ಐಪಿಎಲ್ 2023 | ರಿಂಕು ಸಿಂಗ್‌ ಸಿಕ್ಸರ್‌ಗಳ ಸುರಿಮಳೆ; ಗುಜರಾತ್‌ಗೆ ಮೊದಲ ಸೋಲು   

Date:

ರಿಂಕು ಸಿಂಗ್ ಕೊನೆಯ ಓವರ್‌ನಲ್ಲಿ ಸಿಡಿಸಿದ ಐದು ಸಿಕ್ಸರ್‌ ನೆರವಿನಿಂದ ಕೋಲ್ಕತ್ತಾ ನೈಟ್‌ ರೈಡರ್ಸ್, ಗುಜರಾತ್‌ ಟೈಟಾನ್ಸ್‌ ವಿರುದ್ಧ ಮೂರು ವಿಕೆಟ್‌ಗಳ ಜಯ ದಾಖಲಿಸಿತು.

ಅಹಮದಾಬಾದಿನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್‌ 16ನೇ ಆವೃತ್ತಿಯ 13 ಪಂದ್ಯದಲ್ಲಿ ಗುಜರಾತ್‌ ಟೈಟಾನ್ಸ್ ನೀಡಿದ 205 ರನ್‌ಗಳನ್ನು ಬೆನ್ನಟ್ಟಿದ ಕೋಲ್ಕತ್ತಾ, ಕೊನೆಯ ಓವರ್‌ನಲ್ಲಿ ಯಶ್ ದಯಾಳ್ ಬೌಲಿಂಗ್‌ನಲ್ಲಿ ರಿಂಕು ಸಿಂಗ್ ಸಿಡಿಸಿದ 5 ಸಿಕ್ಸರ್‌ ನೆರವಿನಿಂದ 3 ವಿಕೆಟ್‌ಗಳ ರೋಚಕ ಗೆಲುವು ಕಂಡಿತು.

ಉತ್ತಮ ಆರಂಭ ಪಡೆಯುವಲ್ಲಿ ಕೆಕೆಆರ್ ಬ್ಯಾಟ್ಸಮನ್‌ಗಳು ವಿಫಲವಾದರು. ಮೂರನೆಯ ಓವರ್‌ನ ಮೂರನೇ ಎಸೆತದಲ್ಲಿ ರೆಹಮನುಲ್ಲಾ ಗುರ್ಬಾಜ್‌ 15 ರನ್‌ ಗಳಿಸಿ ವಿಕೆಟ್ ಒಪ್ಪಿಸಿದರು. ಇನ್ನು ಮನ್‌ದೀಪ್‌ ಸಿಂಗ್ ಬದಲಿಗೆ ಸ್ಥಾನ ಪಡೆದಿದ್ದ ಎನ್ ಜಗದೀಶನ್‌ ಆಟ ಕೇವಲ 6 ರನ್‌ಗೆ ಸೀಮಿತವಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅಯ್ಯರ್- ರಾಣಾ ಶತಕದ ಜತೆಯಾಟ

ಕೇವಲ 28 ರನ್‌ಗಳಿಗೆ ಎರಡು ವಿಕೆಟ್ ಕಳೆದುಕೊಂಡು ಕಂಗಾಲಾಗಿದ್ದ ಕೆಕೆಆರ್‌ಗೆ ಮೂರನೇ ವಿಕೆಟ್‌ಗೆ ಇಂಪ್ಯಾಕ್ಟ್‌ ಪ್ಲೇಯರ್ ವೆಂಕಟೇಶ್ ಅಯ್ಯರ್ ಹಾಗೂ ನಾಯಕ ನಿತೀಶ್ ರಾಣಾ ಸ್ಪೋಟಕ ಶತಕದ ಜತೆಯಾಟವಾಡುವ ಮೂಲಕ ತಂಡಕ್ಕೆ ಆಸರೆಯಾದರು.

ಕೇವಲ 55 ಎಸೆತಗಳಲ್ಲಿ ಇವರಿಬ್ಬರ ಜೋಡಿ 100 ರನ್‌ಗಳ ಜತೆಯಾಟವಾಡಿತು. ಆಕರ್ಷಕ ಬ್ಯಾಟಿಂಗ್ ನಡೆಸಿದ ನಾಯಕ ನಿತೀಶ್ ರಾಣಾ, 29 ಎಸೆತಗಳಲ್ಲಿ 4 ಬೌಂಡರಿ ಹಾಗೂ 3 ಸಿಕ್ಸರ್ ಸಹಿತ 45 ರನ್ ಬಾರಿಸಿ ಅಲ್ಜೆರಿ ಜೋಸೆಫ್‌ಗೆ ವಿಕೆಟ್‌ ಒಪ್ಪಿಸಿದರು.

