ರಣಜಿ ಟ್ರೋಫಿ ಸೆಮಿ | ಉತ್ತರಾಖಂಡ ವಿರುದ್ಧ ಕರ್ನಾಟಕ 689/6 ರನ್; ಪಡಿಕ್ಕಲ್ ದ್ವಿಶತಕ, ಸ್ಮರಣ್ ಶತಕದ ಅಬ್ಬರ

Date:

ಲಖನೌದಲ್ಲಿ ನಡೆಯುತ್ತಿರುವ ರಣಜಿ ಟ್ರೋಫಿ ಟೂರ್ನಿಯ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ಕರ್ನಾಟಕ ತಂಡವು ಎರಡನೇ ದಿನದಂದು ಕೂಡ ಉತ್ತರಾಖಂಡ ವಿರುದ್ಧ ಸಂಪೂರ್ಣ ಪಾರಮ್ಯ ಮೆರೆದಿದೆ. ನಾಯಕ ದೇವದತ್ ಪಡಿಕ್ಕಲ್ ಅವರ ಆಕರ್ಷಕ ದ್ವಿಶತಕ ಹಾಗೂ ಮಧ್ಯಮ ಕ್ರಮಾಂಕದಲ್ಲಿ ರವಿಚಂದ್ರನ್ ಸ್ಮರಣ್ ಅವರ ಸಮಯೋಚಿತ ಶತಕದ ನೆರವಿನಿಂದ ರಾಜ್ಯ ತಂಡವು ಮೊದಲ ಇನಿಂಗ್ಸ್‌ನಲ್ಲಿ ಬೃಹತ್ ಮೊತ್ತದತ್ತ ದಾಪುಗಾಲಿಟ್ಟಿದೆ.

​ಎರಡನೇ ದಿನದಾಟದ ಅಂತ್ಯಕ್ಕೆ ಕರ್ನಾಟಕ ತಂಡವು 180 ಓವರ್‌ಗಳಲ್ಲಿ 6 ವಿಕೆಟ್ ನಷ್ಟಕ್ಕೆ ಬರೋಬ್ಬರಿ 689 ರನ್ ಕಲೆಹಾಕುವ ಮೂಲಕ ಎದುರಾಳಿ ಮೇಲೆ ಪ್ರಬಲ ಹಿಡಿತ ಸಾಧಿಸಿದೆ.

ಮೊದಲ ದಿನವೇ ಶತಕ ಸಿಡಿಸಿ ಭದ್ರ ಬುನಾದಿ ಹಾಕಿಕೊಟ್ಟಿದ್ದ ನಾಯಕ ದೇವದತ್ ಪಡಿಕ್ಕಲ್, ಎರಡನೇ ದಿನವೂ ತಮ್ಮ ಬ್ಯಾಟಿಂಗ್ ವೈಭವ ಮುಂದುವರಿಸಿದರು. ಉತ್ತರಾಖಂಡ ಬೌಲರ್‌ಗಳನ್ನು ಕಾಡಿದ ಪಡಿಕ್ಕಲ್, 330 ಎಸೆತಗಳಲ್ಲಿ 29 ಬೌಂಡರಿ ಹಾಗೂ 3 ಸಿಕ್ಸರ್‌ಗಳ ನೆರವಿನಿಂದ 232 ರನ್ ಗಳಿಸಿ ಲಕ್ಷ್ಯ ರಾಯ್ಚಂದಾನಿ ಅವರಿಗೆ ವಿಕೆಟ್ ಒಪ್ಪಿಸಿದರು. ಕೆ.ಎಲ್. ರಾಹುಲ್ (141) ಅವರೊಂದಿಗೆ ಸೇರಿ ತಂಡಕ್ಕೆ ಉತ್ತಮ ಆರಂಭ ಒದಗಿಸಿದ್ದ ಪಡಿಕ್ಕಲ್, ತಂಡದ ಮೊತ್ತವನ್ನು ಐನ್ನೂರರ ಗಡಿ ಸಮೀಪಿಸಲು ನೆರವಾದರು. ಕರುಣ್ ನಾಯರ್ 60 ರನ್ (105 ಎಸೆತ, 8 ಬೌಂಡರಿ) ಗಳಿಸಿ ಉತ್ತಮ ಜೊತೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಬ್ಯಾಟ್ ಬೀಸಿದ ‘ಫಿನಿಶರ್’ಗೆ ಕ್ಲೀನ್ ಬೌಲ್ಡ್ ಆದ ಸಂಸದೆ

