ಸಿಎಸ್‌ಕೆ ಸೋಲುತ್ತಿದ್ದರೂ ಮಹೇಂದ್ರ ಸಿಂಗ್ ಧೋನಿ ನಿವೃತ್ತಿಯಾಗುತ್ತಿಲ್ಲವೆಂಬ ಪ್ರಶ್ನೆಗೆ ಸ್ಪಷ್ಟ ಉತ್ತರ ಬಂತು!

Date:

ಸಿಎಸ್‌ಕೆ ತಂಡದಲ್ಲಿ ಸ್ಟಾರ್‌ ಆಟಗಾರ ಮಹೇಂದ್ರ ಸಿಂಗ್‌ ಧೋನಿ ಇದ್ದರೂ ತಂಡ ಸತತ ಸೋಲು ಕಾಣುತ್ತಿದೆ. ಐದು ಬಾರಿಯ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಇಂಡಿಯನ್ ಪ್ರೀಮಿಯರ್ ಲೀಗ್ 2025 ರ ಆವೃತ್ತಿಯಲ್ಲಿ ವೈಫಲ್ಯ ಅನುಭವಿಸುತ್ತಿದೆ. ಈ ಋತುವಿನಲ್ಲಿ ಸಿಎಸ್‌ಕೆ ತನ್ನ ನಾಲ್ಕನೇ ಪಂದ್ಯವನ್ನು ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಆಡಿತ್ತು, ಇದರಲ್ಲಿ 25 ರನ್‌ಗಳಿಂದ ಸೋತಿದೆ.

ಈ ಪಂದ್ಯವು ಧೋನಿಗೆ ತುಂಬಾ ಮಹತ್ವದ್ದಾಗಿತ್ತು. ಚೆನ್ನೈನ ಎಂಎ ಚಿದಂಬರಂ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ ಈ ಪಂದ್ಯವನ್ನು ವೀಕ್ಷಿಸಲು ಅವರ ಇಡೀ ಕುಟುಂಬ ಬಂದಿತ್ತು. ಧೋನಿ ಅವರ ಪತ್ನಿ ಸಾಕ್ಷಿ ಮತ್ತು ಮಗಳು ಜೀವಾ ಮತ್ತು ಅವರ ಪೋಷಕರು ಕ್ರೀಡಾಂಗಣದಲ್ಲಿ ಉಪಸ್ಥಿತರಿದ್ದರು. ಇಡೀ ಕುಟುಂಬದ ಉಪಸ್ಥಿತಿಯಿಂದಾಗಿ, ಧೋನಿ ತನ್ನ ತವರು ನೆಲದಲ್ಲಿ ತನ್ನ ಕೊನೆಯ ಪಂದ್ಯವನ್ನು ಆಡುತ್ತಿದ್ದಾರೆ ಎಂಬ ಬಗ್ಗೆ ಸಾಮಾಜಿಕ ಮಾಧ್ಯಮದಲ್ಲಿ ಚರ್ಚೆಗಳು ಕೂಡ ತೀವ್ರಗೊಂಡವು. ಒಂದಷ್ಟು ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸಿದರು, ಮತ್ತಷ್ಟು ಮಂದಿ ಧೋನಿ ನಿವೃತ್ತಿ ಘೋಷಿಸಲಿದ್ದಾರೆ ಎಂದು ಪೋಸ್ಟ್‌ ಮಾಡಿದ್ದರು.

ಈ ಪಂದ್ಯದಲ್ಲಿ, ಮಹೇಂದ್ರ ಸಿಂಗ್ ಧೋನಿ ಸಿಎಸ್‌ಕೆ ಪರ 26 ಚೆಂಡುಗಳಲ್ಲಿ 30 ರನ್‌ಗಳ ನಿಧಾನಗತಿಯ ಇನಿಂಗ್ಸ್ ಆಡಿದರು. ಇನಿಂಗ್ಸ್‌ನ 11 ನೇ ಓವರ್‌ನಿಂದ ಕೊನೆಯವರೆಗೂ ಧೋನಿ ಸಿಎಸ್‌ಕೆ ಪರ ಬ್ಯಾಟಿಂಗ್ ಮಾಡಿದರೂ ತಂಡವನ್ನು ಗೆಲುವಿನತ್ತ ಕೊಂಡೊಯ್ಯಲು ಸಾಧ್ಯವಾಗಲಿಲ್ಲ. 26 ಚೆಂಡುಗಳಲ್ಲಿ 1 ಸಿಕ್ಸರ್‌, ಒಂದು ಬೌಂಡರಿಯೊಂದಿಗೆ ಅಜೇಯ 30 ರನ್‌ ಮಾತ್ರ ಕಲೆ ಹಾಕಿದರು. ಅಭಿಮಾನಿಗಳ ನಿರೀಕ್ಷೆಗಳಂತೆ ಧೋನಿ ಆಡಲಿಲ್ಲ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? CSK vs DC | ಸ್ಟೇಡಿಯಂನಲ್ಲಿ ಕಾಣಿಸಿಕೊಂಡ ಧೋನಿ ಪೋಷಕರು; ಎಂಎಸ್‌ಡಿ ನಿವೃತ್ತಿ ಕುರಿತು ಭಾರೀ ಚರ್ಚೆ

