ರಚಿನ್‌ ರವೀಂದ್ರ ರೀತಿ ಶ್ರೇಯಸ್‌ ಅಯ್ಯರ್‌ಗೂ ಕೂಡ ಇದೆ ಕರ್ನಾಟಕದ ನಂಟು

Date:

ನ್ಯೂಜಿಲೆಂಡ್ ದೇಶದ ಪರ ಅಮೋಘ ಪ್ರದರ್ಶನ ನೀಡಿರುವ ಆರಂಭಿಕ ಆಟಗಾರ ರಚಿನ್‌ ರವೀಂದ್ರ ಕರ್ನಾಟಕದ ಬೆಂಗಳೂರು ಮೂಲದವರೆಂದು ಕ್ರಿಕೆಟ್ ಪ್ರಿಯರಿಗೆ ಗೊತ್ತಾಗಿದೆ. ಪ್ರಸ್ತುತ ನಡೆಯುತ್ತಿರುವ ಏಕದಿನ ವಿಶ್ವಕಪ್‌ನಲ್ಲಿ ಭಾರತ ತಂಡದ ಬ್ಯಾಟಿಂಗ್‌ ವಿಭಾಗದಲ್ಲಿ ವಿರಾಟ್‌ ಕೊಹ್ಲಿ ಹಾಗೂ ರೋಹಿತ್‌ ಶರ್ಮಾ ರೀತಿ ಸ್ಪೋಟಕ ಆಟವಾಡುತ್ತಿರುವ ಉದಯೋನ್ಮುಖ ಪ್ರತಿಭೆ ಶ್ರೇಯಸ್‌ ಅಯ್ಯರ್ ಅವರಿಗೂ ಕೂಡ ಕರ್ನಾಟಕದ ನಂಟಿದೆ.

ಈಗಾಗಲೇ ಸೆಮಿಫೈನಲ್‌ನಲ್ಲಿ ನ್ಯೂಜಿಲೆಂಡ್‌ ವಿರುದ್ಧ ಹಾಗೂ ನೆದರ್ಲಾಂಡ್ಸ್‌ ವಿರುದ್ಧ ಸತತ ಎರಡು ಶತಕ ಹಾಗೂ ಟೂರ್ನಿಯಲ್ಲಿ ಮೂರು ಅರ್ಧ ಶತಕದೊಂದಿಗೆ 526 ರನ್‌ ಬಾರಿಸಿರುವ 28 ವರ್ಷದ ಶ್ರೇಯಸ್‌  ಮುಂಬೈನವರು ಎಂದು ಬಹುತೇಕರಿಗೆ ತಿಳಿದಿಲ್ಲ.

ಆದರೆ ಈ ಸ್ಫೋಟಕ ಆಟಗಾರನಿಗೆ ನಮ್ಮ ಕರ್ನಾಟಕದ ಸಂಬಂಧವಿರುವುದು ಹಲವರಿಗೆ ತಿಳಿದಿಲ್ಲ. ಮಹಾರಾಷ್ಟ್ರದ ರಾಜಧಾನಿ ಮುಂಬೈನ ಚೆಂಬೂರಿನಲ್ಲಿ ಜನಿಸಿರುವ ಶ್ರೇಯಸ್‌ ತಂದೆ ಸಂತೋಷ್ ಅಯ್ಯರ್ ಉದ್ಯಮಿಯಾಗಿದ್ದಾರೆ. ಕೇರಳದ ತ್ರಿಶೂರ್‌ ಮೂಲದವರಾದ ಇವರು ಹಲವು ವರ್ಷಗಳ ಹಿಂದೆಯೇ ಮುಂಬೈನಲ್ಲಿ ನೆಲೆಗೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಶ್ರೇಯಸ್‌ ಅವರ ತಾಯಿ ರೋಹಿಣಿ ಮೂಲತಃ ಮಂಗಳೂರಿನ ಕಿನ್ನಗೋಳಿಯವರು. ಸುಮಾರು ವರ್ಷಗಳ ಹಿಂದೆಯೆ ಉದ್ಯೋಗದ ನಿಮಿತ್ತ ತಮ್ಮ ಪೋಷಕರೊಂದಿಗೆ ಮುಂಬೈಗೆ ತೆರಳಿರುವ ರೋಹಿಣಿ ಅವರು ಸಂತೋಷ್ ಅಯ್ಯರ್ ಅವರೊಂದಿಗೆ ಪ್ರೇಮ ವಿವಾಹವಾಗಿ ಮುಂಬೈನ ಚೆಂಬೂರಿನಲ್ಲಿ ನೆಲಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಏಕದಿನ ವಿಶ್ವಕಪ್ 2023 | ಬೆಂಗಳೂರಿನ ತಮ್ಮ ಪೂರ್ವಜರ ಬಗ್ಗೆ ಮೆಲುಕು ಹಾಕಿದ ರಚಿನ್ ರವೀಂದ್ರ

ತುಳು ಚಿತ್ರವೊಂದರ ಪೋಸ್ಟರ್ ಬಿಡುಗಡೆಯ ಸಂಬಂಧ ಫೆಬ್ರವರಿಯಲ್ಲಿ ಮಂಗಳೂರಿಗೆ ಆಗಮಿಸಿದ್ದ ಶ್ರೇಯಸ್‌ ಅಯ್ಯರ್ ತಮ್ಮ ಮಂಗಳೂರಿನ ನಂಟಿನ ಬಗ್ಗೆ ಹೇಳಿಕೊಂಡಿದ್ದರು.

