ಕೆ ಎಲ್ ರಾಹುಲ್‌ರನ್ನು ‘ಡಿನ್ನರ್’ಗೆ ಆಹ್ವಾನಿಸಿ ಡ್ಯಾಮೇಜ್ ಕಂಟ್ರೋಲ್‌ಗೆ ಯತ್ನಿಸಿದ ಲಕ್ನೋ ಮಾಲೀಕ!

Date:

ಕಳೆದ ಮೇ. 8ರಂದು ಹೈದರಾಬಾದಿನ ರಾಜೀವ್ ಗಾಂಧಿ ಕ್ರೀಡಾಂಗಣದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ತಂಡದ ವಿರುದ್ಧ ನಡೆದಿದ್ದ ಪಂದ್ಯದಲ್ಲಿ ಕನ್ನಡಿಗ ಕೆ ಎಲ್ ರಾಹುಲ್‌ ನೇತೃತ್ವದ ಲಕ್ನೋ ತಂಡ 10 ವಿಕೆಟ್‌ಗಳ ಅಂತರದಲ್ಲಿ ಹೀನಾಯ ಸೋಲು ಅನುಭವಿಸಿತ್ತು.

ಎಲ್‌ಎಸ್‌ಜಿ ತಂಡ ನೀಡಿದ್ದ 165 ರನ್‌ಗಳ ಸವಾಲನ್ನು ಬೆನ್ನಟ್ಟಿದ್ದ ಸನ್‌ ರೈಸರ್ಸ್‌ ಹೈದರಾಬಾದ್‌ ತಂಡವು ಕೇವಲ 9.4 ಓವರ್‌ಗಳಲ್ಲಿ ಗುರಿಯನ್ನು ಮುಟ್ಟಿತ್ತು. ಆರಂಭಿಕ ಆಟಗಾರರಾದ ಟ್ರಾವಿಸ್ ಹೆಡ್ ಹಾಗೂ ಅಭಿಷೇಕ್‌ ಶರ್ಮಾ ಅವರ ಸ್ಫೋಟಕ ಬ್ಯಾಟಿಂಗ್‌ನಿಂದಾಗಿ ಈ ಬೆಳವಣಿಗೆ ನಡೆದಿತ್ತು.

ಈ ಪಂದ್ಯ ಮುಗಿದ ಬಳಿಕ ಲಕ್ನೋ ಹೀನಾಯವಾಗಿ ಸೋತದ್ದರಿಂದ ಆಕ್ರೋಶಗೊಂಡಿದ್ದ ತಂಡದ ಮಾಲೀಕರಾದ ಸಂಜೀವ್‌ ಗೋಯಂಕಾ, ನಾಯಕ ಕೆ ಎಲ್‌ ರಾಹುಲ್‌ ವಿರುದ್ಧ ವಿಐಪಿ ಗ್ಯಾಲರಿಯಲ್ಲಿ ಆಕ್ರೋಶಭರಿತರಾಗಿ ಮಾತನಾಡುತ್ತಿದ್ದ ದೃಶ್ಯ ಎಲ್ಲೆಡೆ ವೈರಲ್‌ ಆಗಿತ್ತು. ಎಲ್ಲವನ್ನೂ ಸಮಾಧಾನ ಚಿತ್ತದಿಂದ ಕೇಳಿದ್ದ ಕೆ ಎಲ್ ರಾಹುಲ್‌ ಅವರ ತಾಳ್ಮೆಗೆ ಹಲವು ಮಂದಿ ಶ್ಲಾಘಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಬೆಳವಣಿಗೆಯ ಬಳಿಕ ಸೋಷಿಯಲ್‌ ಮೀಡಿಯಾಗಳಲ್ಲಿ ಲಕ್ನೋ ತಂಡದ ಮಾಲೀಕನ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತಲ್ಲದೇ, ಕೆ ಎಲ್ ರಾಹುಲ್‌ ತಂಡದ ನಾಯಕತ್ವ ತೊರೆಯಲಿದ್ದಾರೆ ಎಂಬ ಸುದ್ದಿಗಳು ಕೂಡ ಹರಿದಾಡಿತ್ತು. ಅಲ್ಲದೇ, ಈ ನಡುವೆ ಹಲವು ಮಂದಿ, ಲಕ್ನೋ ತಂಡ ತೊರೆದು ಆರ್‌ಸಿಬಿ ಸೇರಿ ಎಂಬಂತಹ ಸಲಹೆಗಳನ್ನು ನೀಡಿದ್ದರು.

