WPL| ಸತತ 5 ಜಯದೊಂದಿಗೆ ಪ್ಲೇಆಫ್ ಪ್ರವೇಶಿಸಿದ ಆರ್‌ಸಿಬಿ

Date:

ಗೌತಮಿ ನಾಯಕ್ ಅವರ ಸೊಗಸಾದ ಅರ್ಧಶತಕ ಹಾಗೂ ಬೌಲರ್‌ಗಳ ಸಾಂಘಿಕ ದಾಳಿಯ ನೆರವಿನಿಂದ ರಾಯಲ್ ಚಾಲೆಂಜರ್ಸ್‌ ಬೆಂಗಳೂರು ತಂಡವು ಸೋಮವಾರ ನಡೆದ ಮಹಿಳಾ ಪ್ರೀಮಿಯರ್ ಲೀಗ್ ಪಂದ್ಯದಲ್ಲಿ 61 ರನ್‌ಗಳಿಂದ ಗುಜರಾತ್ ಜೈಂಟ್ಸ್ ತಂಡವನ್ನು ಮಣಿಸಿತು. ಅದರೊಂದಿಗೆ ಟೂರ್ನಿಯಲ್ಲಿ ಸತತ ಐದು ಗೆಲುವಿನೊಂದಿಗೆ ಪ್ಲೇಆಫ್ ಹಂತಕ್ಕೆ ಪ್ರವೇಶ ಪಡೆಯಿತು.

ಗುಜರಾತ್‌ನ ವಡೋದರದ ಕೋತಂಬಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್‌ ಸೋತು ಬ್ಯಾಟಿಂಗ್‌ಗೆ ಇಳಿದ ಆರ್‌ಸಿಬಿ ತಂಡಕ್ಕೆ ಗೌತಮಿ (73; 55ಎ, 4×7, 6×1) ಆಸರೆಯಾದರು. ಅವರ ಆಟದ ಬಲದಿಂದ ಮಂದಾನ ಬಳಗವು ನಿಗದಿತ ಓವರ್‌ಗಳಲ್ಲಿ 6 ವಿಕೆಟ್‌ಗೆ 178 ರನ್ ಗಳಿಸಿತು.

ಸವಾಲಿನ ಗುರಿ ಬೆನ್ನಟ್ಟಿ ಜೈಂಟ್ಸ್‌ ತಂಡಕ್ಕೆ ಬಲಗೈ ವೇಗಿ ಸಾಯ್ಲಿ ಸತ್ಘರೆ (21ಕ್ಕೆ3) ಆಘಾತ ನೀಡಿದರು. ಟೂರ್ನಿಯಲ್ಲಿ ಎರಡನೇ ಪಂದ್ಯ ಆಡಿದ ಅವರು ಜೈಂಟ್ಸ್‌ ತಂಡದ ಪ್ರಮುಖ ವಿಕೆಟ್‌ಗಳನ್ನು ತಮ್ಮ ಬುಟ್ಟಿಗೆ ಹಾಕಿಕೊಂಡರು. ಆರಂಭದಲ್ಲಿ ಬೆತ್‌ ಮೂನಿ (3; 4ಎ) ಹಾಗೂ ಸೋಫಿ ಡಿವೈನ್‌ (0; 4ಎ) ಅವರ ವಿಕೆಟ್‌ ಪಡೆದ ಸಾಯ್ಲಿ, ಅರ್ಧಶತಕ ಗಳಿಸಿದ್ದ ನಾಯಕಿ ಆ್ಯಷ್ಲೆ ಗಾರ್ಡನರ್‌ (54;43ಎ) ಅವರಿಗೂ ಪೆವಿಲಿಯನ್‌ ಹಾದಿ ತೋರಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ದಕ್ಷಿಣ ಆಫ್ರಿಕಾದ ಆಲ್‌ರೌಂಡರ್‌ ನದೀನ್‌ ಡಿ ಕ್ಲರ್ಕ್‌ ಎರಡು ವಿಕೆಟ್‌ ಪಡೆದರೆ, ಲಾರೆನ್‌ ಬೆಲ್‌, ರಾಧಾ ಯಾದವ್‌ ಹಾಗೂ ಶ್ರೇಯಾಂಕಾ ಪಾಟೀಲ ಅವರು ತಲಾ ಒಂದು ವಿಕೆಟ್‌ ಪಡೆದರು.

