ರೋಹಿತ್ ಶರ್ಮಾ ಏಕದಿನ, ಟೆಸ್ಟ್ ನಾಯಕತ್ವ ಕೊನೆ ಯಾವಾಗ?: ಜಯ್ ಶಾ ಮಾಹಿತಿ

Date:

ಭಾರತ ಕ್ರಿಕೆಟ್‌ ನಿಯಂತ್ರಣ ಮಂಡಳಿಯ(ಬಿಸಿಸಿಐ) ಕಾರ್ಯದರ್ಶಿ ಜಯ್‌ ಶಾ ಇಂದು ರೋಹಿತ್‌ ಶರ್ಮಾ ಅವರ ಏಕದಿನ, ಟೆಸ್ಟ್‌ ನಾಯಕತ್ವದ ಭವಿಷ್ಯದ ಬಗ್ಗೆ ಮಾಹಿತಿ ನೀಡಿದ್ದಾರೆ.

ಈ ಬಗ್ಗೆ ಬಿಸಿಸಿಐ ವೆಬ್‌ಸೈಟ್‌ನಲ್ಲಿ ವಿಡಿಯೋ ಹಂಚಿಕೊಂಡಿರುವ ಜಯ್‌ ಶಾ, ರೋಹಿತ್ ಶರ್ಮಾ ನಾಯಕರಾಗಿ 2025ರ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಹಾಗೂ ಚಾಂಪಿಯನ್ಸ್‌ ಟ್ರೋಫಿಯ ತನಕ ಮುಂದುವರಿಯಲಿದ್ದಾರೆ. ಭಾರತವು ಮುಂದಿನ ವರ್ಷ ಎರಡು ಐಸಿಸಿ ಟೂರ್ನಮೆಂಟ್‌ಗಳನ್ನು ಜಯಗಳಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

2024ರ ಟಿ20 ವಿಶ್ವಕಪ್‌ ಟ್ರೋಫಿಯನ್ನು ಎತ್ತಿ ಹಿಡಿದ ಟೀಂ ಇಂಡಿಯಾವನ್ನು ಶ್ಲಾಘಿಸಿದ ಜಯ್‌ ಶಾ ಇನ್ನು ಒಂದು ವರ್ಷ ನಾಯಕರಾಗಿ ಮುಂದುವರಿಯಲಿದ್ದಾರೆ ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕಳೆದ ವರ್ಷ ನವೆಂಬರ್‌ 23ರಂದು 10 ಪಂದ್ಯಗಳನ್ನು ಗೆದ್ದ ನಂತರ ನಾವು ಹೃದಯಗಳನ್ನು ಗೆದ್ದೆವು ಆದರೆ ಏಕದಿನ ವಿಶ್ವಕಪ್‌ ಜಯಿಸಲು ಸಾಧ್ಯವಾಗಲಿಲ್ಲ. ಜೂನ್‌ 29ರಂದು ನಾವು ಹೃದಯಗಳನ್ನು, ಟ್ರೋಫಿಯನ್ನು ಗೆದ್ದಿದ್ದೇವೆ. ಬಾರ್ಬೊಡೊಸ್‌ನಲ್ಲಿ ಭಾರತದ ಧ್ವಜವನ್ನು ಎತ್ತಿ ಹಿಡಿದ್ದೇವೆ. ನಮ್ಮ ನಾಯಕ ಅಲ್ಲಿ ಭಾರತದ ಧ್ವಜವನ್ನು ನೆಟ್ಟಿದ್ದಾರೆ” ಎಂದು ಜಯ್‌ ಶಾ ಹೇಳಿದ್ದಾರೆ.

