ದಾಖಲೆ ಬರೆದ ಭಾರತ-ಪಾಕ್ ಪಂದ್ಯ: ಟಿ20 ವಿಶ್ವಕಪ್‌ನಲ್ಲಿ ಅತಿ ಹೆಚ್ಚು ವೀಕ್ಷಣೆಯ ಮೈಲಿಗಲ್ಲು

Date:

ಫೆಬ್ರವರಿ 15ರಂದು ಇಲ್ಲಿನ ಅಹಮದಾಬಾದ್‌ನ ಕ್ರೀಡಾಂಗಣದಲ್ಲಿ ನಡೆದ ಭಾರತ ಮತ್ತು ಪಾಕಿಸ್ತಾನ ನಡುವಿನ ಟಿ20 ವಿಶ್ವಕಪ್ ಪಂದ್ಯವು ಮೈದಾನದಲ್ಲಿ ಮಾತ್ರವಲ್ಲದೆ, ಡಿಜಿಟಲ್ ವೀಕ್ಷಣೆಯಲ್ಲೂ ಹೊಸ ಇತಿಹಾಸ ಸೃಷ್ಟಿಸಿದೆ.

ಐಸಿಸಿ ಪುರುಷರ ಟಿ20 ವಿಶ್ವಕಪ್ 2026ರ ಅಧಿಕೃತ ಡಿಜಿಟಲ್ ಮತ್ತು ಪ್ರಸಾರ ಪಾಲುದಾರರಾದ ‘ಜಿಯೋಸ್ಟಾರ್’ ಬಿಡುಗಡೆ ಮಾಡಿರುವ ಮಾಹಿತಿಯ ಪ್ರಕಾರ, ಈ ಪಂದ್ಯವು 16.3 ಕೋಟಿ (163 ಮಿಲಿಯನ್) ಡಿಜಿಟಲ್ ವೀಕ್ಷಕರನ್ನು ತಲುಪುವ ಮೂಲಕ ಅಭೂತಪೂರ್ವ ದಾಖಲೆ ನಿರ್ಮಿಸಿದೆ. ಇದು 2024ರ ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಫೈನಲ್ ಪಂದ್ಯದ ವೀಕ್ಷಣೆಯನ್ನೂ ಹಿಂದಿಕ್ಕಿದ್ದು, ಐಸಿಸಿ ಟಿ20 ವಿಶ್ವಕಪ್ ಇತಿಹಾಸದಲ್ಲೇ ಅತಿ ಹೆಚ್ಚು ವೀಕ್ಷಣೆ ಪಡೆದ ಪಂದ್ಯವಾಗಿ ಹೊರಹೊಮ್ಮಿದೆ. ಭಾರತ ತಂಡದ ಅಮೋಘ ಪ್ರದರ್ಶನವು 2024ರ ಆವೃತ್ತಿಯ ಭಾರತ-ಪಾಕ್ ಪಂದ್ಯಕ್ಕೆ ಹೋಲಿಸಿದರೆ ಡಿಜಿಟಲ್ ತಲುಪುವಿಕೆಯಲ್ಲಿ ಶೇ 56ರಷ್ಟು ಏರಿಕೆ ಕಾಣಲು ಕಾರಣವಾಗಿದೆ. ಎಲ್ಲಾ ಪರದೆಗಳ ಮೂಲಕ ಅಭಿಮಾನಿಗಳು ಒಟ್ಟು 2000 ಕೋಟಿ (20 ಬಿಲಿಯನ್) ನಿಮಿಷಗಳ ಕಾಲ ಈ ಪಂದ್ಯವನ್ನು ವೀಕ್ಷಿಸಿದ್ದಾರೆ.

