಬೌಲಿಂಗ್ ದಾಳಿಗೆ ನಲುಗಿ ತನ್ನ ಮೊದಲ ಇನಿಂಗ್ಸ್‌ನಲ್ಲಿ ಕೇವಲ 233 ರನ್‌ಗಳಿಗೆ ಆಲೌಟ್ ಆಗುವ ಮೂಲಕ 503 ರನ್‌ಗಳ ಭಾರಿ ಹಿನ್ನಡೆ ಅನುಭವಿಸಿತ್ತು.

503 ರನ್‌ಗಳ ಭಾರಿ ಮುನ್ನಡೆಯೊಂದಿಗೆ ತನ್ನ ಎರಡನೇ ಇನಿಂಗ್ಸ್ ಆರಂಭಿಸಿದ ಕರ್ನಾಟಕ 323 ರನ್‌ಗಳಿಗೆ ಆಲೌಟ್ ಆಗುವ ಮೂಲಕ, ಉತ್ತರಾಖಂಡ ತಂಡಕ್ಕೆ ಬರೋಬ್ಬರಿ 827 ರನ್‌ಗಳ ಅಸಾಧ್ಯ ಗುರಿಯನ್ನು ನೀಡಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಬ್ಯಾಟ್ ಬೀಸಿದ ‘ಫಿನಿಶರ್’ಗೆ ಕ್ಲೀನ್ ಬೌಲ್ಡ್ ಆದ ಸಂಸದೆ

ಈ ಬೃಹತ್ ಗುರಿಯನ್ನು ಬೆನ್ನಟ್ಟಿದ ಉತ್ತರಾಖಂಡ, ಅಂತಿಮ ದಿನದಾಟದ ಅಂತ್ಯಕ್ಕೆ ತನ್ನ ಎರಡನೇ ಇನಿಂಗ್ಸ್‌ನಲ್ಲಿ 6 ವಿಕೆಟ್ ಕಳೆದುಕೊಂಡು 260 ರನ್ ಗಳಿಸಿ ಹೋರಾಟ ನಡೆಸುತ್ತಿದ್ದಾಗ ಉಭಯ ನಾಯಕರ ಸಮ್ಮತಿಯ ಮೇರೆಗೆ ಪಂದ್ಯವನ್ನು ಡ್ರಾ ಎಂದು ಘೋಷಿಸಲಾಯಿತು. ಪಂದ್ಯವು ಡ್ರಾಗೊಂಡರೂ, ಟೂರ್ನಿಯ ನಿಯಮದ ಪ್ರಕಾರ ಮೊದಲ ಇನಿಂಗ್ಸ್‌ನಲ್ಲಿ ಮುನ್ನಡೆ ಸಾಧಿಸಿದ ಕಾರಣ ಕರ್ನಾಟಕ ತಂಡವು ಪ್ರಶಸ್ತಿ ಸುತ್ತಿಗೆ (ಫೈನಲ್‌) ಅರ್ಹತೆ ಪಡೆದುಕೊಂಡಿದೆ.

ಫೆಬ್ರವರಿ 24ರಂದು ಫೈನಲ್ ಕದನ
ರಣಜಿ ಟ್ರೋಫಿಯ ಪ್ರಶಸ್ತಿ ಸುತ್ತಿಗೆ ಲಗ್ಗೆಯಿಟ್ಟಿರುವ ಕರ್ನಾಟಕ ತಂಡವು, ಫೆಬ್ರವರಿ 24ರಂದು ಆರಂಭವಾಗಲಿರುವ ಮಹತ್ವದ ಫೈನಲ್ ಪಂದ್ಯದಲ್ಲಿ ಬಲಿಷ್ಠ ಜಮ್ಮು ಮತ್ತು ಕಾಶ್ಮೀರ ತಂಡವನ್ನು ಎದುರಿಸಲಿದೆ. ಭರ್ಜರಿ ಫಾರ್ಮ್‌ನಲ್ಲಿರುವ ರಾಜ್ಯ ತಂಡವು ಈ ಮೂಲಕ ಮತ್ತೊಂದು ರಣಜಿ ಕಿರೀಟವನ್ನು ಮುಡಿಗೇರಿಸಿಕೊಳ್ಳುವ ವಿಶ್ವಾಸದಲ್ಲಿದೆ.

ಸಂಕ್ಷಿಪ್ತ ಸ್ಕೋರ್:
ಕರ್ನಾಟಕ (ಮೊದಲ ಇನಿಂಗ್ಸ್): 736/10 (ದೇವದತ್ ಪಡಿಕ್ಕಲ್ 232, ಕೆ.ಎಲ್. ರಾಹುಲ್ 141, ಸ್ಮರಣ್ ರವಿಚಂದ್ರನ್ 135)
ಉತ್ತರಾಖಂಡ (ಮೊದಲ ಇನಿಂಗ್ಸ್): 233/10
ಕರ್ನಾಟಕ (ಎರಡನೇ ಇನಿಂಗ್ಸ್): 323/10
ಉತ್ತರಾಖಂಡ (ಎರಡನೇ ಇನಿಂಗ್ಸ್): 260/6 (ಪಂದ್ಯ ಡ್ರಾ)

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...