ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್: ಇತಿಹಾಸ ನಿರ್ಮಿಸಿ ಪದಕ ಗೆದ್ದ ಸಾತ್ವಿಕ್‌–ಚಿರಾಗ್

Date:

ಪ್ಯಾರಿಸ್‌ನಲ್ಲಿ ನಡೆದ 2025ರ ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್‌ನಲ್ಲಿ ಭಾರತದ ಸಾತ್ವಿಕ್ ‌ಸಾಯಿರಾಜ್ ರಾಂಕಿರೆಡ್ಡಿ ಮತ್ತು ಚಿರಾಗ್ ಶೆಟ್ಟಿ ಕಂಚಿನ ಪದಕ ಗೆದ್ದುಕೊಂಡಿದ್ದಾರೆ. ಈ ಪದಕದೊಂದಿಗೆ ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್​ಶಿಪ್​ ಡಬಲ್ಸ್​ನಲ್ಲಿ ಭಾರತದ ಪರ ಎರಡು ಪದಕಗಳನ್ನು ಗೆದ್ದ ಮೊದಲ ಜೋಡಿ ಎಂಬ ಹೆಗ್ಗಳಿಕೆಗೆ ಸಾತ್ವಿಕ್-ಚಿರಾಗ್ ಪಾತ್ರರಾಗಿದ್ದಾರೆ. ಇದಕ್ಕೂ ಮುನ್ನ 2022 ರಲ್ಲಿ ಸಾತ್ವಿಕ್ ‌ಸಾಯಿರಾಜ್ ರಾಂಕಿರೆಡ್ಡಿ ಮತ್ತು ಚಿರಾಗ್ ಶೆಟ್ಟಿ ಕಂಚಿನ ಪದಕ ಗೆದ್ದಿದ್ದರು.

ಬಿಡಬ್ಲ್ಯುಎಫ್‌ ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್‌ಷಿಪ್‌ನಲ್ಲಿ ಭಾರತದ ಅಗ್ರ ಡಬಲ್ಸ್‌ ಆಟಗಾರರಾದ ಸಾತ್ವಿಕ್‌ಸಾಯಿರಾಜ್ ರಣಕಿರೆಡ್ಡಿ ಮತ್ತು ಚಿರಾಗ್‌ ಶೆಟ್ಟಿ ಕಂಚಿನ ಪದಕ ಗೆದ್ದಿದ್ದಾರೆ.

ಪುರುಷರ ಡಬಲ್ಸ್ ಸೆಮಿಫೈನಲ್ ಪಂದ್ಯದಲ್ಲಿ ಸಾತ್ವಿಕ್-ಚಿರಾಗ್ ಜೋಡಿಯು 11ನೇ ಶ್ರೇಯಾಂಕದ ಚೀನಾದ ಚೆನ್ ಬೊ ಯಂಗ್ ಮತ್ತು ಲಿಯು ಯಿ ವಿರುದ್ಧ 19-21, 21-18, 12-21ರ ಅಂತರದಲ್ಲಿ ಮುಗ್ಗರಿಸಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಮೊದಲು ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್‌ಷಿಪ್‌ನಲ್ಲಿ ಸೆಮಿಫೈನಲ್‌ಗೆ ದಾಪುಗಾಲಿಡುವ ಮೂಲಕ ಪದಕ ಖಚಿತಪಡಿಸಿಕೊಂಡಿದ್ದರು.

ಆ ಮೂಲಕ ಪ್ರತಿಷ್ಠಿತ ಟೂರ್ನಿಯಲ್ಲಿ ಸಾತ್ವಿಕ್‌–ಚಿರಾಗ್ ಜೋಡಿ ಎರಡನೇ ಸಲ ಕಂಚಿನ ಪದಕ ಗೆದ್ದ ಸಾಧನೆ ಮಾಡಿದೆ. ಈ ಹಿಂದೆ 2022ರಲ್ಲೂ ಕಂಚಿನ ಪದಕ ಗೆದ್ದಿದ್ದರು.

