ಇಂದು ಬೆಂಗಳೂರಿನಲ್ಲಿ ಆರ್‌ಸಿಬಿ ವಿಜಯೋತ್ಸವದ ಮೆರವಣಿಗೆ, ಮುಗಿಲು ಮುಟ್ಟಿದ ಅಭಿಮಾನಿಗಳ ಹರ್ಷ

Date:

ಕೋಟ್ಯಂತರ ಅಭಿಮಾನಿಗಳ ಕಾಯುವಿಕೆ ಕೊನೆಯಾಗಿದ್ದು, ರಾಯಲ್ ಚಾಲೆಂಜರ್ಸ್ ಬೆಂಗಳೂರು‌ ತಂಡವು ಐತಿಹಾಸಿಕ ಐಪಿಎಲ್ 2025 ಪ್ರಶಸ್ತಿ ಗೆದ್ದಿದೆ.

ಅಹಮದಾಬಾದ್​ನಲ್ಲಿ ಮಂಗಳವಾರ (ಜೂ.3) ನಡೆದ ಫೈನಲ್ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ 6 ವಿಕೆಟ್​ಗಳ ಜಯ ಸಾಧಿಸಿದ ರಜತ್ ಪಾಟೀದಾರ್ ನಾಯಕತ್ವದ ಆರ್​ಸಿಬಿ ಪಡೆ ಚೊಚ್ಚಲ ಬಾರಿ ಟ್ರೋಫಿ ಎತ್ತಿ ಹಿಡಿಯಿತು. ಈ ಮೂಲಕ ಇಂಡಿಯನ್ ಪ್ರೀಮಿಯರ್ ಲೀಗ್​ ಸೀಸನ್-18 ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 18 ವರ್ಷಗಳ ಬಳಿಕ ಚಾಂಪಿಯನ್ ಪಟ್ಟ ಅಲಂಕರಿಸಿತು.

ಈ ಸಂಭ್ರಮವನ್ನು ಆಚರಿಸಲು ಆರ್‌ಸಿಬಿ ಜೂ.4 ರಂದು ಬೆಂಗಳೂರಿನಲ್ಲಿ ವಿಜಯೋತ್ಸವ ಮೆರವಣಿಗೆಯನ್ನು ಆಯೋಜಿಸಿದೆ. ನಗರದ ಪ್ರಮುಖ ಪ್ರದೇಶಗಳಲ್ಲಿ ಭವ್ಯ ವಿಜಯೋತ್ಸವ ಬಸ್ ಮೆರವಣಿಗೆ ನಡೆಯಲಿದ್ದು, ಅಭಿಮಾನಿಗಳು ತಮ್ಮ ಪ್ರಶಸ್ತಿ ವಿಜೇತ ಕ್ರಿಕೆಟಿಗರನ್ನು ಹತ್ತಿರದಿಂದ ನೋಡಲು ಅವಕಾಶ ಪಡೆಯಲಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆರ್‌ಸಿಬಿಯ ಬಹುನಿರೀಕ್ಷಿತ ವಿಜಯೋತ್ಸವದ ಬಗ್ಗೆ ಸಂತೋಷ ವ್ಯಕ್ತಪಡಿಸಿ, ಮಾಜಿ ಆರ್‌ಸಿಬಿ ದಂತಕಥೆಗಳಾದ ಕ್ರಿಸ್ ಗೇಲ್ ಮತ್ತು ಎಬಿ ಡಿವಿಲಿಯರ್ಸ್ ಕೂಡ ವಿಜಯೋತ್ಸವ ಮೆರವಣಿಗೆ ದೃಢಪಡಿಸಿದ್ದಾರೆ.

ಆರ್ಸಿಬಿ ಐಪಿಎಲ್ ಕಿರೀಟ ಧರಿಸುತ್ತಿದ್ದಂತೆಯೇ ದೇಶದೆಲ್ಲೆಡೆ ಅಭಿಮಾನಿಗಳ ಸಂಭ್ರಮ ಉಕ್ಕಿ ಹರಿಯಿತು. ಹದಿನೆಂಟು ವರ್ಷಗಳಿಂದ ಈ ಕ್ಷಣಕ್ಕಾಗಿ ಕಾದಿದ್ದ ಲಕ್ಷಾಂತರ ಜನರು ಬೀದಿಗಿಳಿದು ಸಂಭ್ರಮಿಸಿದರು. ಕುಣಿದರು, ಸಿಹಿ ಹಂಚಿದರು. ಬುಧವಾರ ಬೆಳಗಿನ ಜಾವದವರೆಗೂ ‘ಆರ್‌ಸಿಬಿ..ಆರ್‌ಸಿಬಿ..’ ಎಂಬ ಕೂಗುಗಳು ಪ್ರತಿಧ್ವನಿಸಿದವು.

ಇಂದು ಆರ್‌ಸಿಬಿ ಆಟಗಾರರೇ ವಿಜಯೋತ್ಸವ ಬಸ್ ಮೆರವಣಿಯಲ್ಲಿರುವುದರಿಂದ ಅಭಿಮಾನಿಗಳ ಹರ್ಷಕ್ಕೆ ಪಾರವೇ ಇಲ್ಲ. ಈ ಹಿನ್ನೆಲೆಯಲ್ಲಿ ಪೊಲೀಸರು ಕೂಡ ವ್ಯಾಪಕ ಭದ್ರತೆ ಮತ್ತು ಟ್ರಾಫಿಕ್ ನಿಯಂತ್ರಣಕ್ಕೆ ಈಗಾಗಲೇ ವ್ಯವಸ್ಥೆಗಳನ್ನು ಮಾಡಿಕೊಳ್ಳುತ್ತಿದ್ದಾರೆ. ಸ್ಥಳದಲ್ಲಿ ಭಾರೀ ಸಂಖ್ಯೆಯ ಪೊಲೀಸರನ್ನು ನಿಯೋಜಿಸಲಾಗುತ್ತಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

18 ಸಾವಿರ ಕೋಟಿ ರೂ. ದಾಟಿದ ದೇಶದ ಕ್ರೀಡಾ ಅರ್ಥವ್ಯವಸ್ಥೆ; ಕ್ರಿಕೆಟ್ ದರ್ಬಾರಿನಲ್ಲಿ ಸೊರಗಿದ ಇತರ ಆಟಗಳು

ಐಪಿಎಲ್‌ನಲ್ಲಿ ಕೇವಲ ಬೆಂಚ್ ಕಾಯುವ ಸಾಮಾನ್ಯ ಕ್ರಿಕೆಟ್ ಆಟಗಾರನೊಬ್ಬ ಕೋಟ್ಯಾಧಿಪತಿಯಾಗಿ ಐಷಾರಾಮಿ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...