ಮೈದಾನದಲ್ಲಿ ಸಂಪೂರ್ಣ ಪಾರುಪತ್ಯ ಮೆರೆದ ಭಾರತ, ಪಾಕಿಸ್ತಾನವನ್ನು 61 ರನ್‌ಗಳಿಂದ ಸೋಲಿಸುವ ಮೂಲಕ ಅಜೇಯವಾಗಿ ಸೂಪರ್-8 ಹಂತವನ್ನು ಪ್ರವೇಶಿಸಿದೆ. ಟಾಸ್ ಗೆದ್ದು ಮೊದಲು ಫೀಲ್ಡಿಂಗ್ ಆಯ್ದುಕೊಂಡ ಪಾಕಿಸ್ತಾನದ ನಾಯಕ ಸಲ್ಮಾನ್ ಅಲಿ ಅಘಾ, ಮೊದಲ ಓವರ್ ತಾವೇ ಬೌಲ್ ಮಾಡುವ ಮೂಲಕ ಅಚ್ಚರಿ ಮೂಡಿಸಿದರು. ಅಲ್ಲದೆ, ಆರಂಭಿಕ ಬ್ಯಾಟರ್ ಅಭಿಷೇಕ್ ಶರ್ಮಾ ವಿಕೆಟ್ ಪಡೆಯುವಲ್ಲಿ ಯಶಸ್ವಿಯಾದರು. ಆದರೆ, ಬಳಿಕ ಕ್ರೀಸ್‌ಗೆ ಇಳಿದ ಇಶಾನ್ ಕಿಶನ್ ಸ್ಫೋಟಕ ಬ್ಯಾಟಿಂಗ್ ಮೂಲಕ ಆಟದ ಗತಿಯನ್ನೇ ಬದಲಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಶಾಹೀನ್ ಶಾ ಅಫ್ರಿದಿ ಎಸೆದ ಮೊದಲ ಬಂತನ್ನೇ ಸಿಕ್ಸರ್‌ಗಟ್ಟಿದ ಕಿಶನ್ ಸತತ ದಾಳಿ ಮುಂದುವರಿಸಿದರು. ತಿಲಕ್ ವರ್ಮಾ ಅವರ ಬೆಂಬಲದೊಂದಿಗೆ ಭಾರತ ಪವರ್‌ಪ್ಲೇ ಅಂತ್ಯಕ್ಕೆ 1 ವಿಕೆಟ್ ನಷ್ಟಕ್ಕೆ 52 ರನ್ ಕಲೆಹಾಕಿತು. ಕೇವಲ 27 ಎಸೆತಗಳಲ್ಲಿ ಅರ್ಧಶತಕ ಸಿಡಿಸಿದ ಕಿಶನ್, ಅಂತಿಮವಾಗಿ 40 ಎಸೆತಗಳಲ್ಲಿ 77 ರನ್ ಚಚ್ಚಿ ಸೈಮ್ ಅಯೂಬ್‌ಗೆ ವಿಕೆಟ್ ಒಪ್ಪಿಸಿದರು.

ಇದನ್ನು ಓದಿದ್ದೀರಾ? 6 ದಶಕಗಳ ಕಾಯುವಿಕೆ ಅಂತ್ಯ: ಬಂಗಾಳವನ್ನು ಬಗ್ಗು ಬಡಿದು ರಣಜಿ ಫೈನಲ್ ಪ್ರವೇಶಿಸಿದ ಜಮ್ಮು ಕಾಶ್ಮೀರ