“ನನ್ನ ತಾಯಿ ಕೂಡ ತುಳುನಾಡಿನವರು. ಮಂಗಳೂರಿನ ಕಟೀಲು ಸಮೀಪದ ಕಿನ್ನಿಗೋಳಿಯವರು. ತಮ್ಮ ಕುಟುಂಬ ಆಗಾಗ ನನ್ನ ತಾಯಿಯ ಊರಿಗೆ ಆಗಮಿಸುವುದಿದೆ” ಎಂದು ಹೇಳಿದ್ದರು.

ನ್ಯೂಜಿಲೆಂಡ್ ದೇಶದ ಪರ ಏಕದಿನ ವಿಶ್ವಕಪ್‌ ಟೂರ್ನಿಯಲ್ಲಿ ಆಟವಾಡುತ್ತಿರುವ ರಚಿನ್ ರವೀಂದ್ರ ಅವರ ಪೋಷಕರು 90 ರ ದಶಕದಲ್ಲಿ ಕೆಲಸದ ನಿಮಿತ್ತ ನ್ಯೂಜಿಲೆಂಡ್‌ಗೆ ತೆರಳಿ ಸದ್ಯ ಅಲ್ಲಿನ ನಾಗರಿಕರಾಗಿದ್ದಾರೆ.

“ನಾನು ಬೆಂಗಳೂರಿಗೆ ಬಂದಾಗ ನನ್ನ ಪುರ್ವಜರಾದ ಅಜ್ಜ-ಅಜ್ಜಿಯವರ ಮನೆಗೆ ಭೇಟಿ ನೀಡುತ್ತೇನೆ. ಇಲ್ಲಿನ ದಿನಗಳನ್ನು ನಾನು ನೆನಪಿಸಿಕೊಳ್ಳುತ್ತೇನೆ” ಎಂದು ರಚಿನ್‌ ರವೀಂದ್ರ ಹೇಳಿದರು.

ವಿಶ್ವಕಪ್‌ ಟೂರ್ನಿಯ ಪಾಕಿಸ್ತಾನ ಹಾಗೂ ಶ್ರೀಲಂಕಾ ವಿರುದ್ಧದ ಪಂದ್ಯಗಳು ಬೆಂಗಳೂರಿನಲ್ಲಿ ನಡೆದಿದ್ದ ಸಂದರ್ಭದಲ್ಲಿ ಉದ್ಯಾನ ನಗರಿಗೆ ಆಗಮಿಸಿದ್ದ ರಚಿನ್ ತಮ್ಮ ಅಜ್ಜಿ ತಾತನ ಮನೆಗೆ ಭೇಟಿ ನೀಡಿದ್ದರು.

blank profile picture 973460 640
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಗಳೂರು | ಕರಾವಳಿಯಲ್ಲಿ ನಾಳೆ (ಮಾ- 20) ಈದುಲ್ ಫಿತ್ರ್ ಆಚರಣೆ

ಪವಿತ್ರ ರಮಝಾನ್ ತಿಂಗಳ ಉಪವಾಸ ಸಮಾಪ್ತಿಯ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ...

ಉಜಿರೆ ಅನೈತಿಕ ಪೊಲೀಸ್ ಗಿರಿ ಪ್ರಕರಣ : SDPI ತೀವ್ರ ಖಂಡನೆ

ಬೆಳ್ತಂಗಡಿ ತಾಲೂಕಿನ ಉಜಿರೆಯಲ್ಲಿ ನಡೆದ ಅಪ್ರಾಪ್ತ ಮುಸ್ಲಿಂ ಬಾಲಕನ ಅಪಹರಣೆ, ಅಮಾನುಷ...

ಬೆಳ್ತಂಗಡಿ | ಅಪ್ರಾಪ್ತ ಮುಸ್ಲಿಂ ವಿದ್ಯಾರ್ಥಿ ಮೇಲೆ ಗುಂಪು ಹಲ್ಲೆ ಆರೋಪ; ಭಜರಂಗದಳದ ಕಾರ್ಯಕರ್ತರ ವಿರುದ್ಧ ದೂರು

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಉಜಿರೆಯ ಜನಾರ್ಧನ ಸ್ವಾಮಿ ದೇವಸ್ಥಾನದ...

ಐಪಿಎಲ್ | ಅತಿ ಹೆಚ್ಚು ವಿಕೆಟ್ ಪಡೆದರೂ ‘ಪರ್ಪಲ್ ಕ್ಯಾಪ್’ ಒಲಿಯದ 5 ದಿಗ್ಗಜ ಬೌಲರ್‌ಗಳು

ಐಪಿಎಲ್ ಇತಿಹಾಸದಲ್ಲಿ ಬೌಲರ್‌ಗಳ ಸಾಧನೆಯನ್ನು ಗುರುತಿಸಲು ಪ್ರತಿ ಆವೃತ್ತಿಯಲ್ಲಿ ಅತಿ ಹೆಚ್ಚು...