ಸೋಲಿನ ಆಘಾತದಿಂದ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಲು ನಿರ್ಧರಿಸಿದ್ದ ರೋಹಿತ್‌ ಶರ್ಮಾ

Date:

2023ರ ಏಕದಿನ ವಿಶ್ವಕಪ್ ಫೈನಲ್‌ನಲ್ಲಿ ಆಸ್ಟ್ರೇಲಿಯಾ ವಿರುದ್ಧದ ಸೋಲಿನ ಬಳಿಕ ತೀವ್ರ ಆಘಾತಕ್ಕೊಳಗಾಗಿದ್ದೆ. ಆ ಕ್ಷಣದಲ್ಲಿ ಕ್ರಿಕೆಟ್‌ನಿಂದಲೇ ನಿವೃತ್ತಿ ಹೊಂದಲು ನಿರ್ಧರಿಸಿದ್ದೆ ಎಂದು ಟೀಂ ಇಂಡಿಯಾದ ಮಾಜಿ ನಾಯಕ ರೋಹಿತ್ ಶರ್ಮಾ ಬಹಿರಂಗಪಡಿಸಿದ್ದಾರೆ.

​ಭಾನುವಾರ ನಡೆದ ‘ಮಾಸ್ಟರ್ಸ್ ಯೂನಿಯನ್’ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ವಿಶ್ವಕಪ್ ಫೈನಲ್ ಸೋಲಿನ ನಂತರದ ತಮ್ಮ ಮಾನಸಿಕ ಸ್ಥಿತಿಯನ್ನು ಎಳೆಎಳೆಯಾಗಿ ಬಿಚ್ಚಿಟ್ಟರು. “ಆ ಕ್ರೀಡೆ ನನ್ನಲ್ಲಿರುವ ಎಲ್ಲವನ್ನೂ ಹೀರಿಕೊಂಡಂತೆ ಭಾಸವಾಯಿತು. ನನ್ನಲ್ಲಿ ಇನ್ನು ಆಡುವ ಶಕ್ತಿ ಉಳಿದಿಲ್ಲ ಎಂದು ಅನಿಸಿತ್ತು,” ಎಂದು ರೋಹಿತ್ ಹೇಳಿದ್ದಾರೆ.

​ರೋಹಿತ್ ಶರ್ಮಾ ನಾಯಕತ್ವದಲ್ಲಿ ಭಾರತ ತಂಡವು ತವರಿನಲ್ಲಿ ನಡೆದ ವಿಶ್ವಕಪ್ ಟೂರ್ನಿಯಲ್ಲಿ ಸತತ ಒಂಬತ್ತು ಪಂದ್ಯಗಳನ್ನು ಗೆದ್ದು ಅಜೇಯವಾಗಿ ಫೈನಲ್ ಪ್ರವೇಶಿಸಿತ್ತು. ಆದರೆ, ಪ್ರಶಸ್ತಿ ಸುತ್ತಿನಲ್ಲಿ ಟ್ರಾವಿಸ್ ಹೆಡ್ ಅವರ ಶತಕದ ನೆರವಿನಿಂದ ಆಸ್ಟ್ರೇಲಿಯಾ ಭಾರತದ ಕನಸನ್ನು ಭಗ್ನಗೊಳಿಸಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“2023ರ ವಿಶ್ವಕಪ್ ಫೈನಲ್ ನಂತರ ನಾನು ಸಂಪೂರ್ಣವಾಗಿ ಕುಗ್ಗಿ ಹೋಗಿದ್ದೆ. ಈ ಆಟ ನನ್ನಿಂದ ಎಲ್ಲವನ್ನೂ ಕಿತ್ತುಕೊಂಡಿದೆ, ಇನ್ನೇನೂ ಉಳಿದಿಲ್ಲ ಎನಿಸಿದ್ದರಿಂದ ಆಟವನ್ನೇ ಬಿಟ್ಟುಬಿಡಲು ಬಯಸಿದ್ದೆ,” ಎಂದು ರೋಹಿತ್ ತಮ್ಮ ನೋವನ್ನು ಹಂಚಿಕೊಂಡರು.

ಇದನ್ನು ಓದಿದ್ದೀರಾ? ‘ಟೀಂ ಇಂಡಿಯಾ’ ಅಧಿಕೃತವಾಗಿ ಭಾರತವನ್ನು ಪ್ರತಿನಿಧಿಸದ ಖಾಸಗಿ ತಂಡ; ಬಿಸಿಸಿಐಗೆ ಬೀಳುವುದೇ ಸರ್ಕಾರಿ ಮೂಗುದಾರ?

​”ಆದರೆ, ಚೇತರಿಸಿಕೊಳ್ಳಲು ಸ್ವಲ್ಪ ಸಮಯ ತೆಗೆದುಕೊಂಡೆ. ಇದು ನಾನು ನಿಜವಾಗಿಯೂ ಪ್ರೀತಿಸುವ ಆಟ, ಅದು ನನ್ನ ಕಣ್ಣ ಮುಂದೆಯೇ ಇದೆ. ಅಷ್ಟು ಸುಲಭವಾಗಿ ಬಿಟ್ಟುಕೊಡಬಾರದು ಎಂದು ನನಗೆ ನಾನೇ ಸಮಾಧಾನ ಮಾಡಿಕೊಂಡೆ. ನಿಧಾನವಾಗಿ ಮತ್ತೆ ಮೈದಾನಕ್ಕಿಳಿಯುವ ಶಕ್ತಿಯನ್ನು ಕಂಡುಕೊಂಡೆ,” ಎಂದು ಅವರು ವಿವರಿಸಿದರು.

​2022ರಲ್ಲಿ ನಾಯಕತ್ವ ವಹಿಸಿಕೊಂಡಾಗಿನಿಂದಲೂ ವಿಶ್ವಕಪ್ ಗೆಲ್ಲುವುದೇ ತಮ್ಮ ಏಕೈಕ ಗುರಿಯಾಗಿತ್ತು. ಅದಕ್ಕಾಗಿ ಎರಡು-ಮೂರು ತಿಂಗಳಲ್ಲ, ಪೂರ್ಣಾವಧಿ ಶ್ರಮ ಹಾಕಿದ್ದೆ. ಹೀಗಾಗಿ ಸೋಲು ವೈಯಕ್ತಿಕವಾಗಿ ತುಂಬಾ ಕಾಡಿತ್ತು ಎಂದು ಅವರು ಹೇಳಿದರು.

ಟಿ20 ಮತ್ತು ಟೆಸ್ಟ್ ಕ್ರಿಕೆಟ್‌ಗೆ ಈಗಾಗಲೇ ನಿವೃತ್ತಿ ಘೋಷಿಸಿರುವ ಹಾಗೂ ಈ ವರ್ಷದ ಆರಂಭದಲ್ಲಿ ಏಕದಿನ ನಾಯಕತ್ವದಿಂದ ಕೆಳಗಿಳಿದಿರುವ ರೋಹಿತ್ ಶರ್ಮಾ, ಏಕದಿನ ಮಾದರಿಯಲ್ಲಿ ಆಟ ಮುಂದುವರಿಸಿದ್ದಾರೆ. 2027ರ ವಿಶ್ವಕಪ್‌ನಲ್ಲಿ ಆಡುವ ಮೂಲಕ ತಮ್ಮ ವೃತ್ತಿಜೀವನಕ್ಕೆ ವಿದಾಯ ಹೇಳುವ ಇಂಗಿತವನ್ನು ಅವರು ವ್ಯಕ್ತಪಡಿಸಿದ್ದಾರೆ.

​”ಫಲಿತಾಂಶ ಬರದಿದ್ದಾಗ ಬೇಸರ ಸಹಜ. ಆದರೆ ಜೀವನ ಅಲ್ಲಿಗೆ ಮುಗಿಯುವುದಿಲ್ಲ ಎಂಬುದು ನನಗೆ ತಿಳಿದಿತ್ತು. ಸೋಲಿನ ಆಘಾತದಿಂದ ಹೊರಬಂದು, 2024ರ ಟಿ20 ವಿಶ್ವಕಪ್ ಕಡೆಗೆ ಗಮನ ಹರಿಸಿದೆ. ಈಗ ಇದನ್ನು ಹೇಳುವುದು ಸುಲಭ, ಆದರೆ ಆ ಕ್ಷಣ ಅತ್ಯಂತ ಕಠಿಣವಾಗಿತ್ತು,” ಎಂದು ರೋಹಿತ್ ಹೇಳಿದರು. ಅಹಮದಾಬಾದ್ ಸೋಲಿನ ನೋವಿನ ನಡುವೆಯೂ ರೋಹಿತ್ ನೇತೃತ್ವದ ತಂಡ ಅಮೆರಿಕದಲ್ಲಿ ನಡೆದ ಟಿ20 ವಿಶ್ವಕಪ್ ಗೆದ್ದು ಚಾಂಪಿಯನ್ ಆಗಿದ್ದನ್ನು ಇಲ್ಲಿ ಸ್ಮರಿಸಬಹುದು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...