10 ವರ್ಷದ ಹಿಂದಿನ ವಿವಾದಾತ್ಮಕ ಟ್ವೀಟ್: ಭಾರತ ತೊರೆದ ಪಾಕ್‌ ಮೂಲದ ಕ್ರೀಡಾ ನಿರೂಪಕಿ

Date:

10 ವರ್ಷಗಳ ಹಿಂದಿನ ಟ್ವೀಟ್‌ಗೆ ಸಂಬಂಧಿಸಿ, ಕ್ರಿಕೆಟ್‌ ವಿಶ್ವಕಪ್‌ಗಾಗಿ ಕೆಲ ದಿನಗಳ ಹಿಂದೆ ಪಾಕಿಸ್ತಾನದಿಂದ ಬಂದಿದ್ದ ಕ್ರೀಡಾ ನಿರೂಪಕಿ ಜೈನಾಬ್ ಅಬ್ಬಾಸ್ ಅವರು ಭಾರತ ತೊರೆದಿರುವ ಘಟನೆ ವರದಿಯಾಗಿದೆ.

‘ಪಾಕಿಸ್ತಾನದ ಕ್ರೀಡಾ ನಿರೂಪಕಿ ಜೈನಾಬ್ ಅಬ್ಬಾಸ್ ಅವರನ್ನು ವಿವಾದಿತ ಪ್ರಕರಣದಲ್ಲಿ ಭಾರತದಿಂದ ಗಡಿಪಾರು ಮಾಡಲಾಗಿದೆ’ ಎಂದು ಸೋಮವಾರ ಮಧ್ಯಾಹ್ನ ಪಾಕಿಸ್ತಾನಿ ಟಿವಿ ನ್ಯೂಸ್ ಚಾನೆಲ್ ‘ಸಮಾ’ ಹೇಳಿಕೊಂಡಿತ್ತು. ಆ ಬಳಿಕ ವಿವಾದಾತ್ಮಕ ಟ್ವೀಟ್‌ಗಳ ಕಾರಣಕ್ಕೆ ಭದ್ರತೆಯ ದೃಷ್ಟಿಯಿಂದ ಭಾರತ ತೊರೆದಿದ್ದಾರೆ ಎಂದು ತಿಳಿಸಿದೆ.

ಪಾಕಿಸ್ತಾನದ ಕ್ರೀಡಾ ನಿರೂಪಕಿ ಜೈನಾಬ್‌ ಅಬ್ಬಾಸ್‌, 2023ರ ಕ್ರಿಕೆಟ್‌ ಏಕದಿನ ವಿಶ್ವಕಪ್‌ ಟೂರ್ನಿಯ ನಿರೂಪಣೆಗಾಗಿ ಇತ್ತೀಚೆಗೆ ಭಾರತಕ್ಕೆ ಬಂದಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

10 ವರ್ಷಗಳ ಹಿಂದೆ ಅವರು ತಮ್ಮ ಟ್ವಿಟರ್‌ ಹ್ಯಾಂಡಲ್‌ನಿಂದ ಭಾರತ ಮತ್ತು ಹಿಂದೂ ಧರ್ಮವನ್ನು ಟೀಕಿಸಿ ಮಾಡಿದ್ದ ಟ್ವೀಟ್‌ಗಳೇ ಇದಕ್ಕೆ ಕಾರಣ ಎಂದು ವರದಿಯಾಗಿದೆ.