ಪಡಿಕ್ಕಲ್ ನಿರ್ಗಮನದ ನಂತರ ಜವಾಬ್ದಾರಿ ಹೊತ್ತ ರವಿಚಂದ್ರನ್ ಸ್ಮರಣ್, ಕುಸಿಯದಂತೆ ಇನಿಂಗ್ಸ್ ಕಟ್ಟಿದರು. ತಾಳ್ಮೆಯ ಆಟ ಪ್ರದರ್ಶಿಸಿದ ಸ್ಮರಣ್, ದಿನದಾಟದ ಅಂತ್ಯದವರೆಗೂ ಅಜೇಯರಾಗಿ ಉಳಿದು 191 ಎಸೆತಗಳಲ್ಲಿ 11 ಬೌಂಡರಿಗಳೊಂದಿಗೆ 121 ರನ್ ಗಳಿಸಿದರು. ಇವರಿಗೆ ಉತ್ತಮ ಬೆಂಬಲ ನೀಡಿದ ವಿಕೆಟ್ ಕೀಪರ್ ಕೃತಿಕ್ ಕೃಷ್ಣ 60 ರನ್ (103 ಎಸೆತ) ಗಳಿಸಿ ಔಟಾದರು.

​ಶ್ರೇಯಸ್ ಗೋಪಾಲ್ (0) ಶೂನ್ಯ ಸುತ್ತಿದರಾದರೂ, ಕ್ರೀಸ್‌ಗೆ ಬಂದ ವಿದ್ಯಾಧರ್ ಪಾಟೀಲ್ (ಅಜೇಯ 35) ಸ್ಮರಣ್ ಅವರಿಗೆ ಉತ್ತಮ ಜೊತೆ ನೀಡುತ್ತಿದ್ದಾರೆ. ಈ ಜೋಡಿ ಮುರಿಯದ 7ನೇ ವಿಕೆಟ್‌ಗೆ ಈಗಾಗಲೇ ಅರ್ಧಶತಕದ ಜೊತೆಯಾಟವಾಡಿದೆ.

​ಉತ್ತರಾಖಂಡ ಪರ ಆದಿತ್ಯ ರಾವತ್ 132 ರನ್ ನೀಡಿ 3 ವಿಕೆಟ್ ಪಡೆದರೆ, ಅಭಯ್ ನೇಗಿ, ಅವನೀಶ್ ಸುಧಾ ಮತ್ತು ಲಕ್ಷ್ಯ ರಾಯ್ಚಂದಾನಿ ತಲಾ ಒಂದೊಂದು ವಿಕೆಟ್ ಹಂಚಿಕೊಂಡರು.

​ಸಂಕ್ಷಿಪ್ತ ಸ್ಕೋರ್:
ಕರ್ನಾಟಕ (ಮೊದಲ ಇನಿಂಗ್ಸ್): 180 ಓವರ್‌ಗಳಲ್ಲಿ 6 ವಿಕೆಟ್‌ಗೆ 689 (ದೇವದತ್ ಪಡಿಕ್ಕಲ್ 232, ಕೆ.ಎಲ್. ರಾಹುಲ್ 141, ರವಿಚಂದ್ರನ್ ಸ್ಮರಣ್ ಅಜೇಯ 121, ಕರುಣ್ ನಾಯರ್ 60, ಕೃತಿಕ್ ಕೃಷ್ಣ 60, ವಿದ್ಯಾಧರ್ ಪಾಟೀಲ್ ಅಜೇಯ 35; ಆದಿತ್ಯ ರಾವತ್ 132ಕ್ಕೆ 3, ಅಭಯ್ ನೇಗಿ 99ಕ್ಕೆ 1).

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಂಜುಗೆ ಧೋನಿ ಕೀಪಿಂಗ್ ಗ್ಲೌಸ್ ಹಸ್ತಾಂತರ; ಮುಂದೆ ನಾಯಕತ್ವವೂ? ಸಿಎಸ್‌ಕೆ ಯೋಜನೆ ಬಗ್ಗೆ ಕುಂಬ್ಳೆ ವಿಶ್ಲೇಷಣೆ

ಭಾರತದ ಟಿ20 ವಿಶ್ವಕಪ್ ಗೆಲುವಿನಲ್ಲಿ ರುವಾರಿ ಎಂದೇ ಮಿಂಚುತ್ತಿರುವ ಸಂಜು ಸ್ಯಾಮ್ಸನ್,...

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

BREAKING NEWS | ದಾವಣಗೆರೆ, ಬಾಗಲಕೋಟೆ ಉಪಚುನಾವಣೆ ದಿನಾಂಕ ಘೋಷಣೆ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆ ಘೋಷಣೆಯ...