ಮಗ ಕ್ರಿಕೆಟಿಗನಾಗದೇ ಇದ್ದರೆ ಚೆನ್ನಾಗಿರುತ್ತಿತ್ತು: ಬೇಸರ ಹೊರಹಾಕಿದ ರವೀಂದ್ರ ಜಡೇಜಾ ತಂದೆ

Date:

  • ರಿವಾಬಾಳನ್ನು ಮಗ ಮದುವೆಯಾಗದೇ ಇದ್ದಿದ್ದರೆ ಚೆನ್ನಾಗಿರುತ್ತಿತ್ತು: ಅನಿರುದ್ಧ್ ಸಿಂಗ್ ಜಡೇಜಾ
  • ‘ಪತ್ನಿಯ ಹೆಸರಿಗೆ ಮಸಿ ಬಳಿಯಲು ಯತ್ನ’ ಎಂದು ಟ್ವೀಟ್ ಮಾಡಿದ ಕ್ರಿಕೆಟಿಗ ಜಡೇಜಾ

ಟೀಮ್ ಇಂಡಿಯಾದ ಆಟಗಾರನಾಗಿರುವ ರವೀಂದ್ರ ಜಡೇಜಾ ಸದ್ಯ ವಿವಾದದಲ್ಲಿ ಸಿಲುಕಿಕೊಂಡಿದ್ದಾರೆ.

“ಮಗನನ್ನು ಕ್ರಿಕೆಟರ್ ಮಾಡದಿರುತ್ತಿದ್ದರೆ ಚೆನ್ನಾಗಿತ್ತು. ರವೀಂದ್ರ ಜಡೇಜಾಗೂ ನಮಗೂ ಈಗ ಯಾವುದೇ ಸಂಬಂಧವಿಲ್ಲ, ಮಾತು ಬಿಟ್ಟು ವರ್ಷಗಳೇ ಕಳೆದಿವೆ. ಇದಕ್ಕೆಲ್ಲ ಆತನ ಪತ್ನಿಯೇ ಕಾರಣ” ಎಂದು ಜಡೇಜಾ ತಂದೆ ಅನಿರುದ್ಧ್ ಸಿಂಗ್ ಜಡೇಜಾ, ಕುಟುಂಬದೊಳಗೆ ಸಂಘರ್ಷ ನಡೆದಿರುವ ಸಂಗತಿಗಳನ್ನು ಹೊರಹಾಕಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರವೀಂದ್ರ ಜಡೇಜಾ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ 15 ವರ್ಷಗಳನ್ನು ಪೂರೈಸಿದ್ದಾರೆ. ಈ ಸಂದರ್ಭದಲ್ಲಿ ಅವರ ತಂದೆಯನ್ನು ‘ದೈನಿಕ್ ಭಾಸ್ಕರ್’ ಸಂದರ್ಶನ ನಡೆಸಿದೆ.

ಈ ವೇಳೆ ತಮ್ಮ ಕುಟುಂಬದಲ್ಲಿ ನಡೆದಿರುವ ಸಂಗತಿಗಳನ್ನು ಹೊರಹಾಕಿರುವ ಅನಿರುದ್ಧ್ ಸಿಂಗ್, ‘ಕುಟುಂಬದೊಳಗಿನ ಈ ಸಂಘರ್ಷಕ್ಕೆ ಜಡೇಜಾ ಪತ್ನಿ, ಸದ್ಯ ಗುಜರಾತ್‌ನ ಬಿಜೆಪಿ ಶಾಸಕಿಯಾಗಿರುವ ರಿವಾಬಾ ಜಡೇಜಾ ಕಾರಣ’ ಎಂದು ಆರೋಪಿಸಿದ್ದಾರೆ.

