ಟಿ20 ವಿಶ್ವಕಪ್ | ಸೂಪರ್ 8ರ ಮೊದಲ ಪಂದ್ಯ; ಅಫ್ಘಾನಿಸ್ತಾನ ವಿರುದ್ಧ ಟೀಮ್ ಇಂಡಿಯಾಕ್ಕೆ ಭರ್ಜರಿ ಜಯ

Date:

ಟಿ20 ವಿಶ್ವಕಪ್‌ನ ಸೂಪರ್ 8ರ ಹಂತದ ಮೊದಲ ಪಂದ್ಯದಲ್ಲಿ ಟೀಮ್ ಇಂಡಿಯಾವು ಅಫ್ಘಾನಿಸ್ತಾನದ ವಿರುದ್ಧ ಭರ್ಜರಿ ಗೆಲುವು ದಾಖಲಿಸಿದೆ.

ಬಾರ್ಬಡೋಸ್‌ನ ಕೆನ್ಸಿಂಗ್ಟನ್ ಓವಲ್ ಕ್ರೀಡಾಂಗಣದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ್ದ ರೋಹಿತ್ ಶರ್ಮಾ ಬಳಗ, ಆರಂಭಿಕ ಆಘಾತದ ಹೊರತಾಗಿಯೂ ಸೂರ್ಯ ಕುಮಾರ್ ಬಾರಿಸಿದ ಅರ್ಧಶತಕದ ನೆರವಿನಿಂದ ನಿಗದಿತ 20 ಓವರ್‌ಗಳಲ್ಲಿ 7 ವಿಕೆಟ್ ಕಳೆದುಕೊಂಡು 181 ರನ್ ಗಳಿಸಿತ್ತು. ಆ ಮೂಲಕ ಅಫ್ಘಾನಿಸ್ತಾನ ತಂಡಕ್ಕೆ ಸವಾಲಿನ ಗುರಿ ನೀಡಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಗುರಿಯನ್ನು ಬೆನ್ನಟ್ಟುವಲ್ಲಿ ವಿಫಲವಾದ ರಶೀದ್ ಖಾನ್ ನೇತೃತ್ವದ ಅಫ್ಘಾನಿಸ್ತಾನ ತಂಡವು ನಿಗದಿತ 20 ಓವರ್‌ಗಳಲ್ಲಿ 134 ರನ್ ಗಳಿಸುವಷ್ಟರಲ್ಲಿ ಆಲೌಟ್ ಆಯಿತು. ಟೀಮ್ ಇಂಡಿಯಾವು 47 ರನ್‌ಗಳ ಭರ್ಜರಿ ಜಯ ದಾಖಲಿಸಿತು.

ಜಸ್ಪೀತ್ ಬುಮ್ರಾ ನೇತೃತ್ವದ ಟೀಮ್ ಇಂಡಿಯಾದ ಬೌಲರ್‌ಗಳ ದಾಳಿಗೆ ರನ್ ಗಳಿಸಲು ಪರದಾಡಿದ ಅಫ್ಘಾನಿಸ್ತಾನದ ಬ್ಯಾಟರ್‌ಗಳು, 47 ರನ್‌ಗಳಿಂದ ಸೋಲೊಪ್ಪಿಕೊಂಡರು. ಅಫ್ಘಾನ್ ಪರ 26 ರನ್ ಗಳಿಸುವ ಮೂಲಕ ಅಝ್ಮತುಲ್ಲಾ ಒಮರ್ ಝಾಯ್ ಗರಿಷ್ಠ ಸ್ಕೋರರ್ ಎನಿಸಿಕೊಂಡರು.

ಉಳಿದಂತೆ ನಜೀಬುಲ್ಲಾ ಝದ್ರಾನ್ 19, ಗುಲಾಮ್ ನೈಬ್ 17 ಹಾಗೂ ಮೊಹಮ್ಮದ್ ನಬಿ 14 ರನ್ ಗಳಿಸಲಷ್ಟೇ ಶಕ್ತರಾದರು.

ಟೀಮ್ ಇಂಡಿಯಾ ಪರ ಉತ್ತಮ ಬೌಲಿಂಗ್ ದಾಳಿ ನಡೆಸಿದ ಜಸ್ಪೀತ್ ಬುಮ್ರಾ ಕೇವಲ 7 ರನ್ ನೀಡಿ ಮೂರು ವಿಕೆಟ್ ಕಿತ್ತು ಮಿಂಚಿದರು. ಎಡಗೈ ಬೌಲರ್ ಅರ್ಷ್‌ದೀಪ್ ಸಿಂಗ್ 36ಕ್ಕೆ 3 ವಿಕೆಟ್ ಕಿತ್ತರೆ, ಕುಲ್‌ದೀಪ್ ಯಾದವ್ 2 ವಿಕೆಟ್ ಪಡೆಯುವಲ್ಲಿ ಸಫಲರಾದರು. ಉಳಿದಂತೆ ರವೀಂದ್ರ ಜಡೇಜಾ ಹಾಗೂ ಅಕ್ಷರ್ ಪಟೇಲ್ ತಲಾ ಒಂದೊಂದು ವಿಕೆಟ್ ಪಡೆದರು.

