ಪಂತ್‌ ಸತತ ವೈಫಲ್ಯಕ್ಕೆ ಮತ್ತೊಮ್ಮೆ ಆಕ್ರೋಶ ವ್ಯಕ್ತಪಡಿಸಿದ ಮಾಲೀಕ ಸಂಜೀವ್ ಗೋಯೆಂಕಾ

Date:

ದಾಖಲೆಯ ಮೊತ್ತ ಪಡೆದು ಲಖನೌ ಸೂಪರ್‌ಜೈಂಟ್ಸ್ ತಂಡ ಸೇರಿದ್ದ ನಾಯಕ ರಿಷಭ್ ಪಂತ್ ನಿರ್ಣಾಯಕ ಪಂದ್ಯದಲ್ಲೂ ನಿರಾಶೆ ಮೂಡಿಸಿದರು. ಹೈದರಾಬಾದ್ ವಿರುದ್ಧದ ಪಂದ್ಯದಲ್ಲಿ, ರಿಷಭ್ ಪಂತ್ ಕೇವಲ 7 ರನ್ ಗಳಿಸಿ ಔಟಾದರು.

ಈ ಪಂದ್ಯದಲ್ಲಿ ಮೂರನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಲು ಬಂದಿದ್ದ ಪಂತ್, ಎಹ್ಸಾನ್ ಮಾಲಿಂಗ ಎಸೆತದಲ್ಲಿ ಕ್ಯಾಚ್ ನೀಡಿ ಔಟಾದರು. ಪಂತ್ ವಿಕೆಟ್ ಪತನದ ನಂತರ ಲಖನೌ ಮೈದಾನದಲ್ಲಿ ಕಂಡುಬಂದ ದೃಶ್ಯ ಸ್ವಲ್ಪ ಆಶ್ಚರ್ಯಕರವಾಗಿತ್ತು. ಲಖನೌ ಸೂಪರ್‌ಜೈಂಟ್ಸ್ ಮಾಲೀಕ ಸಂಜೀವ್ ಗೋಯೆಂಕಾ, ಪಂತ್ ಔಟಾದ ನಂತರ ಲಖನೌ ಕ್ರೀಡಾಂಗಣದ ಬಾಲ್ಕನಿಯಿಂದ ಬೇಸರದಿಂದ ತೆರಳಿದ ವಿಡಿಯೋ ಇದೀಗ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ.

ಲಖನೌ ನಾಯಕ ಪಂತ್ ಔಟಾದ ತಕ್ಷಣ, ಬಾಲ್ಕನಿಯಲ್ಲಿ ಪಂದ್ಯ ವೀಕ್ಷಿಸುತ್ತಿದ್ದ ಸಂಜೀವ್ ಗೋಯೆಂಕಾ ಅಲ್ಲಿಂದ ಕೋಪದಿಂದ ಹೊರಟುಹೋಗಿದ್ದಾರೆಂದು ಹೇಳಲಾಗುತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? 90.23 ಮೀಟರ್ ದೂರ ಜಾವೆಲಿನ್ ಎಸೆದು ಹೊಸ ದಾಖಲೆ ಬರೆದ ನೀರಜ್ ಚೋಪ್ರಾ

ರಿಷಭ್ ಪಂತ್ ವಿರುದ್ಧ ಸಂಜೀವ್ ಕೋಪ ಮಾಡಿಕೊಳ್ಳುವುದಕ್ಕೂ ಕಾರಣವಿದೆ. ಕೇವಲ ಒಂದು ಪಂದ್ಯದಲ್ಲಿ ಅರ್ಧಶತಕ ಬಾರಿಸಿದ್ದನ್ನು ಹೊರತುಪಡಿಸಿ, ಪಂತ್ 9 ಇನಿಂಗ್ಸ್‌ಗಳಲ್ಲಿ ವಿಫಲರಾಗಿದ್ದಾರೆ. ಈ ಆವೃತ್ತಿಯಲ್ಲಿ ಪಂತ್ 11 ಇನಿಂಗ್ಸ್‌ಗಳಲ್ಲಿ 135 ರನ್ ಗಳಿಸಿದ್ದಾರೆ. ಅವರ ಬ್ಯಾಟಿಂಗ್ ಸರಾಸರಿ ಕೇವಲ 12.27 ಮತ್ತು ಸ್ಟ್ರೈಕ್ ರೇಟ್ ಕೂಡ ಕೇವಲ 100. ಪಂತ್ ಅವರ ಬ್ಯಾಟಿಂಗ್‌ಅನ್ನು ಬದಿಗಿಟ್ಟರೆ, ಅವರ ನಾಯಕತ್ವವೂ ತುಂಬಾ ಕಳಪೆಯಾಗಿದೆ. ಎಲ್‌ಎಸ್‌ಜಿ ತಂಡ ಪ್ಲೇಆಫ್‌ನಿಂದ ಹೊರಬಿದ್ದಿದೆ.

‘‘ಗಾಯಗಳಿಂದಾಗಿ ನಾವು ಕೆಲವು ನ್ಯೂನತೆಗಳನ್ನು ತುಂಬಬೇಕು ಎಂದು ನಮಗೆ ತಿಳಿದಿತ್ತು. ಒಂದು ತಂಡವಾಗಿ ನಾವು ಅದರ ಬಗ್ಗೆ ಮಾತನಾಡದಿರಲು ನಿರ್ಧರಿಸಿದ್ದೆವು. ಆದರೆ ಅದರ ಉದ್ದೇಶ ನ್ಯೂನತೆಗಳನ್ನು ನಿವಾರಿಸುವುದಾಗಿತ್ತು. ನಾವು ಹರಾಜಿನಲ್ಲಿ ಯೋಜಿಸಿದ ರೀತಿಯಲ್ಲಿಯೇ ಬೌಲಿಂಗ್ ದಾಳಿಯನ್ನು ಹೊಂದಿದ್ದರೆ, ಕಥೆ ಬೇರೆಯೇ ಆಗಿರುತ್ತಿತ್ತು. ಕೆಲವೊಮ್ಮೆ ವಿಷಯಗಳು ನಾವು ಅಂದುಕೊಂಡ ರೀತಿ ನಡೆಯುತ್ತೆ, ಕೆಲವೊಮ್ಮೆ ಹಾಗಾಗುವುದಿಲ್ಲ’’ ಎಂದಿದ್ದಾರೆ.

ಮೊದಲು ಬ್ಯಾಟಿಂಗ್ ಮಾಡಲು ಆಹ್ವಾನಿಸಲ್ಪಟ್ಟ ನಂತರ ಲಖನೌ ತಂಡ 7 ವಿಕೆಟ್‌ಗೆ 205 ರನ್‌ಗಳ ಮೊತ್ತವನ್ನು ಗಳಿಸಿತು. ಆದರೆ ಹೈದರಾಬಾದ್ 18.2 ಓವರ್‌ಗಳಲ್ಲಿ ಕೇವಲ ನಾಲ್ಕು ವಿಕೆಟ್‌ ಕಳೆದುಕೊಂಡು ಗುರಿಯನ್ನು ತಲುಪಿತು. ಈ ಮೈದಾನದಲ್ಲಿ ಇದೇ ಮೊದಲ ಬಾರಿಗೆ ಗುರಿಯನ್ನು ಬೆನ್ನಟ್ಟಿದ ತಂಡ 200 ಕ್ಕೂ ಹೆಚ್ಚು ರನ್ ಗಳಿಸುವ ಮೂಲಕ ಗೆಲುವು ಸಾಧಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...