ವಿಶಾಖಪಟ್ಟಣದಲ್ಲಿ ಶಿವಂ ದುಬೆ ಅಬ್ಬರದ ಆಟ: ಭಾರತ ಸೋತರೂ ಒಲಿದ ಐತಿಹಾಸಿಕ ದಾಖಲೆ

Date:

ಪ್ರವಾಸಿ ನ್ಯೂಜಿಲೆಂಡ್ ವಿರುದ್ಧ ಬುಧವಾರ ವಿಶಾಖಪಟ್ಟಣದಲ್ಲಿ ನಡೆದ 4ನೇ ಟಿ20 ಪಂದ್ಯದಲ್ಲಿ ಭಾರತ ತಂಡ 50 ರನ್‌ಗಳ ಸೋಲು ಕಂಡಿದೆ. ಆದರೆ, ಈ ಸೋಲಿನ ನಡುವೆಯೂ ಮಧ್ಯಮ ಕ್ರಮಾಂಕದ ಬ್ಯಾಟರ್ ಶಿವಂ ದುಬೆ ಅವರ ಸ್ಫೋಟಕ ಬ್ಯಾಟಿಂಗ್ ಪ್ರದರ್ಶನ ಇತಿಹಾಸದ ಪುಟ ಸೇರಿದೆ. ಕೇವಲ 15 ಎಸೆತಗಳಲ್ಲಿ ಅರ್ಧಶತಕ ಪೂರೈಸುವ ಮೂಲಕ ದುಬೆ, ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಭಾರತದ ಪರ ‘ಮೂರನೇ ವೇಗದ ಅರ್ಧಶತಕ’ ಬಾರಿಸಿದ ಕೀರ್ತಿಗೆ ಭಾಜನರಾದರು.

ಬೃಹತ್ ಮೊತ್ತವನ್ನು ಬೆನ್ನತ್ತಿದ್ದ ಭಾರತಕ್ಕೆ ದುಬೆ ಆಸರೆಯಾದರು. ಇಶ್ ಸೋಧಿ ಅವರ ಒಂದೇ ಓವರ್‌ನಲ್ಲಿ 3 ಸಿಕ್ಸರ್ ಹಾಗೂ 2 ಬೌಂಡರಿ ಸೇರಿ 26 ರನ್ ಚಚ್ಚಿದ ಅವರು, ಮೈದಾನದ ಮೂಲೆ ಮೂಲೆಗೂ ಚೆಂಡನ್ನು ಅಟ್ಟಿದರು.

ಕೇವಲ 15 ಎಸೆತಗಳಲ್ಲಿ ಫಿಫ್ಟಿ ಬಾರಿಸುವ ಮೂಲಕ, ಯುವರಾಜ್ ಸಿಂಗ್ (12 ಎಸೆತ) ಮತ್ತು ಅಭಿಷೇಕ್ ಶರ್ಮಾ (14 ಎಸೆತ) ಅವರ ನಂತರದ ಸ್ಥಾನವನ್ನು ದುಬೆ ಅಲಂಕರಿಸಿದರು.

ಒಟ್ಟು 23 ಎಸೆತಗಳನ್ನು ಎದುರಿಸಿದ ಅವರು 3 ಬೌಂಡರಿ ಹಾಗೂ ಬರೋಬ್ಬರಿ 7 ಸಿಕ್ಸರ್‌ಗಳ ನೆರವಿನಿಂದ 65 ರನ್ ಕಲೆಹಾಕಿದರು. ದುರಾದೃಷ್ಟವಶಾತ್ ನಾನ್-ಸ್ಟ್ರೈಕರ್ ತುದಿಯಲ್ಲಿ ರನ್ ಔಟ್ ಆಗುವ ಮೂಲಕ ಅವರ ಅಬ್ಬರಕ್ಕೆ ಬ್ರೇಕ್ ಬಿತ್ತು. ದುಬೆ ಅವರ ವಿರೋಚಿತ ಹೋರಾಟದ ಹೊರತಾಗಿಯೂ, ನ್ಯೂಜಿಲೆಂಡ್ ನೀಡಿದ್ದ ಬೃಹತ್ ಗುರಿಯನ್ನು ಮುಟ್ಟುವಲ್ಲಿ ಟೀಂ ಇಂಡಿಯಾ ವಿಫಲವಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ದಾಖಲೆಗಳ ಕಿರೀಟಕ್ಕೆ ಮತ್ತೊಂದು ಗರಿ: ಕಿವೀಸ್ ಸದೆಬಡಿದ ಭಾರತಕ್ಕೆ ಟಿ20 ಸರಣಿ ಕಿರೀಟ

​ಮೊದಲು ಬ್ಯಾಟ್ ಮಾಡಿದ ಕಿವೀಸ್ ಪಡೆ, ಟಿಮ್ ಸೀಫರ್ಟ್ (62) ಮತ್ತು ಡೆವೊನ್ ಕಾನ್ವೆ (44) ಅವರ ಸ್ಫೋಟಕ ಆಟದ ನೆರವಿನಿಂದ ನಿಗದಿತ 20 ಓವರ್‌ಗಳಲ್ಲಿ 215/7 ರನ್ ಕಲೆಹಾಕಿತು.

216 ರನ್‌ಗಳ ಕಠಿಣ ಗುರಿ ಬೆನ್ನತ್ತಿದ ಭಾರತ, ಆರಂಭದಲ್ಲೇ ಪ್ರಮುಖ ವಿಕೆಟ್‌ಗಳನ್ನು ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತು. ರಿಂಕು ಸಿಂಗ್ (39) ಮತ್ತು ಶಿವಂ ದುಬೆ ಮಾತ್ರ ದಿಟ್ಟ ಹೋರಾಟ ಪ್ರದರ್ಶಿಸಿದರು. ಉಳಿದ ಬ್ಯಾಟರ್‌ಗಳ ವೈಫಲ್ಯದಿಂದಾಗಿ ಭಾರತ 18.4 ಓವರ್‌ಗಳಲ್ಲಿ 165 ರನ್‌ಗಳಿಗೆ ಆಲೌಟ್ ಆಯಿತು. ​ಈ ಸೋಲಿನ ಹೊರತಾಗಿಯೂ 5 ಪಂದ್ಯಗಳ ಸರಣಿಯಲ್ಲಿ ಭಾರತ ಇನ್ನೂ 3-1 ಅಂತರದ ಮುನ್ನಡೆ ಕಾಯ್ದುಕೊಂಡಿದೆ.

​ಸಂಕ್ಷಿಪ್ತ ಸ್ಕೋರ್:
ನ್ಯೂಜಿಲೆಂಡ್: 20 ಓವರ್‌ಗಳಲ್ಲಿ 215/7 (ಟಿಮ್ ಸೀಫರ್ಟ್ 62, ದೀಪಕ್ ಚಹಾರ್ 2/33).
​ಭಾರತ: 18.4 ಓವರ್‌ಗಳಲ್ಲಿ 165/10 (ಶಿವಂ ದುಬೆ 65, ಮಿಚೆಲ್ ಸ್ಯಾಂಟ್ನರ್ 3/26).

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...