ಮಲ್ಲೇಶ್ವರಂನ ಸಿಟಿಆರ್‌ನಲ್ಲಿ ದೋಸೆ ಸವಿದ ವಿರುಷ್ಕಾ

Date:

  • ವಿರಾಟ್‌ ಜೊತೆಗೆ ಸೆಲ್ಫೀಗೆ ಮುಗಿಬಿದ್ದ ಅಭಿಮಾನಿಗಳು
  • ಭಾನುವಾರದ ಪಂದ್ಯಕ್ಕಾಗಿ ಬೆಂಗಳೂರಿಗೆ ಬಂದಿಳಿದಿರುವ ಕೊಹ್ಲಿ

ಐಪಿಎಲ್‌ ಟೂರ್ನಿಯಲ್ಲಿ ಬ್ಯುಸಿಯಾಗಿರುವ ಟೀಂ ಇಂಡಿಯಾದ ಮಾಜಿ ನಾಯಕ, ಆರ್‌ಸಿಬಿ (ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು) ತಂಡದ ಸ್ಟಾರ್‌ ಆಟಗಾರ ವಿರಾಟ್‌ ಕೊಹ್ಲಿ, ತಮ್ಮ ಪತ್ನಿ ಅನುಷ್ಕಾ ಶರ್ಮಾ ಮತ್ತು ಕುಟುಂಬದವರ ಜೊತೆಗೆ ಶನಿವಾರ ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಪ್ರಸಿದ್ಧ ಸಿಟಿಆರ್‌ (ಸೆಂಟ್ರಲ್‌ ಟಿಫನ್‌ ರೂಂ) ಹೋಟೆಲ್‌ನಲ್ಲಿ ದೋಸೆ ಸವಿದಿದ್ದಾರೆ.

ವಿರಾಟ್‌ ಕೊಹ್ಲಿ ಮತ್ತು ಅನುಷ್ಕಾ ಶರ್ಮಾ ತಮ್ಮ ಆಪ್ತರ ಜೊತೆಗೆ ʼಸಿಟಿಆರ್‌ʼನಲ್ಲಿ ಉಪಹಾರ ಸೇವಿಸಿ ಹೊರಬರುತ್ತಿರುವ ಸಂದರ್ಭದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ. ಸ್ಟಾರ್‌ ದಂಪತಿ ಸಿಟಿಆರ್‌ ಭೇಟಿ ನೀಡಿದ ವಿಚಾರ ತಿಳಿದು ನೂರಾರು ಅಭಿಮಾನಿಗಳು ಹೋಟೆಲ್‌ ಮುಂಭಾಗದಲ್ಲಿ ಜಮಾಯಿಸಿದ್ದಾರೆ. ವಿರಾಟ್‌ ಹೋಟೆಲ್‌ನಿಂದ ಹೊರಬರುತ್ತಲೇ ʼಆರ್‌ಸಿಬಿʼ ಪರ ಘೋಷಣೆ ಕೂಗಲು ಆರಂಭಿಸಿದ ಅಭಿಮಾನಿಗಳು ಸೆಲ್ಫೀಗಾಗಿ ಮುಗಿಬಿದ್ದಿದ್ದಾರೆ. ನೂಕು ನುಗ್ಗಲು ಹೆಚ್ಚಾಗುತ್ತಲೇ ಸೆಲ್ಫೀ ನೀಡಲು ನಿರಾಕರಿಸಿರುವ ವಿರಾಟ್‌ ಕಾರ್‌ ಏರಿ ಸ್ಥಳದಿಂದ ತೆರಳಿದ್ದಾರೆ.

ಈ ಸುದ್ದಿ ಓದಿದ್ದೀರಾ?: ಐಪಿಎಲ್ 2023 | ಫೈನಲ್‌, ಕ್ವಾಲಿಫೈಯರ್ ಪಂದ್ಯಗಳ ವೇಳಾಪಟ್ಟಿ ಘೋಷಿಸಿದ ಬಿಸಿಸಿಐ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ವಿರುಷ್ಕಾ ದಂಪತಿ ʼಸಿಟಿಆರ್‌ʼಗೆ ಭೇಟಿ ನೀಡಿದ್ದ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದ್ದು, “ಪಕ್ಕದ ರಸ್ತೆಯಲ್ಲಿ ಇರುವ ʼಎಂಟಿಆರ್‌ʼಗೆ ಹೋಗುವ ಬದಲು ʼಸಿಟಿಆರ್‌ʼಗೆ ಯಾಕೆ ಹೋದ್ರಿ” ಎಂದಿದ್ದಾರೆ. ವಿರಾಟ್‌ ಜೊತೆಗೆ ಸೆಲ್ಫೀಗಾಗಿ ಜನ ಮುಗಿಬಿದ್ದಿರುವುದನ್ನು ಕಂಡು “ಅವರ ಖಾಸಗಿತನಕ್ಕೆ ಬೆಲೆ ಕೊಡಿ” ಎಂಬ ಮಾತುಗಳು ಕೂಡ ಕೇಳಿ ಬಂದಿವೆ.

ಏಪ್ರಿಲ್‌ 23ರ ಮಧ್ಯಾಹ್ನ ʼಆರ್‌ಸಿಬಿʼ ಮತ್ತು ʼಆರ್‌ಆರ್‌ʼ (ರಾಜಸ್ತಾನ ರಾಯಲ್ಸ್‌) ತಂಡದ ನಡುವೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ನಡೆಯಲಿದೆ. ಈ ಹಿನ್ನೆಲೆಯಲ್ಲಿ ವಿರಾಟ್‌ ಕೊಹ್ಲಿ ಕುಟುಂಬ ಸಮೇತ ಬೆಂಗಳೂರಿಗೆ ಆಗಮಿಸಿದ್ದು, ಪಂದ್ಯಕ್ಕೆ ತಯಾರಿ ನಡೆಸುತ್ತಿದ್ದಾರೆ.

f1fabf4f0e4ab96da4f5d26f3bc2b89e
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...