ದಾಖಲೆಯ ಸ್ಪಿನ್ ದಾಳಿ
ಪಾಕಿಸ್ತಾನವು ಈ ಇನಿಂಗ್ಸ್‌ನಲ್ಲಿ ಆರು ಮಂದಿ ಸ್ಪಿನ್ನರ್‌ಗಳನ್ನು ಬಳಸಿದ್ದು, ಇದು ಟಿ20 ವಿಶ್ವಕಪ್ ಇತಿಹಾಸದಲ್ಲಿ ಒಂದು ತಂಡ ಬಳಸಿದ ಅತಿ ಹೆಚ್ಚು ಸ್ಪಿನ್ನರ್‌ಗಳ ದಾಖಲೆಯಾಗಿದೆ (ಟಿ20 ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ ಪೂರ್ಣ ಸದಸ್ಯ ರಾಷ್ಟ್ರವೊಂದರ ಜಂಟಿ-ಅತಿ ಹೆಚ್ಚು). ಪಾಕ್ ಪರ ಅತ್ಯುತ್ತಮ ಬೌಲಿಂಗ್ ಪ್ರದರ್ಶಿಸಿದ ಸೈಮ್ ಅಯೂಬ್ 25 ರನ್ ನೀಡಿ 3 ವಿಕೆಟ್ ಕಬಳಿಸಿದರು (ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ ವಿಕೆಟ್ ಪಡೆದು ಹ್ಯಾಟ್ರಿಕ್ ಸನಿಹಕ್ಕೆ ಬಂದಿದ್ದರು). ನಾಯಕ ಸೂರ್ಯಕುಮಾರ್ ಯಾದವ್ (32), ಶಿವಂ ದುಬೆ (27) ಹಾಗೂ ರಿಂಕು ಸಿಂಗ್ (11) ಅವರ ಉಪಯುಕ್ತ ಕಾಣಿಕೆಯೊಂದಿಗೆ ಭಾರತ 20 ಓವರ್‌ಗಳಲ್ಲಿ 7 ವಿಕೆಟ್ ನಷ್ಟಕ್ಕೆ 175 ರನ್ ಕಲೆಹಾಕಿತು.

176 ರನ್‌ಗಳ ಗುರಿ ಬೆನ್ನಟ್ಟಿದ ಪಾಕಿಸ್ತಾನದ ಬ್ಯಾಟಿಂಗ್ ಲೈನ್‌ಅಪ್ ಆರಂಭದಲ್ಲೇ ಕುಸಿಯಿತು. ಶಾಹೀಬ್‌ಜಾದಾ ಫರ್ಹಾನ್ ಅವರನ್ನು ಹಾರ್ದಿಕ್ ಪಾಂಡ್ಯ ಶೂನ್ಯಕ್ಕೆ ಪೆವಿಲಿಯನ್‌ಗಟ್ಟಿದರೆ, ಜಸ್‌ಪ್ರೀತ್ ಬೂಮ್ರಾ ಮಧ್ಯಮ ಕ್ರಮಾಂಕವನ್ನು ಕೆಡವಿದರು. ಒತ್ತಡಕ್ಕೆ ಸಿಲುಕಿದ ನಾಯಕ ಸಲ್ಮಾನ್ ಅಲಿ ಅಘಾ ಹಾಗೂ ಬಾಬರ್ ಆಜಂ ಕೂಡ ವಿಫಲರಾದರು. ಉಸ್ಮಾನ್ ಖಾನ್ (34 ಎಸೆತಗಳಲ್ಲಿ 44 ರನ್) ಏಕಾಂಗಿ ಹೋರಾಟ ನಡೆಸಿದರೂ ತಂಡವನ್ನು ಸೋಲಿನಿಂದ ಪಾರುಮಾಡಲಾಗಲಿಲ್ಲ. ಜಸ್‌ಪ್ರೀತ್ ಬೂಮ್ರಾ (2/17), ಅಕ್ಷರ್ ಪಟೇಲ್ (2/29) ಮತ್ತು ವರುಣ್ ಚಕ್ರವರ್ತಿ (2/16) ಅವರ ಮಾರಕ ಬೌಲಿಂಗ್ ದಾಳಿಗೆ ನಲುಗಿದ ಪಾಕಿಸ್ತಾನ 17.5 ಓವರ್‌ಗಳಲ್ಲಿ ಕೇವಲ 114 ರನ್‌ಗಳಿಗೆ ಆಲೌಟ್ ಆಗಿ ಸೋಲು ಅನುಭವಿಸಿತು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...