ಸರ್ಕಾರದ ಹಸ್ತಕ್ಷೇಪ ಆರೋಪ: ಶ್ರೀಲಂಕಾ ಕ್ರಿಕೆಟ್ ಮಂಡಳಿಯನ್ನೇ ವಜಾಗೊಳಿಸಿದ ಐಸಿಸಿ!

Date:

ಭಾರತದಲ್ಲಿ ನಡೆಯುತ್ತಿರುವ ಐಸಿಸಿ ಏಕದಿನ ವಿಶ್ವಕಪ್‌ ಟೂರ್ನಿಯಲ್ಲಿ ಕಳಪೆ ಪ್ರದರ್ಶನ ನೀಡಿ ಸೆಮಿಫೈನಲ್​ಗೆ ಅರ್ಹತೆ ಪಡೆಯಲು ವಿಫಲವಾಗಿರುವ ಶ್ರೀಲಂಕಾ ಕ್ರಿಕೆಟ್ ತಂಡಕ್ಕೆ ಮತ್ತೊಂದು ಆಘಾತ ಎದುರಾಗಿದೆ.

ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ (ICC) ಶ್ರೀಲಂಕಾ ಕ್ರಿಕೆಟ್​ ಮಂಡಳಿಯ ಸದಸ್ಯತ್ವವನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತುಗೊಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಶ್ರೀಲಂಕಾ ಸರ್ಕಾರ ಕ್ರೀಡಾ ಮಂಡಳಿಯಲ್ಲಿ ನಿರಂತರ ಹಸ್ತಕ್ಷೇಪ ನಡೆಸುತ್ತಿರುವ ಆರೋಪದ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಂಡಿರುವುದಾಗಿ ಐಸಿಸಿ ತಿಳಿಸಿದೆ.

ಐಸಿಸಿಯ ಉನ್ನತ ಮಂಡಳಿಯು ಶುಕ್ರವಾರ ಸಭೆ ನಡೆಸಿದ ಬಳಿಕ ಈ ತೀರ್ಮಾನ ಕೈಗೊಂಡಿದೆ. ಜೊತೆಗೆ ಶ್ರೀಲಂಕಾ ಕ್ರಿಕೆಟ್ ಸದಸ್ಯರಾಗಿ ಅದರ ಜವಾಬ್ದಾರಿಗಳನ್ನು ಗಂಭೀರವಾಗಿ ಉಲ್ಲಂಘಿಸುತ್ತಿದೆ ಎನ್ನುವುದನ್ನು ಖಚಿತಪಡಿಸಿದೆ.

ಶ್ರೀಲಂಕಾದಲ್ಲಿ ಕ್ರಿಕೆಟ್ ಹಾಗೂ ಅದರ ವ್ಯವಹಾರಗಳನ್ನು ಸ್ವಾಯತ್ತವಾಗಿ ನಿರ್ವಹಿಸುವ ಅವಶ್ಯಕತೆ ಮತ್ತು ಆಡಳಿತ, ನಿಯಂತ್ರಣ ಅಥವಾ ಆಡಳಿತದಲ್ಲಿ ಸರ್ಕಾರದ ಯಾವುದೇ ಹಸ್ತಕ್ಷೇಪವಿರಬಾರದು ಎನ್ನುವ ಅಗತ್ಯವನ್ನು ಪೂರೈಸುವಲ್ಲಿ ಮಂಡಳಿ ವಿಫಲವಾಗಿದೆ ಎಂದು ಐಸಿಸಿ ತನ್ನ ಹೇಳಿಕೆಯಲ್ಲಿ ತಿಳಿಸಿದೆ.

371039.6

ಅಮಾನತುಗೊಳಿಸುವಿಕೆಯ ಷರತ್ತುಗಳನ್ನು ಐಸಿಸಿ ಮಂಡಳಿಯು ಸರಿಯಾದ ಸಮಯದಲ್ಲಿ ನಿರ್ಧರಿಸುತ್ತದೆ. ನವೆಂಬರ್‌ 21 ರಂದು ಐಸಿಸಿ ಮತ್ತೆ ಸಭೆ ಸೇರಲಿದೆ. ಸಭೆಯ ನಂತರ ಮುಂದಿನ ಕ್ರಮವು ಸ್ಪಷ್ಟವಾಗುವ ನಿರೀಕ್ಷೆಯಿದೆ. ಅಲ್ಲಿಯವರೆಗೆ ಐಸಿಸಿ ಸಂಘಟಿಸುವ ಯಾವುದೇ ಟೂರ್ನಿಯಲ್ಲಿ ಶ್ರೀಲಂಕಾ ಭಾಗವಹಿಸಲು ಅವಕಾಶ ಇಲ್ಲ‌.

2023ರ ಏಕದಿನ ವಿಶ್ವಕಪ್‌ ಟೂರ್ನಿಯಲ್ಲಿ ಶ್ರೀಲಂಕಾ ತಂಡ 9 ಪಂದ್ಯಗಳ ಪೈಕಿ ಕೇವಲ 2ರಲ್ಲಿ ಮಾತ್ರ ಗೆಲುವು ಸಾಧಿಸಿದ್ದು, 4 ಅಂಕ ಪಡೆದುಕೊಂಡಿತ್ತು. ಬ್ಯಾಟಿಂಗ್‌ ಬೌಲಿಂಗ್‌ ಹಾಗೂ ಕಳಪೆ‌ ಫೀಲ್ಡಿಂಗ್‌ನಿಂದಾಗಿ ವಿಶ್ವಕಪ್‌ನಲ್ಲಿ ಸೋಲು ಅನುಭವಿಸಿದೆ.

ಈ ನಡುವೆ ಬಾಂಗ್ಲಾದೇಶ ವಿರುದ್ಧದ ಪಂದ್ಯದಲ್ಲಿ ಹಿರಿಯ ಆಟಗಾರ ಆ್ಯಂಜೆಲೋ ಮ್ಯಾಥ್ಯೂಸ್‌ ‘ಟೈಮ್ಡ್ ಔಟ್’ ವಿವಾದವು ಭಾರೀ ಸುದ್ದಿಯಾಗಿತ್ತು.

ಶ್ರೀಲಂಕಾದ ಎಲ್ಲ ಲೀಗ್‌ ಪಂದ್ಯಗಳು ಮುಗಿದ ಹಿನ್ನೆಲೆಯಲ್ಲಿ ಶ್ರೀಲಂಕಾ ತಂಡ ತವರಿಗೆ ಮರಳಿದೆ.

ಏಕದಿನ ವಿಶ್ವಕಪ್‌ನಲ್ಲಿ ಶ್ರೀಲಂಕಾದ ಹೀನಾಯ ಪ್ರದರ್ಶನವು “ಹೊರಗಿನ ಪಿತೂರಿಯ ಫಲಿತಾಂಶ” ಎಂದು ಮುಖ್ಯ ಆಯ್ಕೆಗಾರ ಪ್ರಮೋದಯ ವಿಕ್ರಮಸಿಂಘೆ ಆರೋಪಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...