ಈ ಎಲ್ಲ ಬೆಳವಣಿಗೆಯ ನಡುವೆಯೇ ಡ್ಯಾಮೇಜ್ ಕಂಟ್ರೋಲ‌್‌ಗೆ ಯತ್ನಿಸಿರುವ ಲಕ್ನೋ ಮಾಲೀಕ ಸಂಜಯ್ ಗೋಯೆಂಕಾ, ಕೆ ಎಲ್ ರಾಹುಲ್‌ ಅವರನ್ನು ಡಿನ್ನ‌ರ್‌ಗೆ ಆಹ್ವಾನಿಸಿ, ಪರಸ್ಪರ ತಬ್ಬಿಕೊಂಡಿರುವ ಫೋಟೋ ಸೋಷಿಯಲ್‌ ಮೀಡಿಯಾಗಳಲ್ಲಿ ಹರಿದಾಡಿದೆ.

ಕಳೆದ ರಾತ್ರಿ ಸಂಜೀವ್ ಗೋಯೆಂಕಾ ಅವರು ನಾಯಕ ಕೆ.ಎಲ್​ ರಾಹುಲ್​ ಅನ್ನು ತಮ್ಮ ಮನೆಯ ಡಿನ್ನರ್‌ಗೆ ಆಹ್ವಾನಿಸಿದ್ದಾರೆ. ಈ ವೇಳೆ ಒಬ್ಬರನ್ನೊಬ್ಬರು ತಬ್ಬಿಕೊಂಡು ಫೋಟೋಗೆ ಪೋಸ್ ಕೊಟ್ಟಿದ್ದಾರೆ. ಆ ಮೂಲಕ ವಿವಾದಕ್ಕೆ ಸಂಬಂಧಿಸಿದಂತೆ ಪರಸ್ಪರ ತೆರೆ ಎಳೆದಿದ್ದಾರೆ.

ಡೆಲ್ಲಿ ಕ್ಯಾಪಿಟಲ್ಸ್ ತಂಡದ ವಿರುದ್ಧ ಇಂದು (ಮೇ 14) ಸಂಜೆ 7.30ಕ್ಕೆ ನಡೆಯಲಿರುವ ಪಂದ್ಯಕ್ಕೂ ಮುನ್ನ ಈ ಫೋಟೋ ಸೋಷಿಯಲ್‌ ಮೀಡಿಯಾದಲ್ಲಿ ಹರಿದಾಡಿದ್ದು, ನಾಯಕತ್ವ ತೊರೆಯಲಿದ್ದಾರೆ ಎಂಬ ಸುದ್ದಿಗೂ ಪೂರ್ಣ ವಿರಾಮ ಹಾಕಿದ್ದಾರೆ.

“ಹೈದರಾಬಾದ್ ವಿರುದ್ಧ ಹೀನಾಯ ಸೋಲಿಗೆ ಆಕ್ರೋಶಗೊಂಡಿದ್ದ ಸಂಜೀವ್ ಗೋಯೆಂಕಾ ತಮ್ಮ ವಿರುದ್ಧದ ಟೀಕೆಗೆ ಡ್ಯಾಮೇಜ್ ಕಂಟ್ರೋಲ್‌ ಮಾಡಲು ಮುಂದಾಗಿದ್ದಾರೆ” ಎಂದು ನೆಟ್ಟಿಗರು ಕಾಲೆಳೆದಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...