ದಕ್ಷಿಣ ಆಫ್ರಿಕಾ ವಿರುದ್ಧದ 2ನೇ ಟೆಸ್ಟ್‌ಗೆ ಶುಭ್‌ಮನ್‌ ಗಿಲ್‌ ಅಲಭ್ಯ; ಮುಂಬೈನಲ್ಲಿ ವೈದ್ಯರ ಭೇಟಿ

Date:

ಭಾರತ ತಂಡದ ನಾಯಕ ಶುಭ್‌ಮನ್ ಗಿಲ್ ದಕ್ಷಿಣ ಆಫ್ರಿಕಾ ವಿರುದ್ಧ ಗುವಾಹಟಿಯಲ್ಲಿ ನಡೆಯುವ ಎರಡನೇ ಟೆಸ್ಟ್‌ಗೆ ಗಾಯದ ಕಾರಣದಿಂದ ಹೊರಗುಳಿದಿದ್ದಾರೆ. ಶುಕ್ರವಾರ ಬಿಸಿಸಿಐ ಅಧಿಕೃತವಾಗಿ ಗಿಲ್ ಅವರನ್ನು ತಂಡದಿಂದ ಬಿಡುಗಡೆ ಮಾಡಿದ್ದು, ಅವರು ಬೆಳಗ್ಗೆಯೇ ಮುಂಬೈಗೆ ತೆರಳಿ ತಜ್ಞ ವೈದ್ಯರ ಸಲಹೆ ಪಡೆಯಲು ಪ್ರಯಾಣಿಸಿದ್ದಾರೆ.

ಕತ್ತು ನೋವಿನ ಪರಿಣಾಮದಿಂದ ಅವರು ಕೆಲವು ದಿನಗಳಿಂದ ತರಬೇತಿ ಪಡೆಯಲು ಸಾಧ್ಯವಾಗಿರಲಿಲ್ಲ. ಗುರುವಾರ ತಂಡದ ಜೊತೆಗೆ ಅಭ್ಯಾಸ ಮಾಡದ ಗಿಲ್, ಶುಕ್ರವಾರ ಅಂತಿಮ ಫಿಟ್ನೆಸ್ ಪರೀಕ್ಷೆಗಿಳಿಯುವ ನಿರೀಕ್ಷೆಯಿತ್ತು. ಆದರೆ ವೈದ್ಯಕೀಯ ತಂಡವು ಅತಿಯಾದ ಅಪಾಯ ತೆಗೆದುಕೊಳ್ಳಬಾರದೆಂದು ಸಲಹೆ ನೀಡಿದ್ದು, ಇದರಿಂದಲೇ ಪಂದ್ಯದಿಂದ ಅವರನ್ನು ದೂರ ಇಡಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಅವರು ಚೆನ್ನಾಗಿ ಚೇತರಿಸಿಕೊಳ್ಳುತ್ತಿದ್ದಾರೆ,” ಎಂದು ಬ್ಯಾಟಿಂಗ್ ಕೋಚ್ ಕೋಟಕ್ ಗುರುವಾರ ಹೇಳಿದ್ದರು. “ಆದರೆ ಮತ್ತೆ ಸಮಸ್ಯೆ ಆಗುವ ಸಾಧ್ಯತೆಯಿರುವುದರಿಂದ ಇನ್ನೊಂದು ಪಂದ್ಯ ವಿಶ್ರಾಂತಿ ನೀಡುವುದು ಉತ್ತಮ” ಎಂದು ತಿಳಿಸಿದರು.

ಇದನ್ನು ಓದಿದ್ದೀರಾ? ರಣಜಿ ಟ್ರೋಫಿ | ಚಂಡೀಗಢ ವಿರುದ್ಧ ಕರ್ನಾಟಕಕ್ಕೆ ಭರ್ಜರಿ ಜಯ; ಕ್ವಾರ್ಟರ್ ಫೈನಲ್‌ ಕನಸು ಜೀವಂತ

ತಂಡವು ಪ್ರಬಲವಾಗಿದ್ದು, ಯಾವುದೇ ಆಟಗಾರ ಬಂದು ಆಡಿದರೂ ಟೀಂ ಇಂಡಿಯಾ ಉತ್ತಮ ಪ್ರದರ್ಶನ ನೀಡಲಿದೆ. ಸೇರಿಕೊಳ್ಳುವ ಆಟಗಾರರು ಕೂಡ ಉತ್ತಮ ಆಟವಾಡುವ ನಿರೀಕ್ಷೆಯಿದೆ ಎಂದು ಬ್ಯಾಟಿಂಗ್ ಕೋಚ್ ಕೋಟಕ್ ತಿಳಿಸಿದ್ದಾರೆ.

ಗಿಲ್ ಗೈರು ಹಾಜರಾತಿಯಿಂದ ಈಗಾಗಲೇ 1–0ರಿಂದ ಹಿನ್ನಡೆಯಲ್ಲಿ ಇರುವ ಭಾರತದ ಮೇಲೆ ಇನ್ನಷ್ಟು ಒತ್ತಡ ತಂದಿದೆ. ಕೊಲ್ಕತ್ತಾದಲ್ಲಿ 30 ರನ್‌ಗಳ ಅಂತರದಿಂದ ಸೋತ ನಂತರ, ಎರಡನೇ ಟೆಸ್ಟ್‌ನಲ್ಲಿ ಭಾರತ ತಂಡಕ್ಕೆ ಪರ್ಯಾಯ ಆಟಗಾರರ ಮೇಲೆ ಹೆಚ್ಚಿನ ನಂಬಿಕೆ ಇರಬೇಕಾಗಿದೆ.

ನಾಳೆ ನ.22 ರಂದು ನಡೆಯಲಿರುವ 2ನೇ ಟೆಸ್ಟ್‌ನಲ್ಲಿ ಗಿಲ್‌ ಬದಲಿಗೆ ಯಾರು ಸೇರಿಕೊಳ್ಳಲಿದ್ದಾರೆ ಎಂದು ನಿರ್ಧಾರವಾಗಲಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...