ಏಷ್ಯಾಕಪ್ ಟೂರ್ನಿಯ ಸಂಭಾವನೆ ಸೇನೆಗೆ ಸಮರ್ಪಿಸಿದ ಸೂರ್ಯಕುಮಾರ್ ಯಾದವ್

Date:

ಏಷ್ಯಾಕಪ್ ಜಯಿಸಿದ ಭಾರತ ತಂಡದ ನಾಯಕ ಸೂರ್ಯಕುಮಾರ್ ಯಾದವ್ ಪಂದ್ಯದ ಕೊನೆಗೆ ಇಡೀ ಟೂರ್ನಿಯ ಸಂಭಾವನೆಯನ್ನು ಭಾರತೀಯ ಸೇನೆಗೆ ಸಮರ್ಪಿಸುವುದಾಗಿ ಘೋಷಿಸಿದರು. ಜತೆಗೆ ಚಾಂಪಿಯನ್ನರ ಟ್ರೋಫಿ ಹಸ್ತಾಂತರಿಸಲು ನಿರಾಕರಿಸಿದ ಏಷ್ಯನ್ ಕ್ರಿಕೆಟ್ ಮಂಡಳಿಯ ಕ್ರಮದ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.

“ನಾನು ಕ್ರಿಕೆಟ್ ಆಡಲು ಆರಂಭಿಸಿದಾಗಿನಿಂದ ಚಾಂಪಿಯನ್ ತಂಡಕ್ಕೆ ಟ್ರೋಫಿ ನಿರಾಕರಿಸಿದ್ದನ್ನು ಎಲ್ಲೂ ನೋಡಿರಲು ಸಾಧ್ಯವಿಲ್ಲ. ಅದು ಕೂಡಾ ಕಷ್ಟಪಟ್ಟು ಜಯಿಸಿದ್ದನ್ನು” ಎಂದು ಎಸ್ಕೆವೈ ಪಂದ್ಯದ ಬಳಿಕ ನುಡಿದರು. ಇಡೀ ಟೂರ್ನಿಯಲ್ಲಿ ಅಜೇಯ ಅಭಿಯಾನ ಮುಂದುವರಿಸಿದ ಭಾರತ, ಪಾಕಿಸ್ತಾನವನ್ನು ಟೂರ್ನಿಯಲ್ಲಿ ಮೂರು ಬಾರಿ ಸೋಲಿಸಿದೆ. ಆದರೆ ಭಾರತದ ಈ ಸಂಭ್ರಮಾಚರಣೆಯ ನಡುವೆ ಟ್ರೋಫಿ ಪ್ರದಾನ ಇರಲಿಲ್ಲ.

ನನ್ನ ಮಟ್ಟಿಗೆ ನಿಜವಾದ ಟ್ರೋಫಿಗಳು ಡ್ರೆಸ್ಸಿಂಗ್ ರೂಂನಲ್ಲಿವೆ. ನನ್ನ 14 ಮಂದಿ ಸಹ ಆಟಗಾರರು ಹಾಗೂ ಬೆಂಬಲ ಸಿಬ್ಬಂದಿ. ಅವರ ಕಾರಣದಿಂದ ನಾವು ಪ್ರಶಸ್ತಿ ಗೆದ್ದಿದ್ದೇವೆ. ಆದಾಗ್ಯೂ ಕಷ್ಟಪಟ್ಟು ಟೂರ್ನಿ ಜಯಿಸಿದರೂ ಟ್ರೋಫಿ ಪಡೆಯದೇ ಇರುವುದನ್ನು ನಾನು ಎಂದೂ ನೊಡಿಲ್ಲ” ಎಂದು ಅಭಿಪ್ರಾಯಪಟ್ಟರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಏಪ್ಯಾ ಕಪ್ ಫೈನಲ್ : ಪಾಕ್ ವಿರುದ್ಧ ಟೀಮ್ ಇಂಡಿಯಾಗೆ ರೋಚಕ ಜಯ; 9ನೇ ಬಾರಿ ಚಾಂಪಿಯನ್

ಆದರೆ ಇದರಿಂದ ತಮ್ಮ ನಾಯಕತ್ವದ ಮೇಲೆ ಯಾವ ಪರಿಣಾಮವೂ ಬೀರುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದರು. “ಟ್ರೋಫಿ ಜಯಿಸುವುದು ಕಷ್ಟವಾಗಲಿಲ್ಲ. ಹುಡುಗರು ಬಹಳಷ್ಟು ಶ್ರಮ ವಹಿಸಿದರು. ಟೂರ್ನಿಯ ಸಾಧನೆ ಬಗ್ಗೆ ಎಲ್ಲರಿಗೂ ಸಂತಸವಿದೆ” ಎಂದು ಬಣ್ಣಿಸಿದರು.

“ಆರಂಭದಿಂದಲೇ ಮೈದಾನದಲ್ಲಿ ಕ್ರಿಕೆಟ್ ಬಗ್ಗೆ ಮಾತ್ರ ಗಮನ ಹರಿಸಿ ಎಂದು ಹೇಳಿದ್ದೆ. ಅಭ್ಯಾಸದ ವೇಳೆ ನಾವು ಏನು ಮಾಡಬೇಕೋ ಅದನ್ನು ಆಸ್ವಾದಿಸೋಣ ಮತ್ತು ಅದನ್ನು ಪಂದ್ಯದಲ್ಲೂ ಮಾಡಬೇಕು” ಎಂದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...