ಸದ್ಯಕ್ಕಂತೂ ಏಕದಿನ ಕ್ರಿಕೆಟ್‌ನಿಂದ ನಿವೃತ್ತಿಯಾಗಲ್ಲ: ವದಂತಿಗಳಿಗೆ ಸ್ಪಷ್ಟ ತೆರೆ ಎಳೆದ ರೋಹಿತ್ ಶರ್ಮಾ

Date:

“ನಾನು ಏಕದಿನ ಅಂತಾರಾಷ್ಟ್ರೀಯ ಕ್ರಿಕೆಟ್‌ ಮಾದರಿಯಿಂದ ಸದ್ಯಕ್ಕಂತೂ ನಿವೃತ್ತಿಯಾಗುವುದಿಲ್ಲ. ಮುಂದಿನ ದಿನಗಳಲ್ಲಿ ಯಾವುದೇ ವದಂತಿಗಳು ಹರಡದಿರಲು ಈ ಮಾತನ್ನು ಸ್ಪಷ್ಟವಾಗಿ ಹೇಳುತ್ತಿದ್ದೇನೆ”…. ಈ ರೀತಿಯ ಹೇಳಿಕೆ ನೀಡಿದ್ದು ಟೀಮ್ ಇಂಡಿಯಾ ನಾಯಕ, ಹಿಟ್ ಮ್ಯಾನ್ ರೋಹಿತ್ ಶರ್ಮಾ.

ಹೌದು.‌ ಈ ರೀತಿಯ ಸ್ಪಷ್ಟವಾದ ಹೇಳಿಕೆಯನ್ನು ಬಹಿರಂಗವಾಗಿಯೇ ಹೇಳುವ ಮೂಲಕ ತಮ್ಮ ನಿವೃತ್ತಿ ವದಂತಿಗಳಿಗೆ ನಾಯಕ ತೆರೆ ಎಳೆದಿದ್ದಾರೆ.

ದುಬೈಯ ಅಂತಾರಾಷ್ಟ್ರೀಯ ಕ್ರಿಕೆಟ್ ಮೈದಾನದಲ್ಲಿ ನ್ಯೂಜಿಲ್ಯಾಂಡ್ ವಿರುದ್ಧ ನಡೆದ ಚಾಂಪಿಯನ್ಸ್ ಟ್ರೋಫಿಯ ಫೈನಲ್ ಪಂದ್ಯದಲ್ಲಿ 4 ವಿಕೆಟ್‌ಗಳ ಅಂತರದಿಂದ ಸೋಲಿಸಿ, ಚಾಂಪಿಯನ್‌ ಪಟ್ಟ ಅಲಂಕರಿಸಿದ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರೋಹಿತ್ ಶರ್ಮಾ, ಸುದ್ದಿಗೋಷ್ಠಿಯ ಮುಗಿಸುವುದಕ್ಕೂ ಮುನ್ನ ಈ ರೀತಿಯ ಹೇಳಿಕೆ ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ತಮ್ಮ ಕುರ್ಚಿಯಿಂದ ಏಳುವುದಕ್ಕೂ ಮುನ್ನ, “ಇನ್ನೊಂದು ವಿಷಯ. ನಾನು ಏಕದಿನ ಅಂತಾರಾಷ್ಟ್ರೀಯ ಕ್ರಿಕೆಟ್ ಮಾದರಿಯಿಂದ ನಿವೃತ್ತಿ ಪಡೆಯುತ್ತಿಲ್ಲ. ಮುಂದೆ ಯಾವುದೇ ವದಂತಿಗಳು ಹರಡಲ್ಲ ಎಂದು ಖಚಿತಪಡಿಸಿಕೊಳ್ಳಲು ಇದನ್ನು ಹೇಳುತ್ತಿದ್ದೇನೆ. ಧನ್ಯವಾದಗಳು” ಎಂದು ರೋಹಿತ್ ಹೇಳಿದರು.

ಹಿಟ್‌ಮ್ಯಾನ್‌ ನಿರ್ಧಾರವು ಆಘಾತಕಾರಿ ಅಂತೂ ಅಲ್ಲ. ಚಾಂಪಿಯನ್ಸ್‌ ಟ್ರೋಫಿ ಫೈನಲ್‌ ಪಂದ್ಯವು ಸಕ್ರಿಯ ಭಾರತೀಯ ಕ್ರಿಕೆಟಿಗನಾಗಿ ರೋಹಿತ್ ಅವರ ಕೊನೆಯ ಪಂದ್ಯ ಎಂಬ ವದಂತಿಗಳು ಹರಡಿತ್ತು. ಆದರೂ, 38 ವರ್ಷದ ಆಟಗಾರನ ಫಿಟ್‌ನೆಸ್‌, ಫಾರ್ಮ್‌ ನೋಡಿದರೆ ಅವರ ನಿವೃತ್ತಿಗೆ ಇನ್ನೂ ಸ್ವಲ್ಪ ಸಮಯವಿದೆ ಎಂಬುವುದು ಸ್ಪಷ್ಟವಾಗಿದೆ‌.

