ಐಪಿಎಲ್ | ಧರ್ಮಶಾಲಾದಲ್ಲಿ ಮಿಂಚಿದ ವಿರಾಟ್ ಕೊಹ್ಲಿ: ಆರ್‌ಸಿಬಿಗೆ ಪಂಜಾಬ್ ವಿರುದ್ಧ ಭರ್ಜರಿ ಜಯ

Date:

ಧರ್ಮಶಾಲಾ ಕ್ರಿಕೆಟ್ ಅಸೋಸಿಯೇಷನ್ ​​ಸ್ಟೇಡಿಯಂನಲ್ಲಿ ಇಂದು ನಡೆದ ಐಪಿಎಲ್‌ನ 58ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡವನ್ನು ಸೋಲಿಸುವ ಮೂಲಕ ಅಭಿಮಾನಿಗಳ ಫೇವರೀಟ್ ತಂಡ ಆರ್‌ಸಿಬಿ, 60 ರನ್‌ಗಳ ಭರ್ಜರಿ ಜಯ ಗಳಿಸಿದೆ. ಈ ಗೆಲುವಿನೊಂದಿಗೆ ಪ್ಲೇ ಆಫ್ ತಲುಪುವ ಕನಸನ್ನು ಆರ್‌ಸಿಬಿ ಇನ್ನೂ ಕೂಡ ಜೀವಂತವಾಗಿರಿಸಿದೆ.

ಟಾಸ್ ಸೋತು ಮೊದಲು ಬ್ಯಾಟಿಂಗ್ ನಡೆಸಿದ್ದ ರಾಯಲ್ ಚಾಲೆಂಜರ್ಸ್‌ ಬೆಂಗಳೂರು, ವಿರಾಟ್ ಕೊಹ್ಲಿಯವರ ಸ್ಫೋಟಕ ಅರ್ಧಶತಕದ(92 ರನ್, 47 ಎಸೆತ, 7 ಬೌಂಡರಿ, 6 ಸಿಕ್ಸ್) ನೆರವಿನಿಂದ ನಿಗದಿತ 20 ಓವರ್‌ಗಳಲ್ಲಿ 7 ವಿಕೆಟ್‌ ಕಳೆದುಕೊಂಡು 241 ರನ್‌ಗಳನ್ನು ಪೇರಿಸುವ ಮೂಲಕ, ಪಂಜಾಬ್ ಗೆಲುವಿಗೆ 242 ರನ್‌ಗಳ ಬೃಹತ್ ಗುರಿಯನ್ನು ನೀಡಿತ್ತು. ಇದು ಧರ್ಮಶಾಲಾ ಸ್ಟೇಡಿಯಂನಲ್ಲಿ ಟಿ20ಯಲ್ಲಿ ದಾಖಲಾದ ಗರಿಷ್ಠ ಮೊತ್ತದ ಸ್ಕೋರ್ ಆಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಗುರಿಯನ್ನು ಬೆನ್ನಟ್ಟುವಲ್ಲಿ ವಿಫಲವಾದ ಪಂಜಾಬ್ ತಂಡವು, 17 ಓವರ್‌ಗಳಲ್ಲಿ 181 ರನ್‌ ಗಳಿಸುವಷ್ಟರಲ್ಲಿ ಆಲೌಟ್ ಆಯಿತು.

ಪಂಜಾಬ್, ಮೊದಲ ಓವರ್‌ನಲ್ಲೇ ಪ್ರಭುಸಿಮ್ರಾನ್ ಸಿಂಗ್ ಅವರ ವಿಕೆಟ್ ಕಳೆದುಕೊಂಡಿತರಾದರೂ, ಬಳಿಕ ಕ್ರೀಸ್‌ಗೆ ಬಂದ ರೂಸ್ಸೋ, ಜಾನಿ ಬೈರ್‌ಸ್ಟೋವ್ ಜೊತೆಗೆ ಭರ್ಜರಿ ಬ್ಯಾಟಿಂಗ್ ಪ್ರದರ್ಶನ ನೀಡಿದರು. ಬೌಂಡರಿ, ಸಿಕ್ಸರ್‌ಗಳ ಮೂಲಕ ಆರ್‌ಸಿಬಿ ಬೌಲರ್‌ಗಳನ್ನು ಬೆದರಿಸಿದ ಈ ಜೋಡಿಯನ್ನು ಲಾಕಿ ಫರ್ಗೂಸನ್ ಬೇರ್ಪಡಿಸಿದರು. ಆರ್‌ಸಿಬಿ ನಾಯಕ ಫಾಫ್ ಡು ಪ್ಲೆಸಿ ಹಿಡಿದ ಅದ್ಭುತ ಕ್ಯಾಚ್‌ಗೆ ಬಲಿಯಾದರು.