ಆದರೆ ಈ ಎಲ್ಲ ಊಹಾಪೋಹಗಳಿಗೆ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಮುಖ್ಯ ಕೋಚ್ ಸ್ಟೀಫನ್ ಫ್ಲೆಮಿಂಗ್ ತೆರೆ ಎಳೆದಿದ್ದಾರೆ. ಮಹೇಂದ್ರ ಸಿಂಗ್ ಧೋನಿ ಐಪಿಎಲ್‌ನಲ್ಲಿ ಇನ್ನೂ ಬಲಿಷ್ಠವಾಗಿ ಆಡುತ್ತಿದ್ದು, ಅವರ ವೃತ್ತಿಜೀವನವನ್ನು ಕೊನೆಗೊಳಿಸುವ ಪಾತ್ರವನ್ನು ಅವರಿಗೆ ನೀಡಲಾಗಿಲ್ಲ ಎಂದು ಹೇಳಿದ್ದಾರೆ. ದೆಹಲಿ ವಿರುದ್ಧದ ಸೋಲಿನ ನಂತರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಫ್ಲೆಮಿಂಗ್, ‘‘ಇಲ್ಲ, ಅವರ ಪ್ರಯಾಣವನ್ನು ಕೊನೆಗೊಳಿಸುವುದು ನನ್ನ ಕೆಲಸವಲ್ಲ. ನಾನು ಅವರೊಂದಿಗೆ ಕೆಲಸ ಮಾಡುವುದನ್ನು ಆನಂದಿಸುತ್ತೇನೆ. ಧೋನಿ ಇನ್ನೂ ಬಲಶಾಲಿಯಾಗಿದ್ದಾರೆ. ನಾನು ಅವರಲ್ಲಿ ವಿದಾಯದ ಬಗ್ಗೆ ಕೇಳುವುದೇ ಇಲ್ಲ. ಇದರ ಬಗ್ಗೆ ಕೇಳುವವರು ನೀವುಗಳೇ’’ ಎಂದು ಹೇಳಿದ್ದಾರೆ.

ಸ್ಟೀಫನ್ ಫ್ಲೆಮಿಂಗ್ ಧೋನಿಯನ್ನು ಸಮರ್ಥಿಸಿಕೊಂಡು ಆ ಸಮಯದಲ್ಲಿ ಬ್ಯಾಟಿಂಗ್ ಮಾಡುವುದು ನಿಜವಾಗಿಯೂ ಕಷ್ಟಕರವಾಗಿತ್ತು ಎಂದು ಹೇಳಿದ್ದಾರೆ. ‘‘ಧೋನಿ ಆಡುವ ಉತ್ಸಾಹವನ್ನು ತೋರಿಸಿದ್ದಾರೆ. ಅವರು ಕ್ರೀಸ್ ತಲುಪಿದಾಗ ಚೆಂಡು ಸ್ವಲ್ಪ ನಿಂತು ಬರುತ್ತಿತ್ತು. ಆ ಸಂದರ್ಭ ಬ್ಯಾಟಿಂಗ್ ಮಾಡುವುದು ಕಷ್ಟ ಎಂದು ನಾನು ಭಾವಿಸುತ್ತೇನೆ. ಮೊದಲಾರ್ಧದಲ್ಲಿ ಆಟ ಚೆನ್ನಾಗಿರುತ್ತದೆ ಮತ್ತು ನಂತರ ಕ್ರಮೇಣ ನಿಧಾನವಾಗುತ್ತದೆ. ಅವರು ಪರಿಸ್ಥಿತಿಯನ್ನು ಪರಿಗಣಿಸಿ ನಿಜವಾಗಿಯೂ ಉತ್ತಮವಾಗಿ ಆಡಿದರು. ವಿಜಯ್ ಶಂಕರ್ ಕೂಡ ತಮ್ಮ ಇನಿಂಗ್ಸ್‌ನಲ್ಲಿ ಸರಿಯಾಗಿ ಆಡಲು ಹೆಣಗಾಡಿದರು. 12 ರಿಂದ 16 ಓವರ್‌ಗಳ ಆ ಅವಧಿ ಎಲ್ಲರಿಗೂ ಕಷ್ಟಕರವಾಗಿತ್ತು. ಆ ಸಂದರ್ಭದಲ್ಲಿ ಆಡುವುದು ಖಂಡಿತವಾಗಿಯೂ ಕಷ್ಟಕರವಾಗಿತ್ತು. ಅದಕ್ಕಾಗಿಯೇ ನಮ್ಮ ಪ್ರಯತ್ನಗಳ ಹೊರತಾಗಿಯೂ ಪಂದ್ಯವು ನಮ್ಮ ಕೈತಪ್ಪಿತು’’ ಎಂದು ಹೇಳಿದ್ದಾರೆ.

image 48 4
eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...