ವೆಂಕಟೇಶ್ ಅಯ್ಯರ್ ಕೇವಲ 40 ಎಸೆತಗಳಲ್ಲಿ 8 ಬೌಂಡರಿ ಹಾಗೂ 5 ಸಿಕ್ಸರ್ ಸಹಿತ 83 ರನ್ ಬಾರಿಸಿ ಅವರೂ ಕೂಡ ಅಲ್ಜೆರಿ ಜೋಸೆಫ್‌ಗೆ ಔಟಾದರು. ಇದರ ಬೆನ್ನಲ್ಲೇ ಕೆಕೆಆರ್ ತಂಡ ರಶೀದ್ ಖಾನ್ ಹ್ಯಾಟ್ರಿಕ್ ದಾಳಿಗೆ ಏಕಾಏಕಿ ಕುಸಿಯಿತು.

ರಶೀದ್ ಖಾನ್ ಮೊದಲ ಹ್ಯಾಟ್ರಿಕ್

ತಮ್ಮ ಐಪಿಎಲ್‌ ಕೆರಿಯರ್‌ನಲ್ಲಿ ಮೊದಲ ಹ್ಯಾಟ್ರಿಕ್‌ ವಿಕೆಟ್‌ ಪಡೆಯುವ ಮೂಲಕ ಸ್ಪಿನ್ನರ್‌ ರಶೀದ್‌ ಖಾನ್‌ ವಿಶೇಷ ಸಾಧನೆ ಮಾಡಿದರು. ತಮ್ಮ 17ನೇ ಓವರ್‌ನಲ್ಲಿ ರಸಲ್‌, ಸುನಿಲ್‌ ನರೈನ್‌ ಹಾಗೂ ಶಾರ್ಧೂಲ್‌ ಠಾಕೂರ್‌ ಅವರ ವಿಕೆಟ್ ಪಡೆದರು.     

ವಿಜಯ್‌ ಶಂಕರ್‌, ಸಾಯಿ ಸುದರ್ಶನ್‌ ಭರ್ಜರಿ ಆಟ

ಹಾರ್ದಿಕ್‌ ಪಾಂಡ್ಯ ಅನುಪಸ್ಥಿತಿಯಲ್ಲಿ ತಂಡದ ನಾಯಕತ್ವ ವಹಿಸಿದ್ದ ರಶೀದ್ ಖಾನ್, ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡರು. 

ಆರಂಭಿಕ ಬ್ಯಾಟ್ಸಮನ್ ವೃದ್ಧಿಮಾನ್‌ ಸಾಹಾ ಮತ್ತು ಶುಭಮನ್‌ ಗಿಲ್‌ ಮೊದಲ ವಿಕೆಟ್‌ ಜೊತೆಯಾಟದಲ್ಲಿ 33 ರನ್‌ ಕಲೆ ಹಾಕಿದರು. 17 ರನ್‌ ಗಳಿಸಿ ಸಾಹಾ ಔಟಾದ ಬಳಿಕ ಸಾಯಿ ಸುದರ್ಶನ್‌ ಹಾಗೂ ಗಿಲ್‌ ಜೊತೆಗೂಡಿದರು. ಇವರಿಬ್ಬರೂ ಉತ್ತಮ ಜೊತೆಯಾಟವಾಡಿ ತಂಡದ ಮೊತ್ತವನ್ನು ಶತಕದತ್ತ ಕೊಂಡೊಯ್ದರು.

ಗಿಲ್‌, ಸುನಿಲ್‌ ನರೈನ್‌ ಬೌಲಿಂಗ್‌ನಲ್ಲಿ ನಿರ್ಗಮಿಸಿದ ನಂತರ ಶುರುವಾದದ್ದು ಸಾಯಿ ಸುದರ್ಶನ್‌ ಮತ್ತು ವಿಜಯ್‌ ಶಂಕರ್‌ ಅವರ ಜೊತೆಯಾಟ. ಇಬ್ಬರ ಜೋಡಿ, ಬೌಂಡರಿ, ಸಿಕ್ಸರ್‌ ಬಾರಿಸುತ್ತಾ ತಂಡದ ಮೊತ್ತವನ್ನು 204ಕ್ಕೆ ಕೊಂಡೊಯ್ದುರು.

blank profile picture 973460 640
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...