1003730297

ಇತ್ತೀಚೆಗೆ ಅಂತ್ಯಗೊಂಡ ಬಾರ್ಡರ್-ಗವಾಸ್ಕರ್ ಟ್ರೋಫಿಯ ಸಮಯದಲ್ಲಿ, ಸಿಡ್ನಿ ಟೆಸ್ಟ್‌ ಪಂದ್ಯಕ್ಕೂ ಮುಂಚಿತವಾಗಿ ರೋಹಿತ್ ಆಡುವ ಬಳಗದಿಂದ ಹೊರಗುಳಿದಾಗ ನಿವೃತ್ತಿ ವದಂತಿ ಸೋಷಿಯಲ್ ಮೀಡಿಯಾಗಳಲ್ಲಿ ಹರಡಿತ್ತು. ಬಾಕ್ಸಿಂಗ್ ಡೇ ಟೆಸ್ಟ್ ಮುಗಿದ ಬಳಿಕ ರೋಹಿತ್ ನಿವೃತ್ತಿ ಘೋಷಿಸುತ್ತಾರೆ ಎಂದು ವರದಿಯಾಗಿತ್ತು. ಆದರೆ, ರೋಹಿತ್ ತಾನು ಟೀಮ್ ಇಂಡಿಯಾಕ್ಕಾಗಿ ಆಡುವುದನ್ನು ಮುಂದುವರಿಸುತ್ತೇನೆ ಎಂದು ಸ್ಪಷ್ಟವಾಗಿ ತಿಳಿಸಿದ್ದಾರೆ. ಆ ಮೂಲಕ ಎಲ್ಲ ವದಂತಿಗಳಿಗೆ ತೆರೆ ಎಳೆದಿದ್ದಾರೆ.

1003730326

ಸದ್ಯ ತಾನು ಏಕದಿನ ಮಾದರಿಯ ಕ್ರಿಕೆಟ್‌ನಲ್ಲಿ ಆಡುವುದನ್ನು ಮುಂದುವರೆಸುವುದಾಗಿ ರೋಹಿತ್‌ ಪ್ರತಿಜ್ಞೆ ಮಾಡಿದ್ದರೂ, ಅವರು ದಕ್ಷಿಣ ಆಫ್ರಿಕಾದಲ್ಲಿ ನಡೆಯಲಿರುವ 2027ರ ವಿಶ್ವಕಪ್‌ನಲ್ಲಿ ಆಡುತ್ತಾರಾ ಎಂಬುದನ್ನು ಕಾದು ನೋಡಬೇಕಾಗಿದೆ. ಏಕೆಂದರೆ ಟೂರ್ನಿಗೆ ಇನ್ನೂ ಎರಡು ವರ್ಷಗಳಿವೆ. ಹಾಗಾಗಿ, ಈ ನಡುವೆ ಏನೆಲ್ಲ ಬೆಳವಣಿಗೆಗಳು ನಡೆಯಲಿದೆ ಎಂಬುದನ್ನು ಕಾದು ನೋಡಬೇಕಿದೆ.

ಟೀಮ್ ಇಂಡಿಯಾ ನಾಯಕನಾಗಿ ರೋಹಿತ್ ಶರ್ಮಾ ಅವರು ಈ ಹಿಂದೆ ಎಂಎಸ್ ಧೋನಿ ಮಾಡಿದ ಸಾಧನೆಯನ್ನು ಮಾಡಿದ್ದಾರೆ. ಒಂದಕ್ಕಿಂತ ಹೆಚ್ಚು ಐಸಿಸಿ ಪ್ರಶಸ್ತಿಗಳನ್ನು ಗೆದ್ದಿದ್ದಾರೆ. ಕೇವಲ ಒಂಬತ್ತು ತಿಂಗಳ ಅವಧಿಯಲ್ಲಿ ಭಾರತವನ್ನು ಟಿ20 ವಿಶ್ವಕಪ್ ಮತ್ತು ಚಾಂಪಿಯನ್ಸ್ ಟ್ರೋಫಿಗೆ ಮುನ್ನಡೆಸಿದ್ದಾರೆ.

ಒಂದು ವೇಳೆ 2023ರ ನವೆಂಬರ್ 19ರಂದು ಆಸ್ಟ್ರೇಲಿಯಾ ವಿರುದ್ಧ ಅಹ್ಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದಿದ್ದ ಏಕದಿನ ಫೈನಲ್ ಪಂದ್ಯದಲ್ಲಿ ವಿಶ್ವಕಪ್‌ ಗೆಲ್ಲುತ್ತಿದ್ದರೆ ವಿಶ್ವ‌ ಅದು ದಾಖಲೆಯಾಗುತ್ತಿತ್ತು. ಎರಡು ವರ್ಷಗಳಿಗಿಂತ ಕಡಿಮೆ ಅವಧಿಯಲ್ಲಿ ಎಲ್ಲಾ ಮೂರು ಪ್ರಮುಖ ಐಸಿಸಿ ಪ್ರಶಸ್ತಿಗಳನ್ನು ಗೆದ್ದ ದಾಖಲೆ ರೋಹಿತ್ ಹೆಸರಿನಲ್ಲಿ ದಾಖಲಾಗುತ್ತಿತ್ತು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...