ಔಟಾಗುವುದಕ್ಕೂ ಮುನ್ನ ಬೈರ್‌ಸ್ಟೋವ್ 16 ಎಸೆತಗಳಲ್ಲಿ 4 ಬೌಂಡರಿ ಹಾಗೂ 1 ಸಿಕ್ಸರ್‌ನ ನೆರವಿನಿಂದ 27 ರನ್ ಗಳಿಸಿದರು. ಬೈರ್‌ಸ್ಟೋವ್ ವಿಕೆಟ್ ಕಳೆದುಕೊಂಡರೂ ಕೂಡ ಎದೆಗುಂದದ ರೂಸ್ಸೋ, ತನ್ನ ಆಕ್ರಮಣಕಾರಿ ಬ್ಯಾಟಿಂಗ್ ಮುಂದುವರಿಸಿದರು. 27 ಎಸೆತಗಳಲ್ಲಿ 3 ಭರ್ಜರಿ ಸಿಕ್ಸರ್ ಹಾಗೂ 9 ಬೌಂಡರಿಯ ನೆರವಿನಿಂದ 61 ರನ್ ಗಳಿಸಿದ್ದಾಗ, ಕರಣ್ ಶರ್ಮಾ ಎಸೆತದಲ್ಲಿ ಕ್ಯಾಚಿತ್ತು ವಿಕೆಟ್ ಒಪ್ಪಿಸಿದರು.

RUN

ಆ ಬಳಿಕ ಕ್ರೀಸ್‌ಗೆ ಬಂದ ಜಿತೇಶ್ ಶರ್ಮಾ(5 ರನ್) ಹಾಗೂ ಸ್ಪೋಟಕ ಬ್ಯಾಟರ್ ಲಿವಿಂಗ್‌ಸ್ಟನ್ ಇಂದಿನ ಪಂದ್ಯದಲ್ಲಿ ಮಿಂಚಲು ಆಗಲಿಲ್ಲ. ಲಿವಿಂಗ್‌ಸ್ಟನ್ ಸ್ವಪ್ನಿಲ್ ಸಿಂಗ್ ಎಸೆತದಲ್ಲಿ ಕರಣ್ ಶರ್ಮಾಗೆ ಕ್ಯಾಚಿತ್ತು ಶೂನ್ಯಕ್ಕೆ ಔಟಾದರು.

ಪಂದ್ಯದ ಗತಿಯನ್ನೇ ಬದಲಿಸಿದ ವಿರಾಟ್ ಕೊಹ್ಲಿಯವರ ‘ವಂಡರ್‌ಫುಲ್ ರನೌಟ್’

ಕ್ರೀಸ್‌ನಲ್ಲಿದ್ದ ಬಂದ ಪಂಜಾಬ್ ನಾಯಕ ಸ್ಯಾಮ್ ಕರಣ್ ಹಾಗೂ ಶಶಾಂಕ್ ಸಿಂಗ್ ಜೋಡಿಯು ಉತ್ತಮ ಜೊತೆಯಾಟದ ಮುನ್ಸೂಚನೆ ನೀಡುತ್ತಿರುವಾಗಲೇ, 13.3 ಓವರ್‌ನ ವೇಳೆ ಎರಡು ರನ್ ಕದಿಯುವ ಭರದಲ್ಲಿ ವಿರಾಟ್ ಕೊಹ್ಲಿ ಎಸೆದ ಅನಿರೀಕ್ಷಿತ ಅದ್ಭುತವಾದ ಥ್ರೋಗೆ ಶಶಾಂಕ್ ಸಿಂಗ್ ಕೂದಲೆಳೆ ಅಂತರದಲ್ಲಿ ರನೌಟ್ ಆದರು. ಇದು ಪಂದ್ಯದ ಗತಿಯನ್ನೇ ಆರ್‌ಸಿಬಿ ಕಡೆಗೆ ವಾಲಿಸಿತು. ಶಶಾಂಕ್‌ ಸಿಂಗ್‌ 19 ಎಸೆತಗಳಲ್ಲಿ 37 ರನ್‌ ಗಳಿಸಿದರು.

ಆ ಬಳಿಕ ಕ್ರೀಸ್‌ಗೆ ಬಂದ ಅಶುತೋಶ್ ಶರ್ಮಾ, ಮೊಹಮ್ಮದ್ ಸಿರಾಜ್ ಎಸೆತದಲ್ಲಿ ಎಲ್‌ಬಿಡಬ್ಲ್ಯೂ ಬಲೆಗೆ ಬಿದ್ದರು. ಪಂಜಾಬ್ ನಾಯಕ ಸ್ಯಾಮ್ ಕರಣ್ 22 ರನ್ ಗಳಿಸಿ, ಲಾಕಿ ಫರ್ಗೂಸನ್‌ಗೆ ವಿಕೆಟ್ ಒಪ್ಪಿಸಿದರು. ಕೊನೆಯಲ್ಲಿ ಪಂಜಾಬ್ ತಂಡವು 17 ಓವರ್‌ಗಳಲ್ಲಿ 17 ಓವರ್‌ಗಳಲ್ಲಿ 181 ರನ್‌ ಗಳಿಸುವಷ್ಟರಲ್ಲಿ ಆಲೌಟ್ ಆಯಿತು.

ಆರ್‌ಸಿಬಿ ಪರವಾಗಿ ಬೌಲಿಂಗ್‌ನಲ್ಲಿ ಮೊಹಮ್ಮದ್ ಸಿರಾಜ್ 3 ವಿಕೆಟ್ ಪಡೆದು ಮಿಂಚಿದರೆ, ಕರಣ್ ಶರ್ಮಾ, ಲಾಕಿ ಫರ್ಗೂಸನ್‌ ಹಾಗೂ ಸ್ವಪ್ನಿಲ್ ಸಿಂಗ್ ತಲಾ ಎರಡು ವಿಕೆಟ್ ಗಳಿಸುವಲ್ಲಿ ಸಫಲರಾದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...