ಅರ್ಧಶತಕ ಗಳಿಸಿ ಮಿಂಚಿದ ಸೂರ್ಯಕುಮಾರ್ ಯಾದವ್

ಟಾಸ್ ಗೆದ್ದು ಮೊದಲು ಬ್ಯಾಟ್ ಬೀಸಿದ ಟೀಮ್ ಇಂಡಿಯಾ, ಉತ್ತಮ ಆರಂಭ ಪಡೆಯುವಲ್ಲಿ ವಿಫಲವಾಯಿತು. ಮೂರನೇ ಓವರ್‌ನಲ್ಲಿ ನಾಯಕ ರೋಹಿತ್ ಶರ್ಮಾ ಔಟಾದರು. 13 ಎಸೆತಗಳಲ್ಲಿ ಕೇವಲ 8 ರನ್ ಗಳಿಸಿ ಫಜಲ್‍ಹಕ್ ಫಾರೂಕಿಗೆ ವಿಕೆಟ್ ಒಪ್ಪಿಸಿದರು.

ಇನ್ನೂ ರೋಹಿತ್ ವಿಕೆಟ್ ಪತನದ ಬೆನ್ನಲ್ಲೇ ಕ್ರೀಸ್‍ಗಿಳಿದ ರಿಷಭ್ ಪಂತ್ ಕೇವಲ 11 ಎಸೆತಗಳಲ್ಲಿ 20 ರನ್ ಗಳಿಸಿ ವಿಕೆಟ್ ಒಪ್ಪಿಸಿದರೆ, ವಿರಾಟ್ ಕೊಹ್ಲಿ 24 ಎಸೆತಗಳಲ್ಲಿ 24 ರನ್ ಗಳಿಸಿ ವಿಕೆಟ್ ಒಪ್ಪಿಸಿದರು. ಶಿವಂ ದುಬೆ ಕೇವಲ 10 ರನ್ ಗಳಿಸಿದರು.

90 ರನ್‍ಗಳಿಸಿ 4 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದ್ದ ಟೀಮ್ ಇಂಡಿಯಾಕ್ಕೆ 5ನೇ ವಿಕೆಟ್‍ಗೆ ಹಾರ್ದಿಕ್ ಪಾಂಡ್ಯ ಹಾಗೂ ಸೂರ್ಯಕುಮಾರ್ ಯಾದವ್ ಕೇವಲ 37 ಎಸೆತಗಳಲ್ಲಿ 60 ರನ್‍ಗಳ ಅಮೂಲ್ಯ ಜೊತೆಯಾಟವಾಡುವ ಮೂಲಕ ತಂಡಕ್ಕೆ ಉತ್ತಮ ರನ್‍ಗಳ ಕೊಡುಗೆ ಕೊಟ್ಟರು.

ಕೇವಲ 28 ಎಸೆತಗಳನ್ನು ಎದುರಿಸಿದ ಸೂರ್ಯ ಕುಮಾರ್ 5 ಬೌಂಡರಿ ಹಾಗೂ 3 ಭರ್ಜರಿ ಸಿಕ್ಸರ್‌ಗಳ ನೆರವಿನಿಂದ 53 ರನ್ ಸಿಡಿಸಿ, ಫಜಲ್‍ಹಕ್ ಫಾರೂಕಿಗೆ ವಿಕೆಟ್ ಒಪ್ಪಿಸಿದರು.

ಇದನ್ನು ಓದಿದ್ದೀರಾ? UGC-NET ಪರೀಕ್ಷೆಯಂತೆ ನೀಟ್ ಪರೀಕ್ಷೆ ರದ್ದು ಮಾಡಲ್ಲ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್

ಹಾರ್ದಿಕ್ ಪಾಂಡ್ಯ 24 ಎಸೆತಗಳನ್ನು ಎದುರಿಸಿ 3 ಬೌಂಡರಿ ಹಾಗೂ 2 ಸಿಕ್ಸರ್ ಸಹಿತ 32 ರನ್ ಬಾರಿಸಿ ನವೀನ್ ಉಲ್ ಹಕ್‍ಗೆ ವಿಕೆಟ್ ಒಪ್ಪಿಸಿದರು. ಕೊನೆಯಲ್ಲಿ ಅಕ್ಷರ್ ಪಟೇಲ್ 12 ರನ್ ಸಿಡಿಸುವ ಮೂಲಕ ತಂಡದ ಮೊತ್ತವನ್ನು 180ರ ಗಡಿ ಮುಟ್ಟಿಸುವಲ್ಲಿ ಯಶಸ್ವಿಯಾದರು.

ಅಫ್ಘಾನಿಸ್ತಾನ ಪರ ನಾಯಕ ರಶೀದ್ ಖಾನ್ ಹಾಗೂ ಫಜಲ್‍ಹಕ್ ಫಾರೂಕಿ ತಲಾ 3 ವಿಕೆಟ್ ಪಡೆದರೆ, ನವೀನ್ ಉಲ್ ಹಕ್ ಒಂದು ವಿಕೆಟ್ ಪಡೆಯುವಲ್ಲಿ ಸಫಲರಾದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...