ರಚಿನ್‌ ರವೀಂದ್ರ ಶತಕ; ಮೊದಲ ಇನಿಂಗ್ಸ್‌ನಲ್ಲಿ ಕಿವೀಸ್‌ 356 ರನ್‌ ಮುನ್ನಡೆ

Date:

ಮಧ್ಯಮ ಕ್ರಮಾಂಕದ ಆಟಗಾರ ಬೆಂಗಳೂರು ಮೂಲದ ರಚಿನ್‌ ರವೀಂದ್ರ ಅವರ ಅಮೋಘ ಶತಕ ಹಾಗೂ ಬೌಲರ್‌ ಟಿಮ್‌ ಸೌಥಿ ಅವರ ಭರ್ಜರಿ ಅರ್ಧ ಶತಕದ ನೆರವಿನಿಂದ ನ್ಯೂಜಿಲೆಂಡ್‌ ತಂಡ ಮೊದಲ ಇನಿಂಗ್ಸ್‌ನಲ್ಲಿ 91.3 ಓವರ್‌ಗಳಲ್ಲಿ 402 ಗಳನ್ನು ದಾಖಲಿಸಿ, 356 ರನ್‌ಗಳ ಮುನ್ನಡೆ ಪಡೆದಿದೆ.

ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಮೊದಲ ಟೆಸ್ಟ್‌ನ ಮೂರನೇ ದಿನವಾದ ಇಂದು 180/3 ವಿಕೆಟ್‌ ನಷ್ಟದೊಂದಿಗೆ ಆಟ ಆರಂಭಿಸಿದ ಕಿವೀಸ್ ಪಡೆಗೆ ರಚಿನ್‌ ರವೀಂದ್ರ ಹಾಗೂ ಟಿಮ್‌ ಸೌಥಿ ಆಸರೆಯಾದರು. ಉಳಿದ ಬ್ಯಾಟರ್‌ಗಳು ಭಾರತದ ಬೌಲಿಂಗ್‌ ದಾಳಿಗೆ ಸಿಲುಕಿ ಪೆವಿಲಿಯನ್‌ಗೆ ತೆರಳುತ್ತಿದ್ದರೆ ರಚಿನ್‌ ರವೀಂದ್ರ ಹಾಗೂ ಟಿಮ್‌ ಸೌಥಿ ಉತ್ತಮ ಜೊತೆಯಾಟದೊಂದಿಗೆ ತಂಡವನ್ನು 400 ಗಡಿ ದಾಟಲು ಕಾರಣರಾದರು.

ಈ ಸುದ್ದಿ ಓದಿದ್ದೀರಾ? ತೆಲಂಗಾಣ ಡಿಎಸ್‌ಪಿ ಆಗಿ ಅಧಿಕಾರ ವಹಿಸಿಕೊಂಡ ಕ್ರಿಕೆಟಿಗ ಮೊಹಮ್ಮದ್ ಸಿರಾಜ್‌

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

137 ರನ್‌ಗಳ 8ನೇ ವಿಕೆಟ್‌ ಜೊತೆಯಾಟದೊಂದಿಗೆ ಇಬ್ಬರು ಆಟಗಾರರು ಭರ್ಜರಿ ಆಟವಾಡಿದರು. ರಚಿನ್‌ ರವೀಂದ್ರ 157 ಎಸೆತಗಳಲ್ಲಿ 13 ಬೌಂಡರಿ ಹಾಗೂ 4 ಸಿಕ್ಸರ್‌ಗಳೊಂದಿಗೆ 137 ರನ್‌ ಬಾರಿಸಿದರು. ರಚಿನ್‌ಗೆ ಉತ್ತಮ ಜೊತೆ ನೀಡಿದ ಟಿಮ್‌ ಸೌಥಿ 73 ಚೆಂಡುಗಳಲ್ಲಿ 5 ಬೌಂಡರಿ ಹಾಗೂ 4 ಸಿಕ್ಸರ್‌ಗಳೊಂದಿಗೆ 65 ರನ್‌ ಸಿಡಿಸಿದರು.

ಟೀಂ ಇಂಡಿಯಾ ಪರ ರವೀಂದ್ರ ಜಡೇಜಾ ಹಾಗೂ ಕುಲ್‌ದೀಪ್‌ ಯಾದವ್‌ ತಲಾ 3 ವಿಕೆಟ್, ಸಿರಾಜ್‌ 2 ಹಾಗೂ ಅಶ್ವಿನ್‌, ಬುಮ್ರಾ ತಲಾ ಒಂದೊಂದು ವಿಕೆಟ್‌ ಕಬಳಿಸಿ ನ್ಯೂಜಿಲೆಂಡ್‌ ಆಲೌಟ್‌ ಆಗಲು ಪ್ರಮುಖ ಪಾತ್ರ ವಹಿಸಿದರು.

2ನೇ ಇನಿಂಗ್ಸ್‌ ಆರಂಭಿಸಿರುವ ಭಾರತ ಟೀ ವಿರಾಮದ ವೇಳೆಗೆ ವಿಕೆಟ್‌ ನಷ್ಟವಿಲ್ಲದೆ 6 ಓವರ್‌ಗಳಲ್ಲಿ 22 ರನ್‌ ಗಳಿಸಿತ್ತು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಂಜುಗೆ ಧೋನಿ ಕೀಪಿಂಗ್ ಗ್ಲೌಸ್ ಹಸ್ತಾಂತರ; ಮುಂದೆ ನಾಯಕತ್ವವೂ? ಸಿಎಸ್‌ಕೆ ಯೋಜನೆ ಬಗ್ಗೆ ಕುಂಬ್ಳೆ ವಿಶ್ಲೇಷಣೆ

ಭಾರತದ ಟಿ20 ವಿಶ್ವಕಪ್ ಗೆಲುವಿನಲ್ಲಿ ರುವಾರಿ ಎಂದೇ ಮಿಂಚುತ್ತಿರುವ ಸಂಜು ಸ್ಯಾಮ್ಸನ್,...

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

BREAKING NEWS | ದಾವಣಗೆರೆ, ಬಾಗಲಕೋಟೆ ಉಪಚುನಾವಣೆ ದಿನಾಂಕ ಘೋಷಣೆ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆ ಘೋಷಣೆಯ...