ಜಡೇಜಾ ಪತ್ನಿ ರಿವಾಬಾ 2022ರಲ್ಲಿ ಗುಜರಾತ್‌ನಲ್ಲಿ ನಡೆದಿದ್ದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಜಾಮ್‌ನಗರ ಉತ್ತರ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿ, ಶಾಸಕಿಯಾಗಿ ಆಯ್ಕೆಯಾಗಿದ್ದರು.

Jadeja
ಪತ್ನಿ ರಿವಾಬಾರೊಂದಿಗೆ ರವೀಂದ್ರ ಜಡೇಜಾ

ಸಂದರ್ಶನದಲ್ಲಿ “ತಮ್ಮ ಮಗ ರವೀಂದ್ರ ಮತ್ತು ಸೊಸೆ ರಿವಾಬಾ ಅವರೊಂದಿಗೆ ಯಾವುದೇ ಸಂಬಂಧವಿಲ್ಲ” ಎಂದು ಹೇಳಿದ್ದಾರೆ.

“ಅವರು ನಮ್ಮನ್ನು ಕರೆಯುವುದಿಲ್ಲ, ನಾವು ಸಹ ಅವರನ್ನು ಕರೆಯುವುದಿಲ್ಲ. ನಮ್ಮ ನಡುವೆ ಯಾವುದೇ ಸಂಬಂಧವಿಲ್ಲ. ಕಳೆದ ಐದು ವರ್ಷಗಳಿಂದ ಮೊಮ್ಮಗಳ ಮುಖವನ್ನೇ ನೋಡಿಲ್ಲ” ಎಂದಿದ್ದಾರೆ.

Jadeja Father

“ಮದುವೆಯಾದ ಎರಡು-ಮೂರು ತಿಂಗಳ ನಂತರ ಕುಟುಂಬದೊಳಗೆ ವಿವಾದಗಳು ನಡೆಯಲಾರಂಭಿಸಿದವು. ಆಮೇಲೆ ರಿವಾಬಾ ಎಲ್ಲವೂ ತನ್ನದಾಗಬೇಕು ಎಂದು ಹೇಳಲು ಪ್ರಾರಂಭಿಸಿದಳು. ಅದರಲ್ಲೂ ರಿವಾಬಾ ಅವರ ತಾಯಿ ಎಲ್ಲವನ್ನೂ ನೋಡಿಕೊಳ್ಳುತ್ತಾರೆ. ನಮ್ಮ ಕುಟುಂಬದ ವಿಚಾರದಲ್ಲಿ ಅವರ ಹಸ್ತಕ್ಷೇಪ ಅತಿಯಾಗಿತ್ತು” ಎಂದಿದ್ದಾರೆ.

ರವೀಂದ್ರ ಜಡೇಜಾ ಅವರ ತಂದೆ ಹತ್ತು ವರ್ಷಗಳಿಂದ ಜಾಮ್‌ನಗರದ ಎರಡು ಬೆಡ್‌ರೂಮ್ ಇರುವ ಫ್ಲ್ಯಾಟ್‌ವೊಂದರಲ್ಲಿ ವಾಸಿಸುತ್ತಿದ್ದಾರೆ. 20 ಸಾವಿರ ಪಿಂಚಣಿಯ ನೆರವಿನಿಂದ ಜೀವನ ಸಾಗಿಸುತ್ತಿದ್ದಾರೆ.

“ರವೀಂದ್ರನನ್ನು ಕ್ರಿಕೆಟಿಗನನ್ನಾಗಿ ಮಾಡಲು ಶ್ರಮಿಸಿದ್ದೇವೆ. ಅವನ ಸಹೋದರಿ ರವೀಂದ್ರನನ್ನು ತಾಯಿಯಂತೆ ನೋಡಿಕೊಂಡಳು. ಆದರೆ ಇದೀಗ ಅವನಿಗೂ ನೈನಾಗೂ ಸಂಬಂಧವೇ ಇಲ್ಲದಂತಾಗಿದೆ. ಅವರನ್ನು ಕ್ರಿಕೆಟಿಗನನ್ನಾಗಿ ಮಾಡದೇ ಇದ್ದಿದ್ದರೆ ಚೆನ್ನಾಗಿತ್ತು. ಸೊಸೆ ರಿವಾಬಾ ಕೇವಲ ಹಣದ ಬಗ್ಗೆ ಕಾಳಜಿ ವಹಿಸುತ್ತಾಳೆ. ಆತನಿಗೆ ಮದುವೆಯಾಗದೇ ಇದ್ದಿದ್ದರೆ ಚೆನ್ನಾಗಿತ್ತು. ಆತನಿಗೆ ಏನು ಮಾಟಮಂತ್ರ ಹಾಕಿದ್ದಾಳೋ ದೇವನಿಗೇ ಗೊತ್ತು. ನಾವು ಈ ಪರಿಸ್ಥಿತಿಯಲ್ಲಿ ಇರುತ್ತಿರಲಿಲ್ಲ” ಎಂದು ಬೇಸರ ಹೊರಹಾಕಿದ್ದಾರೆ.

‘ಪತ್ನಿಯ ಹೆಸರಿಗೆ ಮಸಿ ಬಳಿಯಲು ಯತ್ನ’ ಎಂದು ಟ್ವೀಟ್ ಮಾಡಿದ ಕ್ರಿಕೆಟಿಗ ಜಡೇಜಾ

ರವೀಂದ್ರ ಜಡೇಜಾ ತಂದೆ ನೀಡಿರುವ ಹೇಳಿಕೆಯು ಈಗ ಸೋಷಿಯಲ್ ಮೀಡಿಯಾಗಳಲ್ಲಿ ವೈರಲಾಗಿದೆ. ಈ ಹಿನ್ನೆಲೆಯಲ್ಲಿ ಇದು ವಿವಾದಕ್ಕೂ ಕಾರಣವಾಗಿದೆ.

ಈ ಬಗ್ಗೆ ಗುಜರಾತ್ ಭಾಷೆಯಲ್ಲಿ ಟ್ವೀಟ್ ಮಾಡಿರುವ ಟೀಮ್ ಇಂಡಿಯಾ ಕ್ರಿಕೆಟಿಗ ರವೀಂದ್ರ ಜಡೇಜಾ, “ಪತ್ನಿಯ ಹೆಸರಿಗೆ ಮಸಿ ಬಳಿಯುವ ಯತ್ನವಿದು. ದೈನಿಕ್ ಭಾಸ್ಕರ್‍‌ನ ಈ ಸಂದರ್ಶನವು ಪೂರ್ವಯೋಜಿತವಾದುದು. ಇದನ್ನು ನಿರ್ಲಕ್ಷ್ಯಿಸಿ” ಎಂದು ಬರೆದುಕೊಂಡಿದ್ದಾರೆ.

“ದೈನಿಕ್ ಭಾಸ್ಕರ್ ಸಂದರ್ಶನದಲ್ಲಿ ಹೇಳಿರುವ ಎಲ್ಲಾ ವಿಷಯಗಳು ಅಸಂಬದ್ಧ, ಇದು ಸಂಪೂರ್ಣವಾಗಿ ಅರ್ಥಹೀನ ಮತ್ತು ಅಸತ್ಯ. ಇದು ನಿಜವಾಗಿಯೂ ಖಂಡನೀಯ. ನನ್ನ ಹೆಂಡತಿಯ ಹೆಸರನ್ನು ಹಾಳುಮಾಡುವ ಪ್ರಯತ್ನ ಇದು. ನನಗೂ ಹೇಳಲು ಬಹಳಷ್ಟು ವಿಷಯಗಳಿವೆ. ಆದರೆ ಅದನ್ನು ಸಾರ್ವಜನಿಕವಾಗಿ ಹೇಳುವುದಿಲ್ಲ” ಎಂದು ಜಡೇಜಾ ಬರೆದಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...