KKR-SRH ನಡುವೆ ಇಂದು ಮೊದಲ ಕ್ವಾಲಿಫೈಯರ್ ಪಂದ್ಯ; ಗೆದ್ದವರು ಫೈನಲ್‌ಗೆ; ಸೋತವರಿಗೆ ಮತ್ತೆ ಅವಕಾಶ!

Date:

ಈಗಾಗಲೇ 17ನೇ ಆವೃತ್ತಿಯ ಐಪಿಎಲ್​ನ ಎಲ್ಲ ಲೀಗ್‌ ಪಂದ್ಯಗಳು ಕೊನೆಗೊಂಡಿದ್ದು, ಚಾಂಪಿಯನ್ ಪಟ್ಟಕ್ಕಾಗಿ ನಡೆಯಲಿರುವ ಫೈನಲ್ ಪಂದ್ಯ ಸೇರಿ ಒಟ್ಟು ನಾಲ್ಕು ಮಹತ್ವದ ಪಂದ್ಯಗಳಷ್ಟೇ ಬಾಕಿ ಇದೆ.

ಈಗಾಗಲೇ 70 ಲೀಗ್ ಪಂದ್ಯಗಳ ಪೈಕಿ 67 ಲೀಗ್ ಪಂದ್ಯಗಳು ಫಲಿತಾಂಶ ಕಂಡಿದ್ದರೆ, ಮಳೆಯಿಂದಾಗಿ ಮೂರು ಪಂದ್ಯಗಳು ರದ್ದಾಗಿದ್ದವು. ಗುಜರಾತ್-ಕೆಕೆಆರ್, ಲಕ್ನೋ-ಗುಜರಾತ್ ಮತ್ತು ಕೆಕೆಆರ್-ರಾಜಸ್ಥಾನ ತಂಡಗಳ ನಡುವೆ ನಡೆಯಬೇಕಿದ್ದ ಲೀಗ್ ಪಂದ್ಯಗಳು ಮಳೆಗಾಹುತಿಯಾಗಿತ್ತು.

ಲೀಗ್ ಪಂದ್ಯಗಳ ಬಳಿಕ ಒಟ್ಟು ನಾಲ್ಕು ತಂಡಗಳು ಪ್ಲೇ ಆಫ್‌ಗೆ ಪ್ರವೇಶಿಸಿದೆ. ಮೊದಲ ತಂಡವಾಗಿ ಕೊಲ್ಕತ್ತಾ ನೈಟ್ ರೈಡರ್ಸ್‌ ಪ್ರವೇಶಿಸಿದ್ದರೆ, ಸನ್‌ರೈಸರ್ಸ್‌ ಹೈದರಾಬಾದ್, ರಾಜಸ್ಥಾನ ರಾಯಲ್ಸ್ ಹಾಗೂ ರಾಯಲ್ ಚಾಲೆಂಜರ್ಸ್‌ ಬೆಂಗಳೂರು ತಂಡ ಕ್ರಮವಾಗಿ 2,3,4ನೇ ತಂಡವಾಗಿ ಈಗಾಗಲೇ ಪ್ಲೇ ಆಫ್‌ ಪ್ರವೇಶಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮಂಗಳವಾರ(ಮೇ 21) ನಡೆಯುವ ಮೊದಲ ಕ್ವಾಲಿಫೈಯರ್​ ಪಂದ್ಯದಲ್ಲಿ ಕೆಕೆಆರ್​ ವಿರುದ್ಧ ಸನ್‌ರೈಸರ್ಸ್‌ ಹೈದರಾಬಾದ್​ ತಂಡ ಕಣಕ್ಕಿಳಿಯಲಿದೆ. ಬುಧವಾರ ನಡೆಯುವ ಎಲಿಮಿನೇಟರ್​ ಪಂದ್ಯದಲ್ಲಿ ಫಾಫ್ ಡು ಪ್ಲೆಸಿಸ್ ನೇತೃತ್ವದ ಆರ್‌ಸಿಬಿ ತಂಡವು, ಸಂಜು ಸ್ಯಾಮ್ಸನ್ ನೇತೃತ್ವದ ರಾಜಸ್ಥಾನ್​ ರಾಯಲ್ಸ್​ ವಿರುದ್ಧ ಆಡಲಿದೆ.

