ಚಾಂಪಿಯನ್ಸ್ ಟ್ರೋಫಿ ನಂತರ ರೋಹಿತ್‌, ವಿರಾಟ್‌, ರವೀಂದ್ರ ಜಡೇಜಾ ಬಿಸಿಸಿಐನ ಎ+ ಗುತ್ತಿಗೆ ರದ್ದತಿಯ ಭೀತಿಯಲ್ಲಿದ್ದಾರೆಯೆ ?

Date:

ಭಾರತೀಯ ಕ್ರಿಕೆಟ್‌ ನಿಯಂತ್ರಣ ಮಂಡಳಿ(ಬಿಸಿಸಿಐ) ಈ ವರ್ಷ ರೋಹಿತ್‌ ಶರ್ಮಾ, ವಿರಾಟ್‌ ಕೊಹ್ಲಿ ಹಾಗೂ ರವೀಂದ್ರ ಜಡೇಜಾ ಅವರ ಶ್ರೇಣಿಕೃತ ಕೇಂದ್ರೀಯ ಗುತ್ತಿಗೆ ಪಟ್ಟಿಯನ್ನು ಇನ್ನು ಪ್ರಕಟಿಸಿಲ್ಲ. ಮಾಧ್ಯಮಗಳ ವರದಿಯ ಪ್ರಕಾರ ಈ ಮೂವರು ಆಟಗಾರರ ಎ+ ಗುತ್ತಿಗೆಯನ್ನು ಅಂತಿಮಗೊಳಿಸಲಾಗುತ್ತಿದೆ ಎನ್ನಲಾಗುತ್ತಿದೆ.

ಬಿಸಿಸಿಐನಿಂದ ಎ+ ಶ್ರೇಣಿ ಗುತ್ತಿಗೆಯ ಮಾನದಂಡ ಪಡೆಯಬೇಕಾದರೆ ಏಕದಿನ, ಟೆಸ್ಟ್ ಹಾಗೂ ಟಿ20 ಮಾದರಿಯ ಕ್ರಿಕೆಟ್‌ಗಳಲ್ಲಿ ಅತ್ಯುತ್ತಮವಾಗಿ ಆಟವಾಡುತ್ತಿರಬೇಕು. ಆದರೆ ಈ ಮೂವರು ಆಟಗಾರರು ಟಿ20ಯಿಂದ ಕಳೆದ ವರ್ಷ ನಿವೃತ್ತರಾಗಿದ್ದಾರೆ. ಸಾಮಾನ್ಯವಾಗಿ ಬಿಸಿಸಿಐನ ಕೇಂದ್ರೀಯ ಗುತ್ತಿಗೆಯನ್ನು ಐಪಿಎಲ್‌ಗೂ ಮುನ್ನ ಪ್ರಕಟಿಸಲಾಗುತ್ತದೆ. ಆದರೆ ಮೂಲಗಳ ಪ್ರಕಾರ ಬಿಸಿಸಿಐ ಚಾಂಪಿಯನ್ಸ್‌ ಟ್ರೋಫಿ ಅಂತ್ಯಗೊಂಡ ನಂತರ ನಿರ್ಧರಿಸಲಿದೆ.

ಆದಾಗ್ಯೂ, ಚಾಂಪಿಯನ್ಸ್‌ ಟ್ರೋಫಿಯಲ್ಲಿ ಈ ಮೂವರು ಉತ್ತಮ ಪ್ರದರ್ಶನದಿಂದ ಈ ಆಟಗಾರರ ಕೇಂದ್ರೀಯ ಗುತ್ತಿಗೆಯನ್ನು ಮುಂದುವರಿಸಬಹುದು ಎಂದು ಹೇಳಲಾಗುತ್ತಿದೆ. ಸದ್ಯದ ಪ್ರಕಾರ ಮೂರು ಶ್ರೇಣಿಯಲ್ಲಿ ಉತ್ತಮ ಪ್ರದರ್ಶನ ನೀಡುತ್ತಿರುವ ವೇಗದ ಬೌಲರ್‌ ಜಸ್‌ಪ್ರೀತ್‌ ಬೂಮ್ರಾಗೆ ಯಾವುದೇ ಸಮಸ್ಯೆಯಿಲ್ಲದೆ ಎ+ ಶ್ರೇಣಿ ಮುಂದುವರಿಸಲಾಗುವ ಸಾಧ್ಯತೆ ಹೆಚ್ಚಾಗಿದೆ.
ಇನ್ನೊಂದು ವರದಿಗಳ ಪ್ರಕಾರ, ಶಿಸ್ತಿನ ಕಾರಣದಿಂದ ಕಳೆದ ವರ್ಷ ಗುತ್ತಿಗೆಯಿಂದ ರದ್ದುಗೊಂಡಿದ್ದ ಮಧ್ಯಮ ಕ್ರಮಾಂಕದ ಆಟಗಾರ ಶ್ರೇಯಸ್‌ ಅಯ್ಯರ್‌ ಅವರನ್ನು ಈ ಬಾರಿ ಗುತ್ತಿಗೆಗೆ ಸೇರಿಸಿಕೊಳ್ಳುವ ಸಾಧ್ಯತೆಯಿದೆ. ಚಾಂಪಿಯನ್ಸ್‌ ಟ್ರೊಫಿ ಮಾತ್ರವಲ್ಲದೆ ದೇಶೀಯ ಕ್ರಿಕೆಟ್‌ನಲ್ಲೂ ಉತ್ತಮ ಪ್ರದರ್ಶನ ನೀಡಿರುವುದರಿಂದ ಪರಿಗಣಿಸುವ ಸಾಧ್ಯತೆ ಹೆಚ್ಚಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಚಾಂಪಿಯನ್ಸ್ ಟ್ರೋಫಿ ಸೆಮಿಫೈನಲ್: ಆಸ್ಟ್ರೇಲಿಯಾ ಮಣಿಸಿ ಫೈನಲ್ ಪ್ರವೇಶಿಸಿದ ಟೀಮ್ ಇಂಡಿಯಾ

