474ಕ್ಕೆ ಆಸೀಸ್‌ ಆಲೌಟ್; ಕಪ್ಪು ಪಟ್ಟಿ ಧರಿಸಿ ಮಾಜಿ ಪ್ರಧಾನಿಗೆ ಗೌರವ ಸಲ್ಲಿಸಿದ ಟೀಂ ಇಂಡಿಯಾ

Date:

ಮೆಲ್ಬೋರ್ನ್​ನಲ್ಲಿ ನಡೆಯುತ್ತಿರುವ ಬಾರ್ಡರ್ – ಗವಾಸ್ಕರ್ ಟ್ರೋಫಿ ಸರಣಿಯ ಬಾಕ್ಸಿಂಗ್ ಡೇ ಟೆಸ್ಟ್‌ ಪಂದ್ಯದಲ್ಲಿ ಆಸೀಸ್‌ ತನ್ನ ಮೊದಲ ಇನಿಂಗ್ಸ್‌ನಲ್ಲಿ 122.4 ಓವರ್‌ಗಳಲ್ಲಿ 474 ರನ್‌ಗಳಿಗೆ ಆಲೌಟ್ ಆಗಿದೆ. 311/6 ರನ್‌ನೊಂದಿಗೆ ಎರಡನೇ ದಿನದಾಟ ಆರಂಭಿಸಿದ ಆಸ್ಟ್ರೇಲಿಯಾ ಸ್ಟೀವನ್‌ ಸ್ಮಿತ್‌ ಅವರ ಆಕರ್ಷಕ ಶತಕದ(140) ನೆರವಿನಿಂದಿಗೆ 470ರ ಗಡಿ ದಾಟಿತು.

ಟೀಂ ಇಂಡಿಯಾ ಪರ ಜಸ್‌ಪ್ರೀತ್ ಬುಮ್ರಾ ಮತ್ತೆ ತಮ್ಮ ಕರಾರುವಾಕ್ಕಾದ ಬೌಲಿಂಗ್ ಮೂಲಕ 4 ವಿಕೆಟ್ ಪಡೆದರೆ, ರವೀಂದ್ರ ಜಡೇಜಾ 3 ಆಕಾಶ್ ದೀಪ್ 2, ವಾಷಿಂಗ್ಟನ್ ಸುಂದರ್ 1 ವಿಕೆಟ್ ಪಡೆದು ಆಸೀಸ್‌ ತಂಡವನ್ನು ಆಲೌಟ್‌ ಮಾಡಿದರು.

ಮೊದಲ ಇನಿಂಗ್ಸ್‌ ಆರಂಭಿಸಿರುವ ಭಾರತ ತಂಡ ನಾಯಕ ರೋಹಿತ್‌ ಶರ್ಮಾ ವಿಕೆಟ್‌ ಕಳೆದುಕೊಂಡು ಆರಂಭಿಕ ಆಘಾತ ಅನುಭವಿಸಿದೆ. ಮೂರು ರನ್‌ ಗಳಿಸಿದ ರೋಹಿತ್‌ ಆಸೀಸ್‌ ನಾಯಕ ಪ್ಯಾಟ್‌ ಕಮ್ಮಿನ್ಸ್ ಬೌಲಿಂಗ್‌ನಲ್ಲಿ ಬೊಲ್ಯಾಂಡ್‌ಗೆ ಕ್ಯಾಚ್‌ ನೀಡಿ ಔಟಾದರು. ಇತ್ತೀಚಿನ ವರದಿಗಳಂತೆ ಟೀಂ ಇಂಡಿಯಾ 11 ಓವರ್‌ಗಳಿಗೆ 1 ವಿಕೆಟ್‌ ಕಳೆದುಕೊಂಡು 44 ರನ್‌ ಗಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಪ್ಪು ಪಟ್ಟಿ ಧರಿಸಿ ಮಾಜಿ ಪ್ರದಾನಿಗೆ ಗೌರವ ಸಲ್ಲಿಸಿದ ಟೀಂ ಇಂಡಿಯಾ

ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ನಿಧನದ ಹಿನ್ನೆಲೆಯಲ್ಲಿ ಆಸ್ಟ್ರೇಲಿಯಾ ವಿರುದ್ಧ ಟೆಸ್ಟ್ ಸರಣಿಯನ್ನು ಆಡುತ್ತಿರುವ ಟೀಂ ಇಂಡಿಯಾ ಎರಡನೇ ದಿನದಾಟದಲ್ಲಿ ಮನಮೋಹನ್ ಸಿಂಗ್ ಅವರಿಗೆ ಗೌರವ ಸಲ್ಲಿಸಲು ಕೈಗೆ ಕಪ್ಪು ಪಟ್ಟಿ ಧರಿಸಿ ಕ್ಷೇತ್ರರಕ್ಷಣೆ ಮಾಡಿದರು.

