ಸೂರ್ಯ ಕುಮಾರ್‌ ಯಾದವ್‌ ಸ್ಫೋಟಕ ಆಟ; ವಿಂಡೀಸ್‌ ವಿರುದ್ಧ ಟಿ20 ಸರಣಿ ಜೀವಂತವಾಗಿರಿಸಿಕೊಂಡ ಭಾರತ

Date:

ವೆಸ್ಟ್ ಇಂಡೀಸ್ ವಿರುದ್ಧ ನಡೆಯುತ್ತಿರುವ ಮೂರನೇ ಟಿ20 ನಿರ್ಣಾಯಕ ಪಂದ್ಯದಲ್ಲಿ ಭಾರತ ತಂಡ 7 ವಿಕೆಟ್‌ಗಳ ಗೆಲುವು ದಾಖಲಿಸಿ ಸರಣಿಯನ್ನು ಜೀವಂತವಾಗಿರಿಸಿಕೊಂಡಿದೆ.

ವಿಂಡೀಸ್‌ ನೀಡಿದ 160 ರನ್‌ ಗುರಿ ಬೆನ್ನಟ್ಟಿದ ಭಾರತ ತಂಡ ಸೂರ್ಯಕುಮಾರ್‌ ಯಾದವ್‌ (83) ಸ್ಪೋಟಕ ಬ್ಯಾಟಿಂಗ್‌ ಹಾಗೂ ತಿಲಕ್ ವರ್ಮಾ ಅವರ ಅಜೇಯ 49 ರನ್‌ಗಳ ಆಟದಿಂದ 17.5 ಓವರ್‌ಗಳಲ್ಲಿ 3 ವಿಕೆಟ್ ಕಳೆದುಕೊಂಡು ಜಯ ಪಡೆಯಿತು.

ಆರಂಭಿಕರಾದ ಯಶಸ್ವಿ ಜೈಸ್ವಾಲ್ ಹಾಗೂ ಶುಭಮನ್‌ ಗಿಲ್‌ ಬೇಗನೇ ಔಟಾದರೂ 44 ಚೆಂಡುಗಳಲ್ಲಿ 10 ಬೌಂಡರಿ, 4 ಸಿಕ್ಸರ್‌ನೊಂದಿಗೆ ಅದ್ಭುತ ಬ್ಯಾಟಿಂಗ್‌ ಆಡಿ 83 ರನ್‌ ಸಿಡಿಸಿದ ಸೂರ್ಯಕುಮಾರ್‌ ಯಾದವ್‌ ಗೆಲುವಿನ ರೂವಾರಿಯಾದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಯಾದವ್‌ 13ನೇ ಓವರ್‌ನಲ್ಲಿ ಔಟಾಗಿ ಪೆವಿಲಿಯನ್‌ಗೆ ತೆರಳಿದ ನಂತರ ಯುವ ಆಟಗಾರ ತಿಲಕ್‌ ವರ್ಮಾ ಅಜೇಯ 49 ಹಾಗೂ ನಾಯಕ ಹಾರ್ದಿಕ್‌ ಪಾಂಡ್ಯ ಅಜೇಯ 20 ರನ್‌ ಗಳಿಸಿ ಭಾರತ ತಂಡಕ್ಕೆ ಜಯದ ದಡ ಸೇರಿಸಿದರು.

ಇದಕ್ಕೂ ಮೊದಲು ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ನಡೆಸಿದ ವೆಸ್ಟ್ ಇಂಡೀಸ್, ನಿಗದಿತ 20 ಓವರ್‌ಗಳಲ್ಲಿ ಐದು ವಿಕೆಟ್ ನಷ್ಟಕ್ಕೆ 159 ರನ್ ಗಳಿಸಿತು.ವಿಂಡೀಸ್ ಪರ ನಾಯಕ ರೋವ್ಮನ್ ಪೊವೆಲ್ ಕೇವಲ 19 ಎಸೆತಗಳಲ್ಲಿ ಮೂರು ಸಿಕ್ಸರ್ ಹಾಗೂ ಒಂದು ಬೌಂಡರಿ ನೆರವಿನಿಂದ 40 ರನ್ ಗಳಿಸಿ ಔಟಾಗದೆ ಉಳಿದರು.

ಈ ಸುದ್ದಿ ಓದಿದ್ದೀರಾ? ಟಿ20 | ಮತ್ತೆ ಎಡವಿದ ಭಾರತ; ಎರಡನೇ ಪಂದ್ಯದಲ್ಲೂ ವಿಂಡೀಸ್‌ಗೆ ರೋಚಕ ಗೆಲುವು

ಆರಂಭಿಕರಾದ ಬ್ರಂಡನ್ ಕಿಂಗ್ ಹಾಗೂ ಕೈಲ್ ಮೇಯರ್ಸ್ ಮೊದಲ ವಿಕೆಟ್ಗೆ 55 ರನ್ ಒಟ್ಟು ಸೇರಿಸಿದರು. ಬ್ರಂಡನ್ 42 ಹಾಗೂ ಮೇಯರ್ಸ್ 25 ರನ್ ಗಳಿಸಿದರು. ನಿಕೋಲಸ್ ಪೂರನ್ 20 ರನ್‌ಗಳ ಕಾಣಿಕೆ ನೀಡಿದರು. ಇನ್ನುಳಿದಂತೆ ಜಾನ್ಸನ್ ಕಾರ್ಲ್ಸ್ 12, ಶಿಮ್ರಾನ್ ಹೆಟ್ಮೆಯರ್ 9 ಹಾಗೂ ರೊಮರಿಯೊ ಶೆಫರ್ಡ್ ಅಜೇಯ 2 ರನ್ ಗಳಿಸಿದರು.

ಭಾರತದ ಪರ ಕುಲದೀಪ್‌ ಯಾದವ್ ಮೂರು ವಿಕೆಟ್ ಕಬಳಿಸಿ ಯಶಸ್ವಿ ಬೌಲರ್‌ ಎನಿಸಿದರು. ಇನ್ನುಳಿದಂತೆ ಅಕ್ಷರ್‌ ಪಟೇಲ್‌ ಮತ್ತು ಮುಕೇಶ್ ಕುಮಾರ್ ತಲಾ ಒಂದೊಂದು ವಿಕೇಟ್ ಪಡೆದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...