ಆರ್‌ಸಿಬಿ-ರಾಜಸ್ಥಾನ್ ಎಲಿಮಿನೇಟರ್ ಪಂದ್ಯ | ಸೋತವರು ಮನೆಗೆ; ಗೆದ್ದವರಿಗೆ ಮತ್ತೊಂದು ಅಗ್ನಿಪರೀಕ್ಷೆ

Date:

ಒಂದೆಡೆ ಯಾರೂ ನಿರೀಕ್ಷಿಸದ ರೀತಿಯಲ್ಲಿ ಅದ್ಭುತ ‘ಕಮ್‌ಬ್ಯಾಕ್‌’ ಮೂಲಕ ಸತತ 6 ಪಂದ್ಯಗಳಲ್ಲಿ ಗೆದ್ದಿರುವ ಫಾಫ್ ಡು ಪ್ಲೆಸಿಸ್ ನೇತೃತ್ವದ ಆರ್‌ಸಿಬಿ. ಮತ್ತೊಂದೆಡೆ ಸತತ 4 ಪಂದ್ಯಗಳ ಸೋಲಿನೊಂದಿಗೆ ಕುಗ್ಗಿ ಹೋಗಿರುವ ಸಂಜು ಸ್ಯಾಮ್ಸನ್ ನೇತೃತ್ವದ ಮಾಜಿ ಚಾಂಪಿಯನ್‌ ರಾಜಸ್ಥಾನ ರಾಯಲ್ಸ್‌ ತಂಡ. ಈ ಎರಡೂ ತಂಡಗಳು ಇಂದು(ಮೇ 22) ಬುಧವಾರ 17ನೇ ಆವೃತ್ತಿ ಐಪಿಎಲ್‌ನ ಎಲಿಮಿನೇಟರ್‌ನಲ್ಲಿ ಸೆಣಸಾಡಲಿವೆ.

ಗೆಲ್ಲುವ ತಂಡ ಎರಡನೇ ಕ್ವಾಲಿಫೈಯರ್‌ ಪಂದ್ಯಕ್ಕೆ ಅರ್ಹತೆ ಗಿಟ್ಟಿಸಿಕೊಳ್ಳಲಿದ್ದು, ಸೋಲುವ ತಂಡ ಟೂರ್ನಿಯಿಂದಲೇ ಹೊರಬೀಳಲಿದೆ. ಎರಡನೇ ಕ್ವಾಲಿಫೈಯರ್‌ ಪಂದ್ಯವಯ ಸನ್‌ರೈಸರ್ಸ್‌ ಹೈದರಾಬಾದ್ ವಿರುದ್ಧ ಚೆನ್ನೈಯಲ್ಲಿ ಮೇ 24ರಂದು ನಡೆಯಲಿದೆ.

ಟೂರ್ನಿಯ ಆರಂಭಿಕ ಎಂಟು ಪಂದ್ಯಗಳ ಪೈಕಿ ಏಳರಲ್ಲಿ ಸೋತಿದ್ದ ಆರ್‌ಸಿಬಿ ಪ್ಲೇ-ಆಫ್‌ ಪ್ರವೇಶಿಸಿದ್ದೇ ಎಲ್ಲರನ್ನೂ ಅಚ್ಚರಿಗೊಳಗಾಗುವಂತೆ  ಆಶ್ಚರ್ಯ. ಅತ್ತ ರಾಜಸ್ಥಾನ ಮೊದಲಾರ್ಧದಲ್ಲಿ ಅಬ್ಬರಿಸಿದ್ದರೂ, ಸದ್ಯ ಮಂಕಾಗಿದೆ. ಲೀಗ್‌ ಹಂತದ ಕೊನೆ ಪಂದ್ಯ ಮಳೆಗಾಹುತಿಯಾಗಿದ್ದು ಗಾಯದ ಮೇಲೆ ಬರೆ ಎಳೆದಂತಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆರ್‌ಸಿಬಿ ಪರ ಟೂರ್ನಿಯುದ್ದಕ್ಕೂ ಅಬ್ಬರಿಸಿರುವ ವಿರಾಟ್‌ ಕೊಹ್ಲಿ ಮೇಲೆ ಹೆಚ್ಚಿನ ಭಯ ಇದ್ದರೂ, ಕಳೆದ ಕೆಲವು ಪಂದ್ಯಗಳಲ್ಲಿ ತಂಡದ ಸಂಘಟಿತ ಹೋರಾಟ ಎದುರಾಳಿಗಳನ್ನು ಕಂಗೆಟ್ಟಿಸಿದೆ. ಭಾರೀ ಟೀಕೆಗಳನ್ನು ಎದುರಿಸಿದ್ದ ಆರ್‌ಸಿಬಿ ಬೌಲಿಂಗ್‌ ಪಡೆ, ಈಗ ಬಲಿಷ್ಠ ಬ್ಯಾಟಿಂಗ್‌ ಪಡೆಯನ್ನೇ ಕಟ್ಟಿಹಾಕಬಲ್ಲ ಸಾಮರ್ಥ್ಯ ಹೊಂದಿರುವುದನ್ನು ಕಳೆದ ಸಿಎಸ್‌ಕೆ ವಿರುದ್ಧದ ನಾಕೌಟ್ ಪಂದ್ಯದಲ್ಲಿ ಸಾಬೀತುಪಡಿಸಿದೆ.