ಇದನ್ನು ಓದಿದ್ದೀರಾ? ವಿದೇಶಿ ತಂಡದ ಮುಖ್ಯ ಕೋಚ್‌ ಆಗಿ ನೇಮಕಗೊಂಡ ಟೀಂ ಇಂಡಿಯಾ ಮಾಜಿ ನಾಯಕ ಸೌರವ್ ಗಂಗೂಲಿ

67 ನಿಮಿಷಗಳ ಹೋರಾಟದ ಅಂತಿಮದಲ್ಲಿ ಮುಗ್ಗರಿಸಿದ ಸಾತ್ವಿಕ್‌–ಚಿರಾಗ್, ಬಿಡಬ್ಲ್ಯುಎಫ್‌ ಬ್ಯಾಡ್ಮಿಂಟನ್ ಚಾಂಪಿಯನ್‌ಷಿಪ್‌ನಲ್ಲಿ ಫೈನಲ್ ತಲುಪಿದ ಭಾರತದ ಮೊದಲ ಪುರುಷರ ಜೋಡಿ ಎಂದೆನಿಸಿಕೊಳ್ಳುವ ಅವಕಾಶದಿಂದ ಸ್ವಲ್ಪದರಲ್ಲೇ ವಂಚಿತವಾಯಿತು.

ಇದಕ್ಕೂ ಮುನ್ನ 2023 ರಲ್ಲಿ ದುಬೈನಲ್ಲಿ ನಡೆದ ಏಷ್ಯನ್ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್‌ನಲ್ಲಿ ಸಾತ್ವಿಕ್ ಸಾಯಿರಾಜ್ ಮತ್ತು ಚಿರಾಗ್ ಶೆಟ್ಟಿ ಜೋಡಿ ಇತಿಹಾಸ ಸೃಷ್ಟಿಸಿದ್ದರು. ಫೈನಲ್ ಪಂದ್ಯದಲ್ಲಿ ಮಲೇಷ್ಯಾದ ಓಂಗ್ ಯೂ ಸಿನ್ ಮತ್ತು ಟಿಯೊ ಇಯೊ ಯೀ ಜೋಡಿಯನ್ನು ಸೋಲಿಸಿ ಏಷ್ಯನ್ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್‌ನಲ್ಲಿ ಭಾರತಕ್ಕೆ ಮೊಟ್ಟ ಮೊದಲ ಚಿನ್ನದ ಪದಕ ತಂದುಕೊಟ್ಟ ಐತಿಹಾಸಿಕ ಸಾಧನೆ ಮಾಡಿದ್ದರು.

ಅಲ್ಲದೆ ಏಷ್ಯನ್ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್‌ನ ಡಬಲ್ಸ್ ವಿಭಾಗದಲ್ಲಿ ಭಾರತಕ್ಕೆ ಮೊದಲ ಚಿನ್ನದ ಪದಕ ಗೆದ್ದುಕೊಟ್ಟ ಜೋಡಿ ಎನಿಸಿಕೊಂಡಿದ್ದರು. ಇದಕ್ಕೂ ಮುನ್ನ ದೀಪ್ ಘೋಸ್ ಮತ್ತು ರಾಮನ್ ಘೋಸ್ ಜೋಡಿ 1971ರಲ್ಲಿ ನಡೆದ ಈ ಟೂರ್ನಿಯಲ್ಲಿ ಸೆಮಿಫೈನಲ್‌ವರೆಗೆ ತಲುಪಿತ್ತು. ಆದರೆ, ಸೆಮಿಫೈನಲ್‌ನಲ್ಲಿ ಸೋಲು ಅನುಭವಿಸಿ ಕಂಚಿನ ಪದಕಕ್ಕೆ ತೃಪ್ತಿಪಟ್ಟುಕೊಂಡಿದ್ದರು.

ಆದರೆ 52 ವರ್ಷಗಳ ಏಷ್ಯಾದ ಅಂಗಳದಲ್ಲಿ ಹೊಸ ಇತಿಹಾಸ ಬರೆಯುವಲ್ಲಿ ಸಾತ್ವಿಕ್ ಸಾಯಿರಾಜ್ ಮತ್ತು ಚಿರಾಗ್ ಶೆಟ್ಟಿ ಯಶಸ್ವಿಯಾಗಿದ್ದರು. ಇದೀಗ ವಿಶ್ವ ಬ್ಯಾಡ್ಮಿಂಟನ್​ನಲ್ಲೂ 2ನೇ ಬಾರಿ ಪದಕ ಗೆಲ್ಲುವ ಮೂಲಕ ಭಾರತದ ಕೀರ್ತಿ ಪಾತಾಕೆಯನ್ನು ಮುಗಿಲೆತ್ತರಕ್ಕೇರಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...