‘ನಾವು ಅತಿಥಿ ದೇವೋಭವ ಎಂದು ಎಲ್ಲ ಅತಿಥಿಗಳನ್ನು ಸ್ವಾಗತಿಸುತ್ತೇವೆ. ಆದರೆ ಕೆಲವೊಂದು ಅತಿಥಿಗಳು ಅದಕ್ಕೆ ಅರ್ಹರಲ್ಲ. ನಮ್ಮ ದೇಶ ಮತ್ತು ಹಿಂದೂ ಧರ್ಮವನ್ನು ಗೌರವಿಸುವವರಿಗೆ ನಾವೂ ಗೌರವ ನೀಡುತ್ತೇವೆ. ಆದರೆ ನಮ್ಮ ಭೂಮಿಯಲ್ಲಿ ಭಾರತೀಯ ವಿರೋಧಿಗಳಿಗೆ ಸ್ವಾಗತವಿಲ್ಲ. ಪಾಕಿಸ್ತಾನದ ಕ್ರೀಡಾ ನಿರೂಪಕಿ ಜೈನಾಬ್‌ ಅಬ್ಬಾಸ್‌ ಅವರು ಈ ಹಿಂದೆ ಭಾರತ ವಿರೋಧಿ ಹಾಗೂ ಹಿಂದೂ ಧರ್ಮದ ವಿರುದ್ಧವಾಗಿ ಟ್ವೀಟ್ ಮಾಡಿ ಅವಮಾನಿಸಿದ್ದಾರೆ. ಹಾಗಾಗಿ, ಅವರಿಗೂ ಸ್ವಾಗತವಿಲ್ಲ. 2023ರ ವಿಶ್ವಕಪ್‌ ನಿರೂಪಣೆಯಿಂದ ಅವರನ್ನು ತೆಗೆದು ಹಾಕಬೇಕು’ ಎಂದು ಹಳೆಯ ವಿವಾದಾತ್ಮಕ ಟ್ವೀಟ್‌ಗಳನ್ನು ಉಲ್ಲೇಖಿಸಿ ವಿನೀತ್ ಜಿಂದಾಲ್ ಎಂಬ ವಕೀಲ ಬಿಸಿಸಿಐಗೆ ದೂರು ಸಲ್ಲಿಸಿದ್ದರು.

ಆ ಬಳಿಕ ಈ ಕುರಿತಾಗಿ ದೆಹಲಿಯ ಸೈಬರ್‌ ಕ್ರೈಮ್‌ ಪೊಲೀಸರಿಗೂ ವಿನೀತ್ ಜಿಂದಾಲ್ ದೂರು ನೀಡಿದ ಹಿನ್ನೆಲೆಯಲ್ಲಿ ಅವರು ಭಾರತ ತೊರೆದಿದ್ದಾರೆ ಎಂದು ತಿಳಿದುಬಂದಿದೆ.

35 ವರ್ಷದ ಕ್ರೀಡಾ ನಿರೂಪಕಿ ಜೈನಾಬ್‌ ಅಬ್ಬಾಸ್‌ ಅವರ ವಿರುದ್ಧ ಈ ದೂರು ಬಂದ ಬೆನ್ನಲ್ಲೇ, ಸುರಕ್ಷತೆಯ ದೃಷ್ಟಿಯಿಂದ ಭಾರತ ಬಿಟ್ಟು ತೆರಳುವಂತೆ ಬಿಸಿಸಿಐ ಸೂಚಿಸಿರುವುದಾಗಿ ತಿಳಿದುಬಂದಿದೆ.

ಮೊದಲು ಗಡಿಪಾರು ಮಾಡಲಾಗಿದೆ ಎಂದು ಮಾಹಿತಿ ನೀಡಿದ್ದ ಪಾಕಿಸ್ತಾನದ ಸಮಾ ಟಿವಿ ಆ ಬಳಿಕ ಮತ್ತೊಂದು ಟ್ವೀಟ್ ಮಾಡಿದ್ದು, ಭದ್ರತೆಯ ದೃಷ್ಟಿಯಿಂದ ಜೈನಬ್ ಭಾರತವನ್ನು ತೊರೆದಿದ್ದಾರೆ. ಪ್ರಸ್ತುತ ಅವರು ದುಬೈನಲ್ಲಿದ್ದಾರೆ’ ಎಂದು ವರದಿ ಮಾಡಿದೆ.

ವಿಶ್ವಕಪ್‌ಗಾಗಿ ಭಾರತಕ್ಕೆ ಆಗಮಿಸುವ ಮೊದಲು ಟ್ವೀಟ್‌ ಮಾಡಿದ್ದ ಜೈನಾಬ್ ಅಬ್ಬಾಸ್, ‘ಎರಡೂ ದೇಶಗಳ ವ್ಯತಿರಿಕ್ತ ನಂಬಿಕೆಗಳ ಹೊರತಾಗಿಯೂ ಭಾರತದ ಸಂಸ್ಕೃತಿಯನ್ನು ಅನ್ವೇಷಿಸಲು ಉತ್ಸುಕನಾಗಿದ್ದೇನೆ. ಮುಂದಿನ ಆರು ವಾರಗಳ ಕಾಲ ಅದಕ್ಕಾಗಿ ಎದುರು ನೋಡುತ್ತಿದ್ದೇನೆ’ ಎಂದು ಬರೆದುಕೊಂಡಿದ್ದರು. ಈ ನಡುವೆಯೇ ಈ ರೀತಿಯ ಬೆಳವಣಿಗೆ ನಡೆದಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...