ಬೌಲಿಂಗ್‌ ವಿಭಾಗವೂ ಬಲಿಷ್ಠವಾಗಿ ಕಳೆದ 4 ಪಂದ್ಯಗಳ ಪೈಕಿ 3ರಲ್ಲಿ ಎದುರಾಳಿ ತಂಡವನ್ನು ಆಲೌಟ್‌ ಮಾಡಿದೆ. ಅಹಮದಾಬಾದ್‌ನಲ್ಲಿ ಈ ಬಾರಿ ನಡೆದ 12 ಇನ್ನಿಂಗ್ಸ್‌ಗಳ ಪೈಕಿ ಕೇವಲ 2ರಲ್ಲಿ 200+ ಮೊತ್ತ ದಾಖಲಾಗಿದ್ದು, ಶಿಸ್ತುಬದ್ಧ ದಾಳಿ ನಡೆಸಿದರೆ ಆರ್‌ಸಿಬಿಗೆ ಗೆಲುವು ಸುಲಭವಾಗಲಿದೆ.

ಇದನ್ನು ಓದಿದ್ದೀರಾ? ಎಲಿಮಿನೇಟರ್ ಪಂದ್ಯ | ಆರ್‌ಸಿಬಿ ವಿರುದ್ಧ ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡ ರಾಜಸ್ಥಾನ್ ರಾಯಲ್ಸ್‌

ನಿರ್ಣಾಯಕ ಘಟ್ಟದಲ್ಲಿ ಫಾರ್ಮ್‌ಗೆ ಮರಳಿರುವ ಆಸ್ಟ್ರೇಲಿಯಾ ತಾರೆಗಳಾದ ಕ್ಯಾಮರೂನ್‌ ಗ್ರೀನ್‌ ಹಾಗೂ ಗ್ಲೆನ್‌ ಮ್ಯಾಕ್ಸ್‌ವೆಲ್‌ ಅವರ ಪ್ರದರ್ಶನ ತಂಡದ ಗೆಲುವು-ಸೋಲನ್ನು ನಿರ್ಧರಿಸಲಿದೆ. ದಿನೇಶ್‌ ಕಾರ್ತಿಕ್‌ ತಮ್ಮ ನೈಜ ಫಿನಿಶಿಂಗ್‌ ಹುದ್ದೆಯನ್ನು ಮಹತ್ವದ ಪಂದ್ಯದಲ್ಲಿ ಸಮರ್ಥವಾಗಿ ನಿಭಾಯಿಸಬಲ್ಲರೇ ಎಂಬ ಕುತೂಹಲವಿದೆ.

ಆರ್‌ಸಿಬಿಗೆ ಹೋಲಿಸಿದರೆ ರಾಜಸ್ಥಾನದ ಆತ್ಮವಿಶ್ವಾಸ ಸಂಪೂರ್ಣ ಕುಗ್ಗಿದೆ. ಲೀಗ್‌ ಹಂತದಲ್ಲಿ ಆರ್‌ಸಿಬಿ ವಿರುದ್ಧ ಶತಕ ಬಾರಿಸಿ ತಂಡಕ್ಕೆ ಗೆಲುವು ತಂದುಕೊಟ್ಟಿದ್ದ ಜೋಸ್‌ ಬಟ್ಲರ್‌ ಕೂಡಾ ಈ ಪಂದ್ಯಕ್ಕೆ ಲಭ್ಯರಿಲ್ಲ. ಇದು ರಾಜಸ್ಥಾನಕ್ಕೆ ಹಿನ್ನಡೆಯುಂಟು ಮಾಡಿದರೂ ಅಚ್ಚರಿ ಇಲ್ಲ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...