ಈ ಸುದ್ದಿ ಓದಿದ್ದೀರಾ? ಐಸಿಸಿ ಟಿ20 ರ‍್ಯಾಂಕಿಂಗ್: ಆಲ್‌ರೌಂಡರ್‌ಗಳಲ್ಲಿ ಮೊದಲ ಸ್ಥಾನಕ್ಕೇರಿದ ಹಾರ್ದಿಕ್ ಪಾಂಡ್ಯ

“ ಗೆಲುವಿನ ನಂತರ ಮುಂದಿನ ಐಸಿಸಿ ಟೂರ್ನಿಗಳಾದ ವಿಶ್ವ ಟೆಸ್ಟ್ ಚಾಂಪಿಯನ್‌ಶಿಷ್ ಹಾಗೂ ಚಾಂಪಿಯನ್‌ಶಿಪ್ ಟ್ರೋಫಿಗಳನ್ನು ಜಯಿಸುವ ವಿಶ್ವಾಸದಲ್ಲಿ ನಮ್ಮ ತಂಡವಿದೆ. ರೋಹಿತ್‌ ಶರ್ಮಾ ನಾಯಕತ್ವದಲ್ಲಿ ನಾವು ಚಾಂಪಿಯನ್‌ಗಳಾಗುತ್ತೇವೆ” ಎಂದು ತಿಳಿಸಿದ್ದಾರೆ.

ಈಗಾಗಲೇ ಟಿ20 ವಿಶ್ವಕಪ್ ಮಾದರಿಗೆ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಹಾಗೂ ರವೀಂದ್ರ ಜಡೇಜಾ ನಿವೃತ್ತಿ ಘೋಷಿಸಿದ್ದಾರೆ. ಈ ಮೂವರು ಹಿರಿಯ ಆಟಗಾರರು ಚಾಂಪಿಯನ್ಸ್‌ ಟ್ರೋಫಿಯ ತನಕ ಇರಲಿದ್ದಾರೆ ಎಂದು ಜಯ್‌ ಶಾ ಮಾಹಿತಿ ನೀಡಿದ್ದಾರೆ.

ಭಾರತದ ವಿಶ್ವಕಪ್‌ ವಿಜೇತ ಆಟಗಾರರು ಮುಂಬರುವ ಶ್ರೀಲಂಕಾ ವಿರುದ್ಧದ ಪ್ರವಾಸಕ್ಕೆ ಪುನಃ ಮರಳಲಿದ್ದು, ಜುಲೈ ಅಂತ್ಯದ ವೇಳೆಗೆ ವೇಳಾಪಟ್ಟಿಯನ್ನು ಅಂತಿಮಗೊಳಿಸಲಾಗುತ್ತದೆ. ಹಿರಿಯ ಆಟಗಾರರೆಲ್ಲಲೂ ಮುಂದಿನ 12 ತಿಂಗಳುಗಳ ಕಾಲ ಟೆಸ್ಟ್‌ ಹಾಗೂ ಏಕದಿನ ಪಂದ್ಯಗಳ ಮೇಲೆ ಹೆಚ್ಚು ಗಮನ ನೀಡಲಿದ್ದಾರೆ.

ವಿಶ್ವ ಟೆಸ್ಟ್‌ ಚಾಂಪಿಯನ್‌ಶಿಪ್‌ನ ಪಟ್ಟಿಯಲ್ಲಿ ಭಾರತವು ಪ್ರಸ್ತುತ 9ರಲ್ಲಿ 6 ಗೆದ್ದು ಮೊದಲ ಸ್ಥಾನದಲ್ಲಿದೆ. ಈ ವರ್ಷ ಸ್ವದೇಶದಲ್ಲಿ ಬಾಂಗ್ಲಾದೇಶ ಹಾಗೂ ನ್ಯೂಜಿಲೆಂಡ್‌ ವಿರುದ್ದ ಟೆಸ್ಟ್, ಆಸ್ಟ್ರೇಲಿಯಾದಲ್ಲಿ ಆಸೀಸ್ ವಿರುದ್ಧ 5 ಟೆಸ್ಟ್ ಆಡಲಿದೆ. 2025ರ ಫೆಬ್ರವರಿ-ಮಾರ್ಚ್‌ನಲ್ಲಿ ಏಕದಿನ ಚಾಂಪಿಯನ್ಸ್ ಟ್ರೋಫಿ ನಡೆಯಲಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...