ಬೃಹತ್ ಗುರಿ ಬೆನ್ನಟ್ಟುವಲ್ಲಿ ವಿಫಲವಾದ ಆರ್‌ಸಿಬಿ: ಹೈದರಾಬಾದ್‌ಗೆ 25 ರನ್‌ಗಳ ಜಯ

Date:

ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಇಂದು ನಡೆದ ಆರ್‌ಸಿಬಿ ಹಾಗೂ ಹೈದರಾಬಾದ್ ನಡುವಿನ ಪಂದ್ಯದಲ್ಲಿ ಬೆಂಗಳೂರು 25 ರನ್‌ಗಳಿಂದ ಸೋಲೊಪ್ಪಿಕೊಂಡಿದೆ.

ಟಾಸ್ ಸೋತು ಮೊದಲು ಬ್ಯಾಟಿಂಗ್ ನಡೆಸಿದ್ದ ಪ್ಯಾಟ್ ಕಮ್ಮಿನ್ಸ್ ನೇತೃತ್ವದ ಹೈದರಾಬಾದ್ ತಂಡ, ಆರ್‌ಸಿಬಿಗೆ ಗೆಲ್ಲಲು 288 ರನ್‌ಗಳ ಬೃಹತ್‌ ಗುರಿ ನೀಡಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಗುರಿ ಬೆನ್ನತ್ತಿದ ಪಾಫ್ ಡು ಪ್ಲೆಸಿ ನೇತೃತ್ವದ ಆರ್‌ಸಿಬಿ ತಂಡ, ನಿಗದಿತ 20 ಓವರುಗಳಲ್ಲಿ 7 ವಿಕೆಟ್ ಕಳೆದುಕೊಂಡು 262 ರನ್ ಗಳಿಸಲಷ್ಟೇ ಶಕ್ತವಾಯಿತು.

ದಿನೇಶ್ ಕಾರ್ತಿಕ್ ಏಕಾಂಗಿ ಹೋರಾಟ

288 ರನ್‌ಗಳ ಗುರಿಯನ್ನು ಸಾಧಿಸಲು ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ಹಾಗೂ ನಾಯಕ ಫಾಫ್ ಡು ಪ್ಲೆಸಿ ಉತ್ತಮ ಆರಂಭ ನೀಡಿದ್ದರು. ಆರ್‌ಸಿಬಿ, ಪವರ್ ಪ್ಲೇ ನಲ್ಲಿ ವಿಕೆಟ್ ನಷ್ಟವಿಲ್ಲದೇ 79 ರನ್ ದಾಖಲಿಸಿತ್ತು.

ಆ ಬಳಿಕ ಕೊಹ್ಲಿ ಔಟ್ ಆಗುತ್ತಿದ್ದಂತೆಯೇ ರನ್ ಗಳಿಸುವುದು ನಿಧಾನಗತಿಯಲ್ಲಿ ಸಾಗಿತು. ನಾಯಕ ಡು ಪ್ಲೆಸಿ ಅರ್ಧಶತಕ ಗಳಿಸಿ ರನ್ ಕಲೆ ಹಾಕುವಲ್ಲಿ ಯಶಸ್ವಿಯಾಗಿ ಮುಂದುವರಿಯುವಾಗ ಪ್ಯಾಟ್ ಕಮ್ಮಿನ್ಸ್ ವಿಕೆಟ್ ಪಡೆಯುವಲ್ಲಿ ಸಫಲರಾದರು. ಔಟ್ ಆಗುವುದಕ್ಕಿಂತ ಮುನ್ನ 28 ಎಸೆತಗಳಲ್ಲಿ 4 ಸಿಕ್ಸರ್ ಹಾಗೂ 7 ಬೌಂಡರಿ ನೆರವಿನಿಂದ 62 ರನ್ ಗಳಿಸಿದರು.

ಆರ್‌ಸಿಬಿ ಮಧ್ಯಮ ಕ್ರಮಾಂಕದ ಬ್ಯಾಟ್ಸ್‌ಮನ್‌ಗಳು ವಿಫಲರಾದಾಗ ಕ್ರೀಸ್‌ಗೆ ಬಂದ ದಿನೇಶ್ ಕಾರ್ತಿಕ್ ಏಕಾಂಗಿಯಾಗಿ ಹೋರಾಟ ನಡೆಸಿದರು. ಇವರಿಗೆ ಲೋಮ್‌ರೋರ್ ಸಾಥ್ ನೀಡಿದರಾದರೂ ಹೆಚ್ಚು ರನ್ ಗಳನ್ನು ಕೂಡಿ ಹಾಕಲು ವಿಫಲರಾದರು.

ಕೊನೆಯವರೆಗೂ ಹೋರಾಡಿದ ದಿನೇಶ್ ಕಾರ್ತಿಕ್, ಕೇವಲ 35 ಎಸೆತಗಳಲ್ಲಿ 7 ಭರ್ಜರಿ ಸಿಕ್ಸರ್ ಹಾಗೂ 5 ಬೌಂಡರಿಯ ನೆರವಿನಿಂದ 83 ರನ್ ಗಳಿಸಿ, ನಟರಾಜನ್ ಎಸೆತದಲ್ಲಿ ವಿಕೆಟ್ ಒಪ್ಪಿಸಿದರು. ಆ ಮೂಲಕ ಆರ್‌ಸಿಬಿಯನ್ನು ಹೀನಾಯ ಸೋಲಿನಿಂದ ಕಾಪಾಡಿದರು. ಕೊನೆಯಲ್ಲಿ ಅನುಜ್ ರಾವತ್ 14 ಎಸೆತಗಳಲ್ಲಿ 25 ರನ್ ಗಳಿಸಿ ಔಟಾಗದೆ ಉಳಿದರು.

ಇಂದಿನ ಪಂದ್ಯದಲ್ಲಿ ಹೈದರಾಬಾದ್ ತಂಡದ 287 ಹಾಗೂ ಆರ್‌ಸಿಬಿಯ 262 ರನ್ ಸೇರಿ ಒಂದೇ ಪಂದ್ಯದಲ್ಲಿ 549 ರನ್ ದಾಖಲಾಯಿತು. ಇದು ಟಿ20 ಇತಿಹಾಸದಲ್ಲಿ ದಾಖಲಾದ ಬೃಹತ್ ಮೊತ್ತವಾಗಿದೆ.

ಹೈದರಾಬಾದ್ ಪರ ಬೌಲಿಂಗ್‌ನಲ್ಲಿ ನಾಯಕ ಪ್ಯಾಟ್ ಕಮ್ಮಿನ್ಸ್ ಮೂರು, ಇಂಪ್ಯಾಕ್ಟ್ ಪ್ಲೇಯರ್ ಆಗಿ ಬಂದ ಮಯಾಂಕ್ ಮಾರ್ಕಾಂಡೆ 2 ಹಾಗೂ ನಟರಾಜನ್ ಒಂದು ವಿಕೆಟ್ ಪಡೆಯುವಲ್ಲಿ ಸಫಲರಾದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...