ಮೊದಲ ಕ್ವಾಲಿಫೈಯರ್​ ಪಂದ್ಯ ಹಾಗೂ ಎಲಿಮಿನೇಟರ್ ಎರಡೂ ಪಂದ್ಯಗಳು ಅಹಮದಾಬಾದ್​ನ ನರೇಂದ್ರ ಮೋದಿ ಕ್ರಿಕೆಟ್​ ಸ್ಟೇಡಿಯಂನಲ್ಲಿ ನಡೆಯಲಿದೆ.

ಇಂದು (ಮೇ 21) ನಡೆಯಲಿರುವ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಗೆದ್ದವರು ಫೈನಲ್‌ಗೆ ಹೋದರೆ, ಸೋತವರಿಗೆ ಮತ್ತೊಂದು ಅವಕಾಶ ಸಿಗಲಿದೆ. ನರೇಂದ್ರ ಮೋದಿ ಕ್ರಿಕೆಟ್‌ ಕ್ರೀಡಾಂಗಣದಲ್ಲಿ ನಡೆಯಲಿರುವ ಈ ಮಹತ್ವದ ಪಂದ್ಯವನ್ನು ಕಣ್ತುಂಬಿಸಿಕೊಳ್ಳಲು ಅಭಿಮಾನಿಗಳು ಎದುರು ನೋಡುತ್ತಿದ್ದಾರೆ.

ಮೊದಲ ಕ್ವಾಲಿಫೈಯರ್‌ನಲ್ಲಿ ಗೆದ್ದವರು ನೇರವಾಗಿ ಫೈನಲ್ ಪ್ರವೇಶಿಸಿದರೆ, ಸೋತವರಿಗೆ ಮತ್ತೊಂದು ಅವಕಾಶ ಸಿಗಲಿದೆ. ನಾಳೆ(ಮೇ 22) ಇದೇ ಮೈದಾನದಲ್ಲಿ ಆರ್‌ಸಿಬಿ ಹಾಗೂ ರಾಜಸ್ಥಾನ್ ರಾಯಲ್ಸ್‌ ನಡುವೆ ಎಲಿಮಿನೇಟರ್ ಪಂದ್ಯ ನಡೆಯಲಿದೆ. ಇದರಲ್ಲಿ ಜಯ ಗಳಿಸಿದವರು, ಮೇ 24ರಂದು ಚೆನ್ನೈನ ಚಿದಂಬರಂ ಸ್ಟೇಡಿಯಂನಲ್ಲಿ ನಡೆಯಲಿರುವ ಎರಡನೇ ಕ್ವಾಲಿಫೈಯರ್ ಪಂದ್ಯದಲ್ಲಿ ಮೊದಲ ಕ್ವಾಲಿಫೈಯರ್‌ನಲ್ಲಿ ಸೋತ ತಂಡವನ್ನು ಎದುರಿಸಲಿದ್ದಾರೆ.

ಮಳೆಯ ಭೀತಿ ಇದೆಯೇ?

ಅಹಮದಾಬಾದ್‌ನಲ್ಲಿ ಪಂದ್ಯ ನಡೆಯುವ ಮಂಗಳವಾರ ಯಾವುದೇ ಮಳೆ ಇಲ್ಲ. ಪಂದ್ಯದ ವೇಳೆ ಅಹಮಾದಾಬಾದ್‌ನಲ್ಲಿ 31 ರಿಂದ 37 ಡಿಗ್ರಿ ಸೆಲ್ಸಿಯಸ್‌ ಉಷ್ಣಾಂಶ ಇರಲಿದೆ. ಆದರೆ, ಪಂದ್ಯದ ಎರಡನೇ ಇನಿಂಗ್ಸ್‌ನ ವೇಳೆ ಇಬ್ಬನಿ ಇರಲಿದೆ ಎಂದು ಅಲ್ಲಿನ ಹವಾಮಾನ ಇಲಾಖೆ ತಿಳಿಸಿದೆ.