ಇದನ್ನು ಓದಿದ್ದೀರಾ? WPLನಲ್ಲಿ ಹೊಸ ಇತಿಹಾಸ ನಿರ್ಮಿಸಿದ ಕನ್ನಡತಿ ಶ್ರೇಯಾಂಕಾ ಪಾಟೀಲ್

ಲೀಗ್‌ನಲ್ಲಿ ಆರ್‌ಸಿಬಿ ತಂಡಕ್ಕೆ ಇದು ಸತತ ಐದನೇ ಗೆಲುವಾಗಿದ್ದು, ಈ ಸಾಧನೆ ಮಾಡಿದ ಮೊದಲ ತಂಡ ಎನಿಸಿತು.

ಇದಕ್ಕೆ ಮೊದಲು, ಲೀಗ್‌ನಲ್ಲಿ ಅಜೇಯವಾಗಿರುವ ಬೆಂಗಳೂರು ತಂಡದ ಆರಂಭ ಉತ್ತಮವಾಗಿರಲಿಲ್ಲ. ಆರಂಭ ಆಟಗಾರ್ತಿ ಗ್ರೇಸ್‌ ಹ್ಯಾರಿಸ್ (1) ಮತ್ತು ಮೂರನೇ ಕ್ರಮಾಂಕದ ಜಾರ್ಜಿಯಾ ವೋಲ್ (1) ಅವರು ಕೇವಲ 9 ರನ್‌ಗಳಾಗುವಷ್ಟರಲ್ಲಿ ನಿರ್ಗಮಿಸಿದ್ದರು. ನಾಯಕಿ ಸ್ಮೃತಿ ಮಂದಾನ (26, 23 ಎಸೆತ) ಜೊತೆಗೂಡಿದ ಗೌತಮಿ ಮೂರನೇ ವಿಕೆಟ್‌ಗೆ 60 ರನ್ (47 ಎಸೆತ) ಸೇರಿಸಿ ಇನಿಂಗ್ಸ್‌ಗೆ ಸ್ಥಿರತೆ ಒದಗಿಸಿದರು.

ಗೌತಮಿ ಅವರು ರಿಚಾ ಘೋಷ್‌ (27; 20ಎ, 6×3) ಜೊತೆಗೂಡಿ ನಾಲ್ಕನೇ ವಿಕೆಟ್‌ಗೆ ಉಪಯುಕ್ತ 69 ರನ್ ಪೇರಿಸಿದರು. 18ನೇ ಓವರಿನಲ್ಲಿ ಗಾರ್ಡನರ್ ಬೌಲಿಂಗ್‌ನಲ್ಲಿ ಬೌಲ್ಡ್‌ ಆಗುವ ಮೂಲಕ ಗೌತಮಿ ಅವರ ಆಟ ಕೊನೆಗೊಂಡಿತು.

ಗುಜರಾತ್‌ ಜೈಂಟ್ಸ್‌ನ 18 ವರ್ಷ ವಯಸ್ಸಿನ ಮಧ್ಯಮ ವೇಗದ ಬೌಲರ್ ಹ್ಯಾಪಿ ಕುಮಾರಿ ಅವರು ಈ ಪಂದ್ಯದ ಮೂಲಕ ಐಪಿಎಲ್‌ಗೆ ಪದಾರ್ಪಣೆ ಮಾಡಿದರು.

ಸಂಕ್ಷಿಪ್ತ ಸ್ಕೋರು: ಆರ್‌ಸಿಬಿ: 20 ಓವರುಗಳಲ್ಲಿ 6 ವಿಕೆಟ್‌ಗೆ 178 (ಸ್ಮೃತಿ ಮಂದಾನ 26, ಗೌತಮಿ ನಾಯಕ್ 73, ರಿಚಾ ಘೋಷ್‌ 27, ಕಾಶ್ವಿ ಗೌತಮ್ 38ಕ್ಕೆ2, ಗಾರ್ಡನರ್ 43ಕ್ಕೆ2).

ಗುಜರಾತ್ ಜೈಂಟ್ಸ್‌:20 ಓವರುಗಳಲ್ಲಿ 8 ವಿಕೆಟ್‌ಗೆ 117 (ಆ್ಯಷ್ಲೆ ಗಾರ್ಡನರ್‌ 54;ಸಾಯ್ಲಿ ಸತ್ಘರೆ 21ಕ್ಕೆ3,ನದೀನ್‌ ಡಿ ಕ್ಲರ್ಕ್‌ 17ಕ್ಕೆ2).

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...