ಈ ಸುದ್ದಿ ಓದಿದ್ದೀರಾ? ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ನಿಧನ

ಟೀಂ ಇಂಡಿಯಾದ ಹಲವು ಮಾಜಿ ಆಟಗಾರರು ಸಂತಾಪ ಸೂಚಿಸಿ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್​ಗಳನ್ನು ಹಂಚಿಕೊಂಡಿದ್ದಾರೆ. ತಮ್ಮ ಎಕ್ಸ್ ಖಾತೆಯಲ್ಲಿ ಸಂತಾಪ ಸೂಚಿಸಿರುವ ವಿರೇಂದ್ರ ಸೆಹ್ವಾಗ್, ‘ನಮ್ಮ ಮಾಜಿ ಪ್ರಧಾನಿ ಶ್ರೀ ಮನಮೋಹನ್ ಸಿಂಗ್ ಅವರ ನಿಧನಕ್ಕೆ ನನ್ನ ಹೃತ್ಪೂರ್ವಕ ಸಂತಾಪಗಳು ಎಂದು ಬರೆದುಕೊಂಡಿದ್ದಾರೆ.

ಭಾರತದ ಮಾಜಿ ಆಲ್ ರೌಂಡರ್ ಯುವರಾಜ್ ಸಿಂಗ್ ಕೂಡ ಸಂತಾಪ ಸೂಚಿಸಿದ್ದು, ‘ಡಾ. ಮನಮೋಹನ್ ಸಿಂಗ್ ಅವರ ನಿಧನದ ದುಃಖದ ಸುದ್ದಿ. ಭಾರತದ ಪ್ರಗತಿಗಾಗಿ ಅವಿರತವಾಗಿ ಶ್ರಮಿಸಿದ ದೂರದೃಷ್ಟಿಯ ನಾಯಕ ಮತ್ತು ನಿಜವಾದ ರಾಜಕಾರಣಿ. ಅವರ ಬುದ್ಧಿವಂತಿಕೆ ಮತ್ತು ನಮ್ರತೆ ಯಾವಾಗಲೂ ನೆನಪಿನಲ್ಲಿ ಉಳಿಯುತ್ತದೆ. ಅವರ ಪ್ರೀತಿಪಾತ್ರರಿಗೆ ನನ್ನ ಹೃತ್ಪೂರ್ವಕ ಸಂತಾಪಗಳು ಎಂದು ಬರೆದುಕೊಂಡಿದ್ದಾರೆ.

ಭಾರತ – ಪಾಕ್‌ ಕ್ರಿಕೆಟ್‌ ಸಂಬಂಧ ಮರುಸ್ಥಾಪಿಸಲು ಯತ್ನಿಸಿದ್ದ ಮನಮೋಹನ್

ಭಾರತ-ಪಾಕಿಸ್ತಾನ ನಡುವಿನ ಕ್ರಿಕೆಟ್ ಸಂಬಂಧವನ್ನು ಮರುಸ್ಥಾಪಿಸಲು ಮಾಜಿ ಪ್ರಧಾನಿ ಮನ್‌ಮೋಹನ್‌ ಸಿಂಗ್‌ ಯತ್ನಿಸಿ ಯಶಸ್ವಿಯಾಗಿದ್ದರು. 2008ರಲ್ಲಿ ಮುಂಬೈ ದಾಳಿ ಬಳಿಕ ಭಾರತ-ಪಾಕ್ ಕ್ರಿಕೆಟ್ ಸಂಬಂಧ ಹಳಸಿತ್ತು.ಆಗ ಪ್ರಧಾನಿಯಾಗಿದ್ದ ಸಿಂಗ್‌ ಅವರು ಪಾಕಿಸ್ತಾನದ ಪ್ರಧಾನಿ ಯೂಸುಫ್ ಗಿಲಾನಿಯನ್ನೇ ಭಾರತಕ್ಕೆ ಆಹ್ವಾನಿಸಿದರು. ಆಹ್ವಾನ ಸ್ವೀಕರಿಸಿ ಯೂಸುಫ್ ಭಾರತಕ್ಕೆ ಆಗಮಿಸಿದರು. ಮೊಹಾಲಿಯಲ್ಲಿ ನಡೆದ ಐತಿಹಾಸಿಕ ಪಂದ್ಯವನ್ನು ಸಿಂಗ್-ಯೂಸುಫ್ ಗಿಲಾನಿ ಒಟ್ಟಿಗೇ ಕೂತು ವೀಕ್ಷಿಸಿದರು. ಬಳಿಕ 2012ರಲ್ಲಿ ಭಾರತ-ಪಾಕ್ ನಡುವೆ ಭಾರತದಲ್ಲಿ ದ್ವಿಪಕ್ಷೀಯ ಸರಣಿ ನಡೆಯಿತು. ಎರಡು ತಂಡಗಳ ನಡುವೆ ದ್ವಿಪಕ್ಷೀಯ ಸರಣಿ ನಡೆದಿದ್ದು ಅದೇ ಕೊನೆ ಬಾರಿ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...