ಸನ್‌ರೈಸರ್ಸ್ ಹೈದರಾಬಾದ್ ಹಾಗೂ ಕೋಲ್ಕತಾ ನೈಟ್‌ ರೈಡರ್ಸ್‌ ನಡುವಿನ ಮೊದಲನೇ ಕ್ವಾಲಿಫೈಯರ್‌ ಪಂದ್ಯಕ್ಕೆ ಯಾವುದೇ ಮೀಸಲು ದಿನ ನಿಗದಿಪಡಿಸಿಲ್ಲ. ಒಂದು ವೇಳೆ ಅನಿರೀಕ್ಷಿತವಾಗಿ ಮಳೆಯಾಗಿ ಪಂದ್ಯ ರದ್ದಾದರೆ, ಲೀಗ್‌ ಹಂತದಲ್ಲಿ ಹೆಚ್ಚಿನ ಅಂಕಗಳನ್ನು ಕಲೆ ಹಾಕಿರುವ ತಂಡ ಫೈನಲ್‌ಗೆ ಪ್ರವೇಶಿಸಲಿದೆ. ಅಂದರೆ 20 ಅಂಕ ಕಲೆ ಹಾಕಿರುವ ಕೆಕೆಆರ್‌, 17 ಅಂಕ ಹೊಂದಿರುವ ಎಸ್‌ಆರ್‌ಎಚ್‌ ತಂಡವನ್ನು ಹಿಂದಿಕ್ಕಿ ಫೈನಲ್‌ಗೇರಲಿದೆ.

2023ರಲ್ಲಿ ಪ್ಲೇ ಆಫ್‌ಗೇರಿದ್ದ 4 ತಂಡಗಳೂ ಈ ಬಾರಿ ಪ್ಲೇ-ಆಫ್‌ಗೇರಲು ವಿಫಲ!

2023ರ ಐಪಿಎಲ್‌ನಲ್ಲಿ ಪ್ಲೇ-ಆಫ್ ಪ್ರವೇಶಿದ್ದ 4 ತಂಡಗಳೂ ಈ ಬಾರಿ ಪ್ಲೇ-ಆಫ್‌ಗೇರಲು ವಿಫಲವಾಗಿದೆ. ಬೇರೆ 4 ತಂಡಗಳು ನಾಕೌಟ್ ಪ್ರವೇಶಿಸಿವೆ.

ಕಳೆದ ವರ್ಷ ಗುಜರಾತ್, ಚೆನ್ನೈ, ಲಕ್ನೋ ಹಾಗೂ ಮುಂಬೈ ಅಗ್ರ ನಾಲ್ಕರಲ್ಲಿ ಸ್ಥಾನ ಗಿಟ್ಟಿಸಿ ಪ್ಲೇ-ಆಫ್‌ಗೇರಿದ್ದವು. ಫೈನಲ್‌ನ ಗುಜರಾತ್‌ನ ಮಣಿಸಿ ಚೆನ್ನೈ ಚಾಂಪಿಯನ್ ಆಗಿತ್ತು.

ಈ ಬಾರಿ ಕೋಲ್ಕತಾ, ರಾಜಸ್ಥಾನ, ಹೈದರಾಬಾದ್ ಹಾಗೂ ಆರ್‌ಸಿಬಿ ಪ್ಲೇ-ಆಫ್‌ಗೇರಿವೆ. ಈ ಪೈಕಿ ಕೋಲ್ಕತಾ 2, ರಾಜಸ್ಥಾನ, ಹೈದರಾಬಾದ್ ತಲಾ 1 ಬಾರಿ ಪ್ರಶಸ್ತಿ ಗೆದ್ದಿದೆ. ಆರ್‌ಸಿಬಿ ತಂಡವು 2009, 2011 ಹಾಗೂ 2016ರಲ್ಲಿ ಸೇರಿ ಒಟ್ಟು ಮೂರು ಬಾರಿ ಫೈನಲ್ ಪ್ರವೇಶಿಸಿದ್ದರೂ, ಒಂದು ಬಾರಿಯೂ ಚಾಂಪಿಯನ್ ಆಗಿಲ್ಲ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...