ಬಿಸಿಸಿಐ ನಿಯಮ ಉಲ್ಲಂಘಿಸಿದ ರವೀಂದ್ರ ಜಡೇಜಾ; ನಿಷೇಧ ಶಿಕ್ಷೆ ಸಾಧ್ಯತೆ

Date:

ಎಡ್ಜ್‌ಬಾಸ್ಟನ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಭಾರತ ಮತ್ತು ಇಂಗ್ಲೆಂಡ್ ನಡುವಿನ ಟೆಸ್ಟ್ ಸರಣಿಯ ಎರಡನೇ ಪಂದ್ಯದಲ್ಲಿ, ಟೀಮ್ ಇಂಡಿಯಾದ ಆಲ್‌ರೌಂಡರ್ ರವೀಂದ್ರ ಜಡೇಜಾ ದಿನದ ಆಟ ಆರಂಭವಾಗುವ ಮೊದಲೇ ದೊಡ್ಡ ತಪ್ಪನ್ನು ಎಸಗಿದ್ದಾರೆ.

ಈ ಟೆಸ್ಟ್ ಪಂದ್ಯದಲ್ಲಿ ಜಡೇಜಾ 89 ರನ್ ಗಳಿಸಿ ತಂಡಕ್ಕೆ ನರವಾದರೂ, ಅವರು ಬಿಸಿಸಿಐ ನಿಯಮವನ್ನು ಮುರಿದಿದ್ದಾರೆ. ಆಸ್ಟ್ರೇಲಿಯಾ ಪ್ರವಾಸದ ನಂತರ, ಬಿಸಿಸಿಐ ಎಲ್ಲ ಆಟಗಾರರು ಮತ್ತು ಸಹಾಯಕ ಸಿಬ್ಬಂದಿಗೆ ಕೆಲವು ಹೊಸ ಮಾರ್ಗಸೂಚಿಗಳನ್ನು ಹೊರಡಿಸಿತ್ತು. ಅದನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಕೇಳಲಾಗಿತ್ತು. ಆದಾಗ್ಯೂ, ಎಡ್ಜ್‌ಬಾಸ್ಟನ್ ಟೆಸ್ಟ್ ಪಂದ್ಯದ ಎರಡನೇ ದಿನದ ಆಟ ಪ್ರಾರಂಭವಾಗುವ ಮೊದಲು, ಜಡೇಜಾ ಒಂದು ದೊಡ್ಡ ನಿಯಮವನ್ನು ಮುರಿದರು, ಇದಕ್ಕಾಗಿ ಮಂಡಳಿಯಿಂದ ಶಿಕ್ಷೆಯಾಗುತ್ತದೆಯೇ ಎಂಬುದರ ಮೇಲೆ ಎಲ್ಲರ ಕುತೂಹಲ ಮೂಡಿದೆ.

ಎರಡನೇ ದಿನದ ಆಟ ಶುರು ಆಗುವುದಕ್ಕೂ ಮುನ್ನ, ಟಮ ಇಂಡಿಯಾ ತಮ್ಮ ಹೋಟೆಲ್‌ನಿಂದ ಕ್ರೀಡಾಂಗಣಕ್ಕೆ ಬರುತ್ತಿದ್ದಾಗ, ಜಡೇಜಾ ಬಿಸಿಸಿಐ ಮಾಡಿದ ನಿಯಮವನ್ನು ನಿರ್ಲಕ್ಷಿಸಿದರು. ಭಾರತದ 2024-25 ಆಸ್ಟ್ರೇಲಿಯಾ ಪ್ರವಾಸದ ನಂತರ ಜಾರಿಗೆ ತರಲಾದ ಬಿಸಿಸಿಐ ಶಿಷ್ಟಾಚಾರವನ್ನು ರವೀಂದ್ರ ಜಡೇಜಾ ಉಲ್ಲಂಘಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? IND -ENG 2ND Test: ಮೊದಲ ದಿನ ಭಾರತ ಶುಭಾರಂಭ; ಗಿಲ್‌ ಶತಕ, ಜೈಸ್ವಾಲ್‌ ಅರ್ಧ ಶತಕ

ಈ ಶಿಷ್ಟಾಚಾರದ ಪ್ರಕಾರ, ಎಲ್ಲ ಆಟಗಾರರು ತಂಡದ ಬಸ್‌ನಲ್ಲಿ ಒಟ್ಟಿಗೆ ಮೈದಾನಕ್ಕೆ ಮತ್ತು ಹೊರಗೆ ಪ್ರಯಾಣಿಸಬೇಕಾಗುತ್ತದೆ, ಇದರಲ್ಲಿ ಯಾವುದೇ ವೈಯಕ್ತಿಕ ಚಲನೆಗೆ ಅವಕಾಶವಿಲ್ಲ, ಆದರೆ ಬರ್ಮಿಂಗ್ಹ್ಯಾಮ್ ಟೆಸ್ಟ್ ಪಂದ್ಯದ ಎರಡನೇ ದಿನದಂದು, ಜಡೇಜಾ ತಂಡದ ಬಸ್‌ನಲ್ಲಿ ಕ್ರೀಡಾಂಗಣವನ್ನು ತಲುಪಲಿಲ್ಲ. ಅವರು ಇಲ್ಲಿಗೆ ಒಬ್ಬಂಟಿಯಾಗಿ ಬಂದು ಎಸ್‌ಒಪಿಯನ್ನು ಉಲ್ಲಂಘಿಸಿದರು. ಉಳಿದ ಆಟಗಾರರು ಬರುವ ಮೊದಲು ಅವರು ಎಡ್ಜ್‌ಬಾಸ್ಟನ್ ತಲುಪಿದ್ದರು. ಆದರೆ, ತಂಡದ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ಜಡೇಜಾ ಈ ನಿಯಮವನ್ನು ಮುರಿದಿದ್ದಾರೆ ಎನ್ನಲಾಗಿದೆ.

ಎರಡನೇ ದಿನದಾಟದಲ್ಲಿ ಉತ್ತಮವಾಗಿ ಬ್ಯಾಟಿಂಗ್ ಮಾಡಿದ ರವಿಂದ್ರ ಜಡೇಜಾ 89 ರನ್‌ ಗಳಿಸುವ ಮೂಲಕ ಟೀಂ ಇಂಡಿಯಾ 500 ರನ್‌ ದಾಟಲು ಕೊಡುಗೆ ನೀಡಿದರು. 7 ವಿಕೆಟ್‌ ಜೊತೆಯಾಟದಲ್ಲಿ ನಾಯಕ ಶುಭಮನ್‌ ಗಿಲ್‌ ಅವರೊಂದಿಗೆ 203 ರನ್‌ ಪೇರಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...