“ಚಾಂಪಿಯನ್ಸ್‌ ಟ್ರೋಫಿಯ ನಂತರ ರೋಹಿತ್‌ ನಿರ್ಧಾರ ಪ್ರಕಟಿಸುವ ಸಾಧ್ಯತೆಯಿರುವುದರಿಂದ ಬಿಸಿಸಿಐ ಅಲ್ಲಿಯವರೆಗೂ ಕಾಯುತ್ತಿದೆ. ಒಂದು ವೇಳೆ ನಿವೃತ್ತಿ ಪ್ರಕಟಿಸಿದರೆ, ನಂತರ ಮಂಡಳಿ ಏನು ಮಾಡಬೇಕೆಂದು ಯೋಚಿಸಲಿದೆ. ಟಿ20 ವಿಶ್ವಕಪ್‌ ಗೆಲ್ಲಿಸುವುದರ ಜೊತೆ ಚಾಂಪಿಯನ್ಸ್‌ ಟ್ರೋಫಿಯಲ್ಲೂ ಉತ್ತಮ ಪ್ರದರ್ಶನ ನೀಡುತ್ತಿರುವುದರಿಂದ ಆತನ ಸಾಮರ್ಥ್ಯವನ್ನು ಕಡೆಗಣಿಸುವಂತಿಲ್ಲ” ಎಂದು ಮೂಲಗಳು ತಿಳಿಸಿವೆ.

ದಕ್ಷಿಣ ಆಫ್ರಿಕಾದ ಸ್ಟಾರ್‌ ಕ್ರಿಕೆಟಿಗ ಹಾಗೂ ಐಪಿಎಲ್‌ನಲ್ಲಿ ಆರ್‌ಸಿಬಿಯನ್ನು ಪ್ರತಿನಿಧಿಸಿರುವ ಎಬಿಡಿ ವಿಲಿಯರ್ಸ್ ಅವರು ವಿರಾಟ್‌ ಕೊಹ್ಲಿಯ ಸ್ಟ್ರೈಕ್‌ ರೇಟ್‌ ಕಡಿಮೆಯಾಗಿದೆ ಎಂಬುದು ಹಾಸ್ಯಾಸ್ಪದ ಎನ್ನುತ್ತಾರೆ.

ಮಾಧ್ಯಮವೊಂದರಲ್ಲಿ ಮಾತನಾಡಿರುವ ಅವರು, “ಇತ್ತೀಚಿನ ದಿನಗಳಲ್ಲಿ ವಿರಾಟ್‌ ಸ್ಟ್ರೈಕ್‌ ರೇಟ್‌ ಕಡಿಮೆಯಾಗಿದೆ ಎಂದು ಟೀಕೆಮಾಡುವುದು ಹಾಸ್ಯಾಸ್ಪದ. ತಂಡಕ್ಕೆ ಏನು ಬೇಕೊ ಅದನ್ನು ಕೊಹ್ಲಿ ನೀಡುತ್ತಾ ಬಂದಿದ್ದಾರೆ. ಎಲ್ಲವೂ ಪರಿಸ್ಥಿತಿಯ ಆಧಾರದ ಮೇಲೆ ನಿರ್ದಾರವಾಗುತ್ತದೆ. ಮತ್ತೊಂದು ತುದಿಯಲ್ಲಿ ಜೊತೆಗಾರ ಆಟಗಾರನಿದ್ದರೆ ಆತನನ್ನು ನಂಬುವ ಜೊತೆಗೆ ಪ್ರಯೋಗಾತ್ಮಕ ಆಟದ ಜೊತೆ ಸ್ವತಂತ್ರವಾಗಿ ಆಟವಾಡುತ್ತಾರೆ. ಜೊತೆಗಾರನ ಆಟವು ನಿಧಾನವಾದಾಗ ಇನಿಂಗ್ಸ್‌ಗೆ ಬೇಕಾದ ಆಟವನ್ನು ಸಹಜವಾಗಿಯೆ ವಿರಾಟ್‌ ಮುಂದುವರಿಸುತ್ತಾರೆ” ಎಂದು ಪ್ರಶಂಸಿಸಿದ್ದಾರೆ.